Homeಕರ್ನಾಟಕಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿಗೆ ಜಾಮೀನು; ಮರು ತನಿಖೆಗೆ ಮುನೀರ್ ಕಾಟಿಪಳ್ಳ ಆಗ್ರಹ

ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿಗೆ ಜಾಮೀನು; ಮರು ತನಿಖೆಗೆ ಮುನೀರ್ ಕಾಟಿಪಳ್ಳ ಆಗ್ರಹ

- Advertisement -
- Advertisement -

ಜಾನುವಾರು ಸಾಗಣೆ ಮಾಡುವ ಸಂದರ್ಭದಲ್ಲಿ ಇದ್ರೀಸ್ ಪಾಷಾ (45) ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಮರು ತನಿಖೆಯ ಮಾಡಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರಿಗೆ ಜಾಮೀನು ಸಿಕ್ಕ ಬಳಿಕ ಪ್ರತಿಕ್ರಿಯಿಸಿದ ಮುನೀರ್ ಅವರು, ”ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಹತ್ಯೆ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಮತ್ತಾತನ ನಟೋರಿಯಸ್ ಗ್ಯಾಂಗ್ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದು ಆಘಾತಕಾರಿ. ಬಿಜೆಪಿ ಸರಕಾರದ ನಿರ್ದೇಶನದಂತೆ ಪೊಲೀಸರು ದುರ್ಬಲ ತನಿಖಾ ವರದಿ ಸಲ್ಲಿಸಿರುವ ಕಾರಣದಿಂದಲೇ ಇಷ್ಟು ಬೇಗ ಜಾಮೀನು ದೊರಕಿದೆ. ಇದು ಕರ್ನಾಟಕ ಪೊಲೀಸರ ವಿಶ್ವಾಸಾರ್ಹತಗೆ ಧಕ್ಕೆ ತಂದಿದೆ. ಕಾಂಗ್ರೆಸ್ ಸರಕಾರ ಅಸ್ಥಿತ್ವಕ್ಕೆ ಬಂದ ತಕ್ಷಣವೇ ಇದ್ರಿಸ್ ಪಾಷಾ ಹತ್ಯೆ ಪ್ರಕರಣದ ಮರು ತನಿಖೆಯ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಕೊಲೆ ಪ್ರಕರಣದ ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರು ಮಂಗಳವಾರ ವಿಚಾರಣೆ ನಡೆಸಿ, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ.ಎನ್. ಪವನ್ ಕುಮಾರ್, ಪಿ. ಲಿಂಗಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ, ಅರುಣ್‌ ಶ್ಯಾಮ್, ”ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಸ್ ಪಾಷಾ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಿದೆ. ಗಂಭೀರ ಗಾಯಗಳ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಪ್ರಕರಣವು ಸಾತನೂರು ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕಿದ್ದು ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ನ್ಯಾಯಪೀಠವು ಈ ವಾದಾಂಶವನ್ನು ಪುರಸ್ಕರಿಸಿ, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ.ಎನ್. ಪವನ್ ಕುಮಾರ್, ಪಿ. ಲಿಂಗಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣವೇನು?:

ಕಳೆದ ಮಾರ್ಚ್ 31ರಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್‌ ಠಾಣೆ ಸಮೀಪ ಅಡ್ಡಗಟ್ಟಿದ್ದ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರು ವಾಹನದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಆ ವಾಹನದಲ್ಲಿದ್ದ ಇದ್ರೀಸ್ ಪಾಷಾ ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ ಅಂದರೆ ಪೊಲೀಸ್‌ ಠಾಣೆಯಿಂದ 100 ಮೀಟರ್‌ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ಅನೇಕ ಅನುಮಾನಗಳಿಗೆ ಕಾರಣವಾಗಿದ್ದು, ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಸಾರ್ವಜನಿಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಪುನೀತ್ ಮತ್ತು ಸಹಚರರಿಂದ ಪಾಷ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಅವರ ಸಹೋದರ ಯೂನುಸ್ ಪಾಷಾ ದೂರು ನೀಡಿದ್ದರು.

ದೂರು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 302, 324, 341, 504, 506 ಜೊತೆಗೆ 34 ಆಟ ಪ್ರಕರಣ ದಾಖಲಾಗಿತ್ತು. ಘಟನೆಯ ಬಳಿಕ ಪುನೀತ್ ಕೆರೆಹಳ್ಳಿ ಮತ್ತು ಉಳಿದ ಆರೋಪಿಗಳು ಪರಾರಿಯಾಗಿದ್ದರು. ಏಪ್ರಿಲ್ 5ರಂದು ಆರೋಪಿಗಳನ್ನು ರಾಜಸ್ಥಾನದ ಬನ್ಸವಾರಾ ಬಳಿ ರಾಮನಗರ ಪೊಲೀಸರು ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ಅಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ರಾಮನಗರಕ್ಕೆ ಕರೆ ತಂದಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕನಕಪುರ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...