Homeರಾಷ್ಟ್ರೀಯಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್‌ ಜುಬೇ‌ರ್‌ಗೆ ಜಾಮೀನು: ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಸುಪ್ರೀಂ ಆದೇಶ

ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್‌ ಜುಬೇ‌ರ್‌ಗೆ ಜಾಮೀನು: ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಸುಪ್ರೀಂ ಆದೇಶ

- Advertisement -
- Advertisement -

ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಕೋರ್ಟ್‌ ಬುಧವಾರ ಜಾಮೀನು ನೀಡಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೇಳಿದೆ. ಇಂದು ಸಂಜೆ 6 ಗಂಟೆಯೊಳಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

“ಎಲ್ಲಾ ಎಫ್‌ಐಆರ್‌ಗಳಲ್ಲಿ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ಅಭಿಪ್ರಾಯಪಡುತ್ತೇವೆ. ಇದು ಕಾನೂನಿನ ಒಂದು ಸೆಟ್ ತತ್ವವಾಗಿದ್ದು, ಬಂಧನದ ಅಧಿಕಾರವನ್ನು ಮಿತವಾಗಿ ಅನುಸರಿಸಬೇಕು” ಎಂದು ಸುಪ್ರೀಂಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಸ್ತುತ ಪ್ರಕರಣದಲ್ಲಿ ಅವರನ್ನು ನಿರಂತರ ಬಂಧನದಲ್ಲಿ ಇರಿಸಲು ಮತ್ತು ವಿವಿಧ ನ್ಯಾಯಾಲಯಗಳಲ್ಲಿ ಅಂತ್ಯವಿಲ್ಲದ ಸುತ್ತಿನ ವಿಚಾರಣೆಗೆ ಒಳಪಡಿಸುವುದನ್ನು ಸಮರ್ಥಿಸಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಯುಪಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೊಹಮ್ಮದ್ ಜುಬೇರ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ದು ಇಂದು ಆದೇಶಿಸಿದ್ದು, “ಎಲ್ಲಾ ಪ್ರಕರಣಗಳಲ್ಲಿನ ಎಫ್‌ಐಆರ್‌ಗಳನ್ನು ಒಟ್ಟಿಗೆ ಸೇರಿಸಿ, ಒಂದು ತನಿಖಾ ಪ್ರಾಧಿಕಾರದಿಂದ ಅವುಗಳನ್ನು ನಿರ್ವಹಿಸಬೇಕು” ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಉತ್ತರ ಪ್ರದೇಶದಲ್ಲಿ ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ಜುಬೇರ್‌ ಸುಪ್ರೀಂಕೋರ್ಟ್‌ಗೆ ಕೋರಿದ್ದರು. ಆದರೆ ಸುಪ್ರೀಂಕೋರ್ಟ್‌ ಎಫ್‌ಐಆರ್‌ಗಳನ್ನು ರದ್ದುಗೊಳಿಸದೆ, ಎಲ್ಲಾ ಪ್ರಕರಣಗಳ ವಿರುದ್ಧ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದು ಹೇಳಿದೆ.

ಉತ್ತರ ಪ್ರದೇಶದಲ್ಲಿ ದಾಖಲಾದ 6 ಎಫ್‌ಐಆರ್‌ಗಳು ಸೇರಿದಂತೆ ಅರ್ಜಿದಾರರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ತನಿಖೆಗೆ ವರ್ಗಾಯಿಸಬೇಕು ಆದೇಶಿಸಿರುವ ಸುಪ್ರೀಂಕೋರ್ಟ್‌, “ಮೊಹಮ್ಮದ್ ಜುಬೈರ್ ವಿರುದ್ಧದ ಎಫ್‌ಐಆರ್‌ಗಳ ತನಿಖೆಗಾಗಿ ಯುಪಿ ಪೊಲೀಸರು ರಚಿಸಿದ್ದ ಎಸ್‌ಐಟಿಯನ್ನು ವಿಸರ್ಜಿಸಬೇಕು” ಎಂದು ತಿಳಿಸಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ದೆಹಲಿ ಹೈಕೋರ್ಟ್‌ನಲ್ಲಿ ಎಫ್‌ಐಆರ್‌ಗಳನ್ನು ರದ್ದುಪಡಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜಾಮೀನು ಬಾಂಡ್‌ಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಯೊಳಗೆ ಮೊಹಮ್ಮದ್ ಜುಬಿಯಾರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಜುಬೇರ್‌ ಅವರು ಯಾವುದೇ ಟ್ವೀಟ್‌ಗಳನ್ನು ಪೋಸ್ಟ್‌ ಮಾಡದಂತೆ ಅವರನ್ನು ತಡೆಯುವಂತೆ ನ್ಯಾಯಾಲಯವನ್ನು ಕೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ಇಂತಹ ಆದೇಶ ನೀಡುವುದಿಲ್ಲ ಎಂದು ಹೇಳಿದೆ.

“ಇದು ವಕೀಲರಿಗೆ ಮುಂದೆ ನೀವು ವಾದಿಸಬೇಡಿ ಎಂದು ಹೇಳುವಂತಿದೆ. ಪತ್ರಕರ್ತನಿಗೆ ಬರೆಯಬೇಡಿ ಎಂದು ನೀವು ಹೇಗೆ ಹೇಳಲು ಸಾಧ್ಯ? ಅವರು ಕಾನೂನನ್ನು ಉಲ್ಲಂಘಿಸುವ ಕೆಲಸವನ್ನು ಮಾಡಿದರೆ, ಅದಕ್ಕೆ ಅವರು ಜವಾಬ್ದಾರನಾಗಿರುತ್ತಾರೆ. ಆದರೆ ನಾಗರಿಕನ ವಿರುದ್ಧ ನಾವು ನಿರೀಕ್ಷಿತ ಕ್ರಮವನ್ನು ತೆಗೆದುಕೊಳ್ಳುವುದು ಹೇಗೆ? ಸಾರ್ವಜನಿಕವಾಗಿ ಅಥವಾ ಖಾಸಗಿಯಾಗಿ ಅವರು ಏನು ಮಾಡುತ್ತಾರೆ ಎಂಬುದಕ್ಕೆ ಪ್ರತಿಯೊಬ್ಬ ನಾಗರಿಕನು ಜವಾಬ್ದಾರನಾಗಿರುತ್ತಾನೆ. ನಾವು ಅಂತಹ ಯಾವುದೇ ಆದೇಶವನ್ನು ನೀಡುವುದಿಲ್ಲ” ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಜುಬೇ‌ರ್‌ ಅವರು 2018 ರಲ್ಲಿ ಮಾಡಿದ್ದ ಟ್ವೀಟ್ ಒಂದರ ಆಧಾರ ಮೇಲೆ ದೆಹಲಿ ಪೊಲೀಸರು ಜೂನ್ 28 ರಂದು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿ ಅವರ ವಿರುದ್ಧ ಇನ್ನೂ ಏಳು ಎಫ್‌ಐಆರ್‌ಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...