Homeಮುಖಪುಟಗರ್ಭಿಣಿ ಮಹಿಳಾ ಖೈದಿಗೆ 6 ತಿಂಗಳು ಜಾಮೀನು: ಇದಕ್ಕೆ ನ್ಯಾಯಾಲಯ ನೀಡಿದ ಸಮರ್ಥನೆ ಏನು?

ಗರ್ಭಿಣಿ ಮಹಿಳಾ ಖೈದಿಗೆ 6 ತಿಂಗಳು ಜಾಮೀನು: ಇದಕ್ಕೆ ನ್ಯಾಯಾಲಯ ನೀಡಿದ ಸಮರ್ಥನೆ ಏನು?

- Advertisement -
- Advertisement -

ಮುಂಬೈ: ಮಾದಕ ವಸ್ತು ಪ್ರಕರಣದಲ್ಲಿ ಬಂಧಿತರಾಗಿರುವ ಗರ್ಭಿಣಿ ಮಹಿಳಾ ಖೈದಿಗೆ ಸೆರೆಮನೆಯ ವಾತಾವರಣವು ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗುವಿಗೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂದು ಉಲ್ಲೇಖಿಸಿ ಮುಂಬೈ ಹೈಕೋರ್ಟ್‌ನ ನಾಗಪುರ ಪೀಠವು ಜಾಮೀನು ಮಂಜೂರು ಮಾಡಿದೆ.

ಏಕ ಸದಸ್ಯ ಪೀಠದ ಉರ್ಮಿಳಾ ಜೋಷಿ ಪಾಲ್ಕೆಯವರು ಈ ಆದೇಶವನ್ನು ನೀಡಿದ್ದು, ಮಹಿಳಾ ಖೈದಿ ಸುರಭಿ ಸೋನಿಯನ್ನು 6 ತಿಂಗಳ ಕಾಲ ತಾತ್ಕಾಲಿಕ ಜಾಮೀನಿನ ಬಿಡುಗಡೆಗೆ ಆದೇಶಿಸಿದ್ದಾರೆ.  ಮಹಿಳೆಯು 2024ರ ಎಪ್ರಿಲ್‌ ನಲ್ಲಿ ಗೊಂಡಿಯಾ ರೈಲ್ವೆ ಭದ್ರತಾ ಪಡೆಯು ರೈಲುವೊಂದರ ಮೇಲೆ ದಾಳಿ ನಡೆಸಿ, ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಸೋನಿಯನ್ನು ಒಳಗೊಂಡಂತೆ ಐವರನ್ನು ಬಂಧಿಸಿದ್ದರು. ಎನ್‌ಡಿಪಿಎಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು  ಎಂದು ಪ್ರಾಸಿಕ್ಯೂಷನ್ ಮೂಲಗಳು ತಿಳಿಸಿವೆ.

ಬಂಧಿತರಿಂದ ಆಗ ಮಾದಕ ವಸ್ತು, 33 ಕಿ.ಗ್ರಾಂ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು ಮತ್ತು ಸೋನಿಯಾ ಬ್ಯಾಗಿನಲ್ಲಿ  ಸುಮಾರು 7 ಕಿ.ಗ್ರಾಂ. ನಷ್ಟು ಮಾದಕ ವಸ್ತು ಪತ್ತೆಯಾಗಿತ್ತು. ಬಂಧನದ ಸಮಯದಲ್ಲಿ ಸೋನಿಯು 2 ತಿಂಗಳ ಗರ್ಭಿಣಿಯಾಗಿದ್ದರು.  ಗರ್ಭಿಣಿಯಾಗಿರುವ ಕಾರಣ ಸೆರೆಮನೆಯಿಂದ ಹೊರಗಡೆ ಮಾನವೀಯ ನೆಲೆಯಲ್ಲಿ ಹೆರಿಗೆಗಾಗಿ ಜಾಮೀನು ನೀಡಬೇಕೆಂದು ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿದ್ದರು.

ವಿಚಾರಣಾ ನ್ಯಾಯಾಲಯವು ಸೋನಿಯಾ ಅರ್ಜಿಯನ್ನು ಮೊದಲು ತಿರಸ್ಕರಿಸಿತ್ತು ಮತ್ತು ಖೈದಿಯ  ಹೆರಿಗೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಹೇಳಿತ್ತು.

ಬಂಧನದಲ್ಲಿರುವಾಗಲೂ ಹೆರಿಗೆಗಾಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಳ್ಳಲು ಸಾಧ್ಯವಿದೆ ಎಂದು ಪೀಠವು ಹೇಳಿತ್ತು. ಆದಾಗ್ಯೂ, ಹೆರಿಗೆ ಸಂದರ್ಭದಲ್ಲಿ ಜೈಲಿನ ವಾತಾವರಣವು ಅರ್ಜಿದಾರೆಯಾಗಿರುವ ಸೋನಿಯ ಮೇಲೆ ಮಾತ್ರವಲ್ಲದೇ ಮಗುವಿನ ಮೇಲೆಯೂ ಇದು  ವ್ಯತಿರಿಕ್ತ ಪರಿಣಾಮ ಬೀರಬಹುದೆಂದು ಹೈಕೋರ್ಟ್ ಪೀಠವು ಹೇಳಿದೆ.

ಖೈದಿಗಳು ಒಳಗೊಂಡಂತೆ ಪರಿಸ್ಥಿತಿಯು ಬೇಡುವ ಘನತೆಗೆ ಯಾವುದೇ ವ್ಯಕ್ತಿಯು ಅರ್ಹರಾಗಿದ್ದಾರೆ. ಜೈಲಿನಲ್ಲಿ ಹೆರಿಗೆ ಸಂದರ್ಭದಲ್ಲಿ ತಾಯಿ ಸೇರಿದಂತೆ ಮಗುವಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಇದನ್ನು ಮಾನವೀಯತೆಯಲ್ಲಿ ಪರಿಗಣಿಸಬೇಕು ಎಂದು ಪೀಠವು ತಿಳಿಸಿದೆ.

ಮೇಲ್ನೋಟಕ್ಕೆ ಆರೋಪಿ ಸೋನಿ ವಿರುದ್ಧ ಅಪರಾಧದ ಕುರಿತು ಸೂಕ್ತ ಸಾಕ್ಷ್ಯಗಳು ದೊರಕಿವೆ. ಈಗಾಗಲೇ ತನಿಖೆಯು ಪೂರ್ಣಗೊಂಡಿದ್ದು, ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಈ ತೀರ್ಪಿನಿಂದ ತನಿಖೆ ಮೇಲೆ ಯಾವುದೇ ಪೂರ್ವಾಗ್ರಹ ಉಂಟಾಗುವುದಿಲ್ಲವೆಂದು ನ್ಯಾಯಾಲಯ ಹೇಳಿದೆ.

ಇದನ್ನು ಓದಿ…ಉತ್ತರಕಾಶಿ ಮಸೀದಿ ವಿವಾದ : ಹಿಂದುತ್ವ ಗುಂಪಿನ ‘ಮಹಾಪಂಚಾಯತ್‌’ಗೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...