Homeಮುಖಪುಟಸಿಂಘು ಗಡಿಯಲ್ಲಿ ಬಂಧನವಾಗಿದ್ದ ಕಾರ್ಮಿಕ ಹೋರಾಟಗಾರ ಶಿವಕುಮಾರ್‌ಗೆ ಜಾಮೀನು

ಸಿಂಘು ಗಡಿಯಲ್ಲಿ ಬಂಧನವಾಗಿದ್ದ ಕಾರ್ಮಿಕ ಹೋರಾಟಗಾರ ಶಿವಕುಮಾರ್‌ಗೆ ಜಾಮೀನು

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದರು.

- Advertisement -
- Advertisement -

ಜನವರಿ 16 ರಂದು ದೆಹಲಿಯ ಸಿಂಘು ಗಡಿಯ ರೈತರ ಪ್ರತಿಭಟನಾ ಸ್ಥಳದಿಂದ ಬಂಧಿಸಲ್ಪಟ್ಟ 24 ವರ್ಷದ ದಲಿತ ಕಾರ್ಮಿಕ ಸಂಘಟಕರಾದ ಶಿವಕುಮಾರ್ ಅವರಿಗೆ ಸೋನಿಪತ್ ನ್ಯಾಯಾಲಯವು ಜಾಮೀನು ನೀಡಿದೆ.

ಶಿವಕುಮಾರ್‌ರವರ ಸಹ ಕಾರ್ಯಕರ್ತೆ ದಲಿತ ನೊದೀಪ್ ಕೌರ್ (25) ಅವರನ್ನು ಬಂಧಿಸಿದಾಗ ಎಫ್‌ಐಆರ್‌ನಲ್ಲಿ ಶಿವಕುಮಾರ್‌ರವರನ್ನು ಹೆಸರಿಸಿಲ್ಲ. ಆದರೆ ನೊದೀಪ್ ಕೌರ್ ಬಂಧನದ ನಂತರ ಅವರ ಮೇಲೆ ಜನವರಿ 12 ರಂದು ಎಫ್ಐಆರ್ ಸಲ್ಲಿಸಿದ್ದು, ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ 11 ಅಪರಾಧಗಳನ್ನು ಪಟ್ಟಿ ಮಾಡಲಾಗಿದೆ.

ಭೂಹೀನ ದಲಿತ ಕೃಷಿ ಕೆಲಸಗಾರ ಮತ್ತು ಅರೆಕಾಲಿಕ ಭದ್ರತಾ ಸಿಬ್ಬಂದಿಯ ಮಗ ಶಿವಕುಮಾರ್ ಅವರು 2016 ರಲ್ಲಿ ಸೋನಿಪತ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ-ಉಪಕರಣಗಳನ್ನು ನಿರ್ವಹಿಸುವ ತರಬೇತಿಯಲ್ಲಿ ಪದವಿ ಪಡೆದರು. ಕುಂಡ್ಲಿಯಲ್ಲಿ ಎಲ್‌ಇಡಿ ದೀಪಗಳು ಮತ್ತು ವಾಹನ ಭಾಗಗಳನ್ನು ತಯಾರಿಸುವ ಕಾರ್ಖಾನೆಗಳಲ್ಲಿ ಎರಡು ವರ್ಷ ಕೆಲಸ ಮಾಡಿದರು. 2018 ರಲ್ಲಿ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಸೇರಿದರು.

ಇದನ್ನೂ ಓದಿ: ದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು. ಆ ನಂತರ ಅವರನ್ನು ಬಂಧಿಸಲಾಗಿತ್ತು.

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದರು.


ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...