Homeಮುಖಪುಟದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ಸರ್ಕಾರದ ನೀತಿಗಳನ್ನು ತಪ್ಪು ಕಾರಣಕ್ಕಾಗಿ ವಿರೋಧಿಸಿದರೂ ಅದನ್ನು ದೇಶದ್ರೋಹ ಎಂದು ಹೇಳಲಾಗುವುದಿಲ್ಲ. ಪ್ರತಿಭಟಿಸುವ ಹಕ್ಕನ್ನು ಸಂವಿಧಾನವು ನೀಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

- Advertisement -
- Advertisement -
ಬಂಧಿತರ ವಿರುದ್ಧದ 12 ರೀತಿಯ ಸಾಕ್ಷ್ಯಗಳನ್ನು ಎನ್‌ಐಎ ನ್ಯಾಯಾಲಯ ಪರಿಶೀಲಿಸಿ, ಆ ಸಾಕ್ಷಿಗಳು ಅವರಿಗೆ ಜಾಮೀನು ನಿರಾಕರಿಸುವಷ್ಟು ಸಾಕಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ತಲಾ ಒಂದು ಲಕ್ಷ ರೂ.ಗಳ ಜಾಮೀನು ಬಾಂಡ್‌ ನೀಡುವ ಷರತ್ತುಗಳೊಂದಿಗೆ ಜಾಮೀನು ನೀಡಿದೆ.
ಥ್ವಾಹಾ ಫಾಸಲ್ ಮತ್ತು ಅಲನ್ ಶುಹೈಬ್‌ಗೆ ಕಠಿಣ ಷರತ್ತುಗಳೊಂದಿಗೆ ಜಾಮೀನು ನೀಡಿದ ಎನ್‌ಐಎ ನ್ಯಾಯಾಲಯವು ಪ್ರತಿ ತಿಂಗಳ ಮೊದಲ ಶನಿವಾರ ಆಯಾ ಪೊಲೀಸ್ ಠಾಣೆಗಳಿಗೆ ಹಾಜರಾಗುವಂತೆ, ಅವರ ಪಾಸ್‌ಪೋರ್ಟ್‌ಗಳನ್ನು ಶರಣಾಗಿಸುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಸಾಮಾಜಿಕವಾಗಿ ದಬ್ಬಾಳಿಕೆಗೆ ಒಳಗಾಗಿರಬಹುದಾದ ದುರ್ಬಲ ವರ್ಗದ ಜನರು ಸಾಮಾನ್ಯವಾಗಿ ಮಾವೋವಾದಿ ತತ್ವದೆಡೆಗೆ ಆಕರ್ಷಿತರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಭಯೋತ್ಪಾದಕ ಸಂಘಟನೆಯ ಸದಸ್ಯರಂತೆ ಪರಿಗಣಿಸುವುದು ಅಸಾಧ್ಯ ಎಂದು ಎನ್ಐಎ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಕೆ ಭಾಸ್ಕರ್ ರವರು ಅಭಿಪ್ರಾಯಪಟ್ಟಿದ್ದಾರೆ.
ಆರೋಪಿಗಳ ವಿರುದ್ಧದ 12 ಸಾಕ್ಷಿಗಳು, ಕರಪತ್ರಗಳು, ಆರೋಪಿಗಳಿಂದ ವಶಪಡಿಸಿಕೊಂಡ ಬರಹಗಳು, ಸಿಪಿಐ (ಮಾವೋವಾದಿ) ಸಂಸ್ಥೆ ನಡೆಸಿದ ಕಾರ್ಯಕ್ರಮಗಳಲ್ಲಿ ಆರೋಪಿಗಳ ಭಾಗವಹಿಸುವಿಕೆ, ಆರೋಪಿಗಳು ಸಿದ್ಧಪಡಿಸಿದ ಬ್ಯಾನರ್‌ಗಳು, ಆರೋಪಿಗಳಿಂದ ವಶಪಡಿಸಿಕೊಂಡ ಸಾಹಿತ್ಯ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಅಸ್ಥಿರಗೊಳಿಸುವ ಪ್ರಯತ್ನದ ಬರಹಗಳು ಮತ್ತು ಕೋಡ್ ಭಾಷೆಗಳೊಂದಿಗೆ ಫೈಲ್‌ಗಳನ್ನು ನ್ಯಾಯಾಲಯ ಪರಿಶೀಲಿಸಿದೆ.
ಸರ್ಕಾರದ ನೀತಿಗಳನ್ನು ತಪ್ಪು ಕಾರಣಕ್ಕಾಗಿ ವಿರೋಧಿಸಿದರೂ ಅದನ್ನು ದೇಶದ್ರೋಹ ಎಂದು ಹೇಳಲಾಗುವುದಿಲ್ಲ. ಪ್ರತಿಭಟಿಸುವ ಹಕ್ಕನ್ನು ಸಂವಿಧಾನವು ನೀಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಪತ್ರಿಕೋದ್ಯಮ ಮತ್ತು ಕಾನೂನಿನ ವಿದ್ಯಾರ್ಥಿಗಳಾದ ಫಜಲ್ ಮತ್ತು ಶುಹೈಬ್ ಸಿಪಿಐ(ಎಂ) ಬ್ರಾಂಚ್ ಕಮಿಟಿಯ ಸದಸ್ಯರು ಆಗಿದ್ದರು. ಇವರ ಬಂಧನ ಎಡಪಂಥೀಯ ಸರ್ಕಾರವಿರುವ ರಾಜ್ಯದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಆದರೆ ಕೇರಳದ ಸಿಪಿಐ (ಎಂ) ಮಾವೋವಾದಿಗಳೊಂದಿಗಿನ ಸಂಪರ್ಕದ ಹಿನ್ನೆಲೆಯಲ್ಲಿ ಇವರನ್ನು ಪಕ್ಷದಿಂದ ಹೊರಹಾಕಿದೆ.

ಅಲನ್ ಮತ್ತು ಥ್ವಾಹಾ ಅವರಿಗೆ ಜಾಮೀನು ನೀಡಿದ್ದನ್ನು ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಶ್ಲಾಘಿಸಿದ್ದಾರೆ. ಸಿಪಿಎಂನ ದ್ವಿಮುಖ ನೀತಿಗೆ ಇವರಿಬ್ಬರು ಬಲಿಯಾಗಿದ್ದಾರೆ ಎಂದು ಅವರು ಹೇಳಿದರು. ರಾಷ್ಟ್ರೀಯ ಮಟ್ಟದಲ್ಲಿ ಸಿಪಿಎಂ, ಯುಎಪಿಎ ಕಾಯ್ದೆಯನ್ನು ವಿರೋಧಿಸುತ್ತದೆ. ಆದರೆ ತನ್ನದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಈ ಕಾನೂನನ್ನು ಬೆಂಬಲಿಸಿತು ಎಂದು ಸಿಪಿಎಂ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.


ಇದನ್ನೂ ಓದಿ: ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....