Homeಮುಖಪುಟಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

ಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾನಿಗೆ (ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ) ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮುಖಂಡರು ಪ್ರಧಾನಿ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ನರೇಂದ್ರ ಮೋದಿಯವರು ಫೆಬ್ರವರಿ 14ರಂದು ಜಲಂಧರ್‌ಗೆ ಭೇಟಿ ನೀಡಿದ್ದಾರೆ.

ಫೆಬ್ರವರಿ 16ರಂದು ಪಠಾಣ್‌ಕೋಟ್ ಮತ್ತು ಫೆಬ್ರವರಿ 18ರಂದು ಅಬೋಹರ್‌ಗೆ ಪ್ರಧಾನಿ ಭೇಟಿ ನೀಡಲಿದ್ದು, ಈ ವೇಳೆ ಶಾಂತಿಯುತ ಪ್ರತಿಭಟನೆಗಳನ್ನು ನಡೆಸುವುದಾಗಿ ಎಸ್‌ಕೆಎಂ ನಾಯಕರು ಘೋಷಿಸಿದರು. ರೈತ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ದೆಹಲಿಯ ಗಡಿಯಲ್ಲಿ ವರ್ಷವಿಡೀ ನಡೆದ ರೈತ ಚಳವಳಿಯ ನೇತೃತ್ವ ವಹಿಸಿತ್ತು.

ಪಂಜಾಬ್‌ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರಗಳು ನಡೆಯುತ್ತಲಿವೆ. ಮೋದಿ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ಚುನಾವಣಾ ರ್‍ಯಾಲಿಗಳಿಗಾಗಿ ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 20ರಂದು ಪಂಜಾಬ್ ಚುನಾವಣೆ ನಡೆಯಲಿದೆ.

ನವೆಂಬರ್ 19, 2021ರಂದು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸಿದ ನಂತರ ಪ್ರಧಾನಿ ಮೋದಿಯವರು ಎರಡನೇ ಬಾರಿಗೆ ಪಂಜಾಬ್‌ಗೆ ಭೇಟಿ ನೀಡಿರುವುದು ವಿಶೇಷ. ಪ್ರಧಾನಿಯವರು ಜನವರಿ 5ರಂದು ಫಿರೋಜ್‌ಪುರದಲ್ಲಿ ಬಿಜೆಪಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲು ನಿರ್ಧರಿಸಿದ್ದರು. ಪ್ರತಿಭಟನೆಯ ಕಾರಣ ರ್‍ಯಾಲಿಯನ್ನು ರದ್ದು ಮಾಡಿದ್ದರು.

ಪಂಜಾಬ್‌ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಇತರ ಹಿರಿಯ ನಾಯಕರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಮತ್ತು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಎಸ್‌ಕೆಎಂ ಮುಖಂಡರು ತಿಳಿಸಿದ್ದಾರೆ. ಈ ಬಗ್ಗೆ ಎಸ್ ಕೆಎಂ ಪೋಸ್ಟರ್ ಕೂಡ ಬಿಡುಗಡೆ ಮಾಡಿದೆ.

ಇದನ್ನೂ ಓದಿರಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ದಿ ವೈರ್‌ನೊಂದಿಗೆ ಮಾತನಾಡಿರುವ ಪಂಜಾಬ್‌ನ ಕ್ರಾಂತಿಕಾರಿ ಕಿಸಾನ್ ಒಕ್ಕೂಟದ ನಾಯಕರಾದ ದರ್ಶನ್ ಪಾಲ್, “ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ ಆಶೀಶ್‌ ಮಿಶ್ರಾನಿಗೆ ಜಾಮೀನು ನೀಡಲಾಗಿದೆ. ಅದರ ವಿರುದ್ಧ ನಮ್ಮ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಗುವುದು. ಫಿರೋಜ್‌ಪುರಕ್ಕೆ ಪಿಎಂ ಮೋದಿ ಭೇಟಿಯನ್ನು ವಿರೋಧಿಸಿ ಪ್ರತಿಭಟಿಸಿದ ರೈತರಿಗೆ ನೀಡಲಾದ ಕಿರುಕುಳ ಖಂಡಿಸಲಾಗುವುದು. ಎಂಎಸ್‌ಪಿ ಸಮಿತಿಯನ್ನು ರಚಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಅದನ್ನು ಪ್ರಶ್ನಿಸಲಾಗುತ್ತಿದೆ. ಯುಪಿ, ಹರಿಯಾಣ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ರೈತರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು” ಎಂದು ತಿಳಿಸಿದ್ದಾರೆ.

ಫೆಬ್ರವರಿ 14ರಂದು ಗ್ರಾಮಗಳಲ್ಲಿ ಮೋದಿಯವರ ಪ್ರತಿಕೃತಿಯನ್ನು ದಹಿಸಲಿದ್ದಾರೆ. ಫೆಬ್ರವರಿ 16ರಂದು ಪಂಜಾಬ್‌ನಲ್ಲಿ ಜಿಲ್ಲಾ ಮತ್ತು ತಹಸಿಲ್ ಮಟ್ಟದಲ್ಲಿ ಎಸ್‌ಕೆಎಂ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಪಾಲ್ ಹೇಳಿದ್ದಾರೆ.

ಪ್ರಧಾನಿ ಭೇಟಿಗೂ ಮುನ್ನ ರೈತರ ಬೇಡಿಕೆಗಳನ್ನು ಈಡೇರಿಸುವ ಘೋಷಣೆ ಮಾಡಿದರೆ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಎಸ್‌ಕೆಎಂ ಹಿಂಪಡೆಯಬಹುದು ಎಂದು ರೈತ ಸಂಘದ ಹಿರಿಯ ಮುಖಂಡರು ತಿಳಿಸಿದ್ದಾರೆ. ನಮ್ಮ ಬೇಡಿಕೆಗಳನ್ನು ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಜನವರಿ 5ರಂದು ಫಿರೋಜ್‌ಪುರದ ಪ್ಯಾರಿಯಾನಾ ಗ್ರಾಮದಲ್ಲಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದ್ದ BKU ಕ್ರಾಂತಿಕಾರಿ ಅಧ್ಯಕ್ಷ ಸುರ್ಜಿತ್ ಸಿಂಗ್ ಫೂಲ್, “ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ (SIT) ಲಖಿಂಪುರ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ತಪ್ಪಿತಸ್ಥ ಎಂದು ಘೋಷಿಸಿದೆ. ಗಂಭೀರ ಆರೋಪಗಳನ್ನು ಸಾಬೀತುಪಡಿಸಲು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಜಾಮೀನು ನೀಡಲಾಗಿದೆ. ಸರ್ಕಾರ ನಮ್ಮ ಗಾಯದ ಮೇಲೆ ಉಪ್ಪು ಸವರುತ್ತಿದೆ” ಎಂದಿದ್ದಾರೆ.

ಫಿರೋಜ್‌ಪುರದಲ್ಲಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ವಿರುದ್ಧದ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಫೂಲ್, “ಫಿರೋಜ್‌ಪುರ ಜಿಲ್ಲೆಯ ಕುಲ್ಗಡಿ ಪೊಲೀಸ್ ಠಾಣೆಯಲ್ಲಿ 150 ಅಪರಿಚಿತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈಗ ಪಂಜಾಬ್ ಪೊಲೀಸರು ಜಾಮೀನು ಪಡೆಯುವಂತೆ ರೈತರ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ ನಾವು ಪೊಲೀಸರ ಮೊರೆ ಹೋಗಿ ಜಾಮೀನಿಗೆ ಅರ್ಜಿ ಸಲ್ಲಿಸಲು ನಿರಾಕರಿಸಿದ್ದೇವೆ. ನಮ್ಮ ಯೂನಿಯನ್ ಸದಸ್ಯರನ್ನು ಬಂಧಿಸಿದರೆ ನಾವು ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...