Homeಮುಖಪುಟದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ಸರ್ಕಾರದ ನೀತಿಗಳನ್ನು ತಪ್ಪು ಕಾರಣಕ್ಕಾಗಿ ವಿರೋಧಿಸಿದರೂ ಅದನ್ನು ದೇಶದ್ರೋಹ ಎಂದು ಹೇಳಲಾಗುವುದಿಲ್ಲ. ಪ್ರತಿಭಟಿಸುವ ಹಕ್ಕನ್ನು ಸಂವಿಧಾನವು ನೀಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

- Advertisement -
- Advertisement -
ಬಂಧಿತರ ವಿರುದ್ಧದ 12 ರೀತಿಯ ಸಾಕ್ಷ್ಯಗಳನ್ನು ಎನ್‌ಐಎ ನ್ಯಾಯಾಲಯ ಪರಿಶೀಲಿಸಿ, ಆ ಸಾಕ್ಷಿಗಳು ಅವರಿಗೆ ಜಾಮೀನು ನಿರಾಕರಿಸುವಷ್ಟು ಸಾಕಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ತಲಾ ಒಂದು ಲಕ್ಷ ರೂ.ಗಳ ಜಾಮೀನು ಬಾಂಡ್‌ ನೀಡುವ ಷರತ್ತುಗಳೊಂದಿಗೆ ಜಾಮೀನು ನೀಡಿದೆ.
ಥ್ವಾಹಾ ಫಾಸಲ್ ಮತ್ತು ಅಲನ್ ಶುಹೈಬ್‌ಗೆ ಕಠಿಣ ಷರತ್ತುಗಳೊಂದಿಗೆ ಜಾಮೀನು ನೀಡಿದ ಎನ್‌ಐಎ ನ್ಯಾಯಾಲಯವು ಪ್ರತಿ ತಿಂಗಳ ಮೊದಲ ಶನಿವಾರ ಆಯಾ ಪೊಲೀಸ್ ಠಾಣೆಗಳಿಗೆ ಹಾಜರಾಗುವಂತೆ, ಅವರ ಪಾಸ್‌ಪೋರ್ಟ್‌ಗಳನ್ನು ಶರಣಾಗಿಸುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಸಾಮಾಜಿಕವಾಗಿ ದಬ್ಬಾಳಿಕೆಗೆ ಒಳಗಾಗಿರಬಹುದಾದ ದುರ್ಬಲ ವರ್ಗದ ಜನರು ಸಾಮಾನ್ಯವಾಗಿ ಮಾವೋವಾದಿ ತತ್ವದೆಡೆಗೆ ಆಕರ್ಷಿತರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಭಯೋತ್ಪಾದಕ ಸಂಘಟನೆಯ ಸದಸ್ಯರಂತೆ ಪರಿಗಣಿಸುವುದು ಅಸಾಧ್ಯ ಎಂದು ಎನ್ಐಎ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಕೆ ಭಾಸ್ಕರ್ ರವರು ಅಭಿಪ್ರಾಯಪಟ್ಟಿದ್ದಾರೆ.
ಆರೋಪಿಗಳ ವಿರುದ್ಧದ 12 ಸಾಕ್ಷಿಗಳು, ಕರಪತ್ರಗಳು, ಆರೋಪಿಗಳಿಂದ ವಶಪಡಿಸಿಕೊಂಡ ಬರಹಗಳು, ಸಿಪಿಐ (ಮಾವೋವಾದಿ) ಸಂಸ್ಥೆ ನಡೆಸಿದ ಕಾರ್ಯಕ್ರಮಗಳಲ್ಲಿ ಆರೋಪಿಗಳ ಭಾಗವಹಿಸುವಿಕೆ, ಆರೋಪಿಗಳು ಸಿದ್ಧಪಡಿಸಿದ ಬ್ಯಾನರ್‌ಗಳು, ಆರೋಪಿಗಳಿಂದ ವಶಪಡಿಸಿಕೊಂಡ ಸಾಹಿತ್ಯ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಅಸ್ಥಿರಗೊಳಿಸುವ ಪ್ರಯತ್ನದ ಬರಹಗಳು ಮತ್ತು ಕೋಡ್ ಭಾಷೆಗಳೊಂದಿಗೆ ಫೈಲ್‌ಗಳನ್ನು ನ್ಯಾಯಾಲಯ ಪರಿಶೀಲಿಸಿದೆ.
ಸರ್ಕಾರದ ನೀತಿಗಳನ್ನು ತಪ್ಪು ಕಾರಣಕ್ಕಾಗಿ ವಿರೋಧಿಸಿದರೂ ಅದನ್ನು ದೇಶದ್ರೋಹ ಎಂದು ಹೇಳಲಾಗುವುದಿಲ್ಲ. ಪ್ರತಿಭಟಿಸುವ ಹಕ್ಕನ್ನು ಸಂವಿಧಾನವು ನೀಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಪತ್ರಿಕೋದ್ಯಮ ಮತ್ತು ಕಾನೂನಿನ ವಿದ್ಯಾರ್ಥಿಗಳಾದ ಫಜಲ್ ಮತ್ತು ಶುಹೈಬ್ ಸಿಪಿಐ(ಎಂ) ಬ್ರಾಂಚ್ ಕಮಿಟಿಯ ಸದಸ್ಯರು ಆಗಿದ್ದರು. ಇವರ ಬಂಧನ ಎಡಪಂಥೀಯ ಸರ್ಕಾರವಿರುವ ರಾಜ್ಯದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಆದರೆ ಕೇರಳದ ಸಿಪಿಐ (ಎಂ) ಮಾವೋವಾದಿಗಳೊಂದಿಗಿನ ಸಂಪರ್ಕದ ಹಿನ್ನೆಲೆಯಲ್ಲಿ ಇವರನ್ನು ಪಕ್ಷದಿಂದ ಹೊರಹಾಕಿದೆ.

ಅಲನ್ ಮತ್ತು ಥ್ವಾಹಾ ಅವರಿಗೆ ಜಾಮೀನು ನೀಡಿದ್ದನ್ನು ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಶ್ಲಾಘಿಸಿದ್ದಾರೆ. ಸಿಪಿಎಂನ ದ್ವಿಮುಖ ನೀತಿಗೆ ಇವರಿಬ್ಬರು ಬಲಿಯಾಗಿದ್ದಾರೆ ಎಂದು ಅವರು ಹೇಳಿದರು. ರಾಷ್ಟ್ರೀಯ ಮಟ್ಟದಲ್ಲಿ ಸಿಪಿಎಂ, ಯುಎಪಿಎ ಕಾಯ್ದೆಯನ್ನು ವಿರೋಧಿಸುತ್ತದೆ. ಆದರೆ ತನ್ನದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಈ ಕಾನೂನನ್ನು ಬೆಂಬಲಿಸಿತು ಎಂದು ಸಿಪಿಎಂ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.


ಇದನ್ನೂ ಓದಿ: ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...