Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಮಂಜೂರು

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ದೆಹಲಿಯ ರೂಸ್‌ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ 15,000 ವೈಯಕ್ತಿಕ ಬಾಂಡ್ ಮತ್ತು 1 ಲಕ್ಷ ಭದ್ರತಾ ಬಾಂಡ್ ನೀಡುವಂತೆ ಸೂಚಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಪುನರಾವರ್ತಿತ ಸಮನ್ಸ್‌ಗಳನ್ನು ನೀಡಿದ್ದರೂ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗಿರಲಿಲ್ಲ. ಇದರಿಂದಾಗಿ ದೆಹಲಿ ಮುಖ್ಯಮಂತ್ರಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 174ನ್ನು ಉಲ್ಲಂಘಿಸಿದ್ದಾರೆ ಎಂದು ಆಪಾದಿಸಲಾಗಿತ್ತು. ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಇ.ಡಿ ಮ್ಯಾಜಿಸ್ಟ್ರಿಯಲ್‌ ನ್ಯಾಯಾಲಯಕ್ಕೆ ಎರಡು ದೂರು ದಾಖಲಿಸಿತ್ತು.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ 8 ಸಮನ್ಸ್‌ಗಳನ್ನು ನೀಡಿದೆ. ಆದರೆ ವಿಚಾರಣೆಗೆ ಹಾಜರಾಗಿಲ್ಲ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದ ನಂತರ ಎಎಪಿ ಮುಖ್ಯಸ್ಥರಿಗೆ ಸಮನ್ಸ್ ನೀಡಿದೆ.

ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ರೋಸ್ ಅವೆನ್ಯೂ ಕೋರ್ಟ್ ಸೂಚಿಸಿತ್ತು. ಭಾರೀ ಭದ್ರತೆಯ ನಡುವೆ ಕೇಜ್ರಿವಾಲ್ ಮತ್ತು ಅವರ ವಕೀಲ ರಮೇಶ್ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

ಆಮ್ ಆದ್ಮಿ ಪಕ್ಷದ ಸಂಚಾಲಕರೂ ಆದ ಕೇಜ್ರಿವಾಲ್‌ ಅವರು ಈ ಹಿಂದೆ ‘ಈ ಸಮನ್ಸ್‌ಗಳು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಚುನಾವಣಾ ಪ್ರಚಾರಕ್ಕೆ ಹೋಗದಂತೆ ನನ್ನನ್ನು ತಡೆಯುವ ಉದ್ದೇಶದಿಂದ ಸಮನ್ಸ್ ನೀಡಲಾಗಿದೆ’ ಎಂದು ಆರೋಪಿಸಿ ಇ.ಡಿಗೆ ಪತ್ರ ಬರೆದಿದ್ದರು. ನರೇಂದ್ರ ಮೋದಿ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದರು.

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ದೆಹಲಿಯ ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಈ ಮೊದಲು ಬಂಧಿಸಿದ್ದರು. ಇಡಿ ಚಾರ್ಜ್ ಶೀಟ್‌ಗಳಲ್ಲಿ ಕೇಜ್ರಿವಾಲ್ ಅವರ ಹೆಸರು ಉಲ್ಲೇಖಿಸಲಾಗಿದೆ. ಅಬಕಾರಿ ನೀತಿಯ ಕರಡು ರಚನೆ ವೇಳೆ ಪ್ರಕರಣದ ಆರೋಪಿಗಳು ಮುಖ್ಯಮಂತ್ರಿ ಜೊತೆ ಸಂಪರ್ಕದಲ್ಲಿದ್ದರು ಎಂದು ಇಡಿ ಹೇಳಿದೆ.

ಇದನ್ನು ಓದಿ: IT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...