Homeಮುಖಪುಟಗರ್ಭಿಣಿ ಮಹಿಳಾ ಖೈದಿಗೆ 6 ತಿಂಗಳು ಜಾಮೀನು: ಇದಕ್ಕೆ ನ್ಯಾಯಾಲಯ ನೀಡಿದ ಸಮರ್ಥನೆ ಏನು?

ಗರ್ಭಿಣಿ ಮಹಿಳಾ ಖೈದಿಗೆ 6 ತಿಂಗಳು ಜಾಮೀನು: ಇದಕ್ಕೆ ನ್ಯಾಯಾಲಯ ನೀಡಿದ ಸಮರ್ಥನೆ ಏನು?

- Advertisement -
- Advertisement -

ಮುಂಬೈ: ಮಾದಕ ವಸ್ತು ಪ್ರಕರಣದಲ್ಲಿ ಬಂಧಿತರಾಗಿರುವ ಗರ್ಭಿಣಿ ಮಹಿಳಾ ಖೈದಿಗೆ ಸೆರೆಮನೆಯ ವಾತಾವರಣವು ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗುವಿಗೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂದು ಉಲ್ಲೇಖಿಸಿ ಮುಂಬೈ ಹೈಕೋರ್ಟ್‌ನ ನಾಗಪುರ ಪೀಠವು ಜಾಮೀನು ಮಂಜೂರು ಮಾಡಿದೆ.

ಏಕ ಸದಸ್ಯ ಪೀಠದ ಉರ್ಮಿಳಾ ಜೋಷಿ ಪಾಲ್ಕೆಯವರು ಈ ಆದೇಶವನ್ನು ನೀಡಿದ್ದು, ಮಹಿಳಾ ಖೈದಿ ಸುರಭಿ ಸೋನಿಯನ್ನು 6 ತಿಂಗಳ ಕಾಲ ತಾತ್ಕಾಲಿಕ ಜಾಮೀನಿನ ಬಿಡುಗಡೆಗೆ ಆದೇಶಿಸಿದ್ದಾರೆ.  ಮಹಿಳೆಯು 2024ರ ಎಪ್ರಿಲ್‌ ನಲ್ಲಿ ಗೊಂಡಿಯಾ ರೈಲ್ವೆ ಭದ್ರತಾ ಪಡೆಯು ರೈಲುವೊಂದರ ಮೇಲೆ ದಾಳಿ ನಡೆಸಿ, ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಸೋನಿಯನ್ನು ಒಳಗೊಂಡಂತೆ ಐವರನ್ನು ಬಂಧಿಸಿದ್ದರು. ಎನ್‌ಡಿಪಿಎಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು  ಎಂದು ಪ್ರಾಸಿಕ್ಯೂಷನ್ ಮೂಲಗಳು ತಿಳಿಸಿವೆ.

ಬಂಧಿತರಿಂದ ಆಗ ಮಾದಕ ವಸ್ತು, 33 ಕಿ.ಗ್ರಾಂ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು ಮತ್ತು ಸೋನಿಯಾ ಬ್ಯಾಗಿನಲ್ಲಿ  ಸುಮಾರು 7 ಕಿ.ಗ್ರಾಂ. ನಷ್ಟು ಮಾದಕ ವಸ್ತು ಪತ್ತೆಯಾಗಿತ್ತು. ಬಂಧನದ ಸಮಯದಲ್ಲಿ ಸೋನಿಯು 2 ತಿಂಗಳ ಗರ್ಭಿಣಿಯಾಗಿದ್ದರು.  ಗರ್ಭಿಣಿಯಾಗಿರುವ ಕಾರಣ ಸೆರೆಮನೆಯಿಂದ ಹೊರಗಡೆ ಮಾನವೀಯ ನೆಲೆಯಲ್ಲಿ ಹೆರಿಗೆಗಾಗಿ ಜಾಮೀನು ನೀಡಬೇಕೆಂದು ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿದ್ದರು.

ವಿಚಾರಣಾ ನ್ಯಾಯಾಲಯವು ಸೋನಿಯಾ ಅರ್ಜಿಯನ್ನು ಮೊದಲು ತಿರಸ್ಕರಿಸಿತ್ತು ಮತ್ತು ಖೈದಿಯ  ಹೆರಿಗೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಹೇಳಿತ್ತು.

ಬಂಧನದಲ್ಲಿರುವಾಗಲೂ ಹೆರಿಗೆಗಾಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಳ್ಳಲು ಸಾಧ್ಯವಿದೆ ಎಂದು ಪೀಠವು ಹೇಳಿತ್ತು. ಆದಾಗ್ಯೂ, ಹೆರಿಗೆ ಸಂದರ್ಭದಲ್ಲಿ ಜೈಲಿನ ವಾತಾವರಣವು ಅರ್ಜಿದಾರೆಯಾಗಿರುವ ಸೋನಿಯ ಮೇಲೆ ಮಾತ್ರವಲ್ಲದೇ ಮಗುವಿನ ಮೇಲೆಯೂ ಇದು  ವ್ಯತಿರಿಕ್ತ ಪರಿಣಾಮ ಬೀರಬಹುದೆಂದು ಹೈಕೋರ್ಟ್ ಪೀಠವು ಹೇಳಿದೆ.

ಖೈದಿಗಳು ಒಳಗೊಂಡಂತೆ ಪರಿಸ್ಥಿತಿಯು ಬೇಡುವ ಘನತೆಗೆ ಯಾವುದೇ ವ್ಯಕ್ತಿಯು ಅರ್ಹರಾಗಿದ್ದಾರೆ. ಜೈಲಿನಲ್ಲಿ ಹೆರಿಗೆ ಸಂದರ್ಭದಲ್ಲಿ ತಾಯಿ ಸೇರಿದಂತೆ ಮಗುವಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಇದನ್ನು ಮಾನವೀಯತೆಯಲ್ಲಿ ಪರಿಗಣಿಸಬೇಕು ಎಂದು ಪೀಠವು ತಿಳಿಸಿದೆ.

ಮೇಲ್ನೋಟಕ್ಕೆ ಆರೋಪಿ ಸೋನಿ ವಿರುದ್ಧ ಅಪರಾಧದ ಕುರಿತು ಸೂಕ್ತ ಸಾಕ್ಷ್ಯಗಳು ದೊರಕಿವೆ. ಈಗಾಗಲೇ ತನಿಖೆಯು ಪೂರ್ಣಗೊಂಡಿದ್ದು, ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಈ ತೀರ್ಪಿನಿಂದ ತನಿಖೆ ಮೇಲೆ ಯಾವುದೇ ಪೂರ್ವಾಗ್ರಹ ಉಂಟಾಗುವುದಿಲ್ಲವೆಂದು ನ್ಯಾಯಾಲಯ ಹೇಳಿದೆ.

ಇದನ್ನು ಓದಿ…ಉತ್ತರಕಾಶಿ ಮಸೀದಿ ವಿವಾದ : ಹಿಂದುತ್ವ ಗುಂಪಿನ ‘ಮಹಾಪಂಚಾಯತ್‌’ಗೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...