Homeರಾಷ್ಟ್ರೀಯಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್‌ ಜುಬೇ‌ರ್‌ಗೆ ಜಾಮೀನು: ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಸುಪ್ರೀಂ ಆದೇಶ

ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್‌ ಜುಬೇ‌ರ್‌ಗೆ ಜಾಮೀನು: ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಸುಪ್ರೀಂ ಆದೇಶ

- Advertisement -
- Advertisement -

ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಕೋರ್ಟ್‌ ಬುಧವಾರ ಜಾಮೀನು ನೀಡಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೇಳಿದೆ. ಇಂದು ಸಂಜೆ 6 ಗಂಟೆಯೊಳಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

“ಎಲ್ಲಾ ಎಫ್‌ಐಆರ್‌ಗಳಲ್ಲಿ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ಅಭಿಪ್ರಾಯಪಡುತ್ತೇವೆ. ಇದು ಕಾನೂನಿನ ಒಂದು ಸೆಟ್ ತತ್ವವಾಗಿದ್ದು, ಬಂಧನದ ಅಧಿಕಾರವನ್ನು ಮಿತವಾಗಿ ಅನುಸರಿಸಬೇಕು” ಎಂದು ಸುಪ್ರೀಂಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಸ್ತುತ ಪ್ರಕರಣದಲ್ಲಿ ಅವರನ್ನು ನಿರಂತರ ಬಂಧನದಲ್ಲಿ ಇರಿಸಲು ಮತ್ತು ವಿವಿಧ ನ್ಯಾಯಾಲಯಗಳಲ್ಲಿ ಅಂತ್ಯವಿಲ್ಲದ ಸುತ್ತಿನ ವಿಚಾರಣೆಗೆ ಒಳಪಡಿಸುವುದನ್ನು ಸಮರ್ಥಿಸಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಯುಪಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೊಹಮ್ಮದ್ ಜುಬೇರ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ದು ಇಂದು ಆದೇಶಿಸಿದ್ದು, “ಎಲ್ಲಾ ಪ್ರಕರಣಗಳಲ್ಲಿನ ಎಫ್‌ಐಆರ್‌ಗಳನ್ನು ಒಟ್ಟಿಗೆ ಸೇರಿಸಿ, ಒಂದು ತನಿಖಾ ಪ್ರಾಧಿಕಾರದಿಂದ ಅವುಗಳನ್ನು ನಿರ್ವಹಿಸಬೇಕು” ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಉತ್ತರ ಪ್ರದೇಶದಲ್ಲಿ ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ಜುಬೇರ್‌ ಸುಪ್ರೀಂಕೋರ್ಟ್‌ಗೆ ಕೋರಿದ್ದರು. ಆದರೆ ಸುಪ್ರೀಂಕೋರ್ಟ್‌ ಎಫ್‌ಐಆರ್‌ಗಳನ್ನು ರದ್ದುಗೊಳಿಸದೆ, ಎಲ್ಲಾ ಪ್ರಕರಣಗಳ ವಿರುದ್ಧ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದು ಹೇಳಿದೆ.

ಉತ್ತರ ಪ್ರದೇಶದಲ್ಲಿ ದಾಖಲಾದ 6 ಎಫ್‌ಐಆರ್‌ಗಳು ಸೇರಿದಂತೆ ಅರ್ಜಿದಾರರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ತನಿಖೆಗೆ ವರ್ಗಾಯಿಸಬೇಕು ಆದೇಶಿಸಿರುವ ಸುಪ್ರೀಂಕೋರ್ಟ್‌, “ಮೊಹಮ್ಮದ್ ಜುಬೈರ್ ವಿರುದ್ಧದ ಎಫ್‌ಐಆರ್‌ಗಳ ತನಿಖೆಗಾಗಿ ಯುಪಿ ಪೊಲೀಸರು ರಚಿಸಿದ್ದ ಎಸ್‌ಐಟಿಯನ್ನು ವಿಸರ್ಜಿಸಬೇಕು” ಎಂದು ತಿಳಿಸಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ದೆಹಲಿ ಹೈಕೋರ್ಟ್‌ನಲ್ಲಿ ಎಫ್‌ಐಆರ್‌ಗಳನ್ನು ರದ್ದುಪಡಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜಾಮೀನು ಬಾಂಡ್‌ಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಯೊಳಗೆ ಮೊಹಮ್ಮದ್ ಜುಬಿಯಾರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಜುಬೇರ್‌ ಅವರು ಯಾವುದೇ ಟ್ವೀಟ್‌ಗಳನ್ನು ಪೋಸ್ಟ್‌ ಮಾಡದಂತೆ ಅವರನ್ನು ತಡೆಯುವಂತೆ ನ್ಯಾಯಾಲಯವನ್ನು ಕೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ಇಂತಹ ಆದೇಶ ನೀಡುವುದಿಲ್ಲ ಎಂದು ಹೇಳಿದೆ.

“ಇದು ವಕೀಲರಿಗೆ ಮುಂದೆ ನೀವು ವಾದಿಸಬೇಡಿ ಎಂದು ಹೇಳುವಂತಿದೆ. ಪತ್ರಕರ್ತನಿಗೆ ಬರೆಯಬೇಡಿ ಎಂದು ನೀವು ಹೇಗೆ ಹೇಳಲು ಸಾಧ್ಯ? ಅವರು ಕಾನೂನನ್ನು ಉಲ್ಲಂಘಿಸುವ ಕೆಲಸವನ್ನು ಮಾಡಿದರೆ, ಅದಕ್ಕೆ ಅವರು ಜವಾಬ್ದಾರನಾಗಿರುತ್ತಾರೆ. ಆದರೆ ನಾಗರಿಕನ ವಿರುದ್ಧ ನಾವು ನಿರೀಕ್ಷಿತ ಕ್ರಮವನ್ನು ತೆಗೆದುಕೊಳ್ಳುವುದು ಹೇಗೆ? ಸಾರ್ವಜನಿಕವಾಗಿ ಅಥವಾ ಖಾಸಗಿಯಾಗಿ ಅವರು ಏನು ಮಾಡುತ್ತಾರೆ ಎಂಬುದಕ್ಕೆ ಪ್ರತಿಯೊಬ್ಬ ನಾಗರಿಕನು ಜವಾಬ್ದಾರನಾಗಿರುತ್ತಾನೆ. ನಾವು ಅಂತಹ ಯಾವುದೇ ಆದೇಶವನ್ನು ನೀಡುವುದಿಲ್ಲ” ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಜುಬೇ‌ರ್‌ ಅವರು 2018 ರಲ್ಲಿ ಮಾಡಿದ್ದ ಟ್ವೀಟ್ ಒಂದರ ಆಧಾರ ಮೇಲೆ ದೆಹಲಿ ಪೊಲೀಸರು ಜೂನ್ 28 ರಂದು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿ ಅವರ ವಿರುದ್ಧ ಇನ್ನೂ ಏಳು ಎಫ್‌ಐಆರ್‌ಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....