Homeಮುಖಪುಟಸಿಂಘು ಗಡಿಯಲ್ಲಿ ಬಂಧನವಾಗಿದ್ದ ಕಾರ್ಮಿಕ ಹೋರಾಟಗಾರ ಶಿವಕುಮಾರ್‌ಗೆ ಜಾಮೀನು

ಸಿಂಘು ಗಡಿಯಲ್ಲಿ ಬಂಧನವಾಗಿದ್ದ ಕಾರ್ಮಿಕ ಹೋರಾಟಗಾರ ಶಿವಕುಮಾರ್‌ಗೆ ಜಾಮೀನು

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದರು.

- Advertisement -
- Advertisement -

ಜನವರಿ 16 ರಂದು ದೆಹಲಿಯ ಸಿಂಘು ಗಡಿಯ ರೈತರ ಪ್ರತಿಭಟನಾ ಸ್ಥಳದಿಂದ ಬಂಧಿಸಲ್ಪಟ್ಟ 24 ವರ್ಷದ ದಲಿತ ಕಾರ್ಮಿಕ ಸಂಘಟಕರಾದ ಶಿವಕುಮಾರ್ ಅವರಿಗೆ ಸೋನಿಪತ್ ನ್ಯಾಯಾಲಯವು ಜಾಮೀನು ನೀಡಿದೆ.

ಶಿವಕುಮಾರ್‌ರವರ ಸಹ ಕಾರ್ಯಕರ್ತೆ ದಲಿತ ನೊದೀಪ್ ಕೌರ್ (25) ಅವರನ್ನು ಬಂಧಿಸಿದಾಗ ಎಫ್‌ಐಆರ್‌ನಲ್ಲಿ ಶಿವಕುಮಾರ್‌ರವರನ್ನು ಹೆಸರಿಸಿಲ್ಲ. ಆದರೆ ನೊದೀಪ್ ಕೌರ್ ಬಂಧನದ ನಂತರ ಅವರ ಮೇಲೆ ಜನವರಿ 12 ರಂದು ಎಫ್ಐಆರ್ ಸಲ್ಲಿಸಿದ್ದು, ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ 11 ಅಪರಾಧಗಳನ್ನು ಪಟ್ಟಿ ಮಾಡಲಾಗಿದೆ.

ಭೂಹೀನ ದಲಿತ ಕೃಷಿ ಕೆಲಸಗಾರ ಮತ್ತು ಅರೆಕಾಲಿಕ ಭದ್ರತಾ ಸಿಬ್ಬಂದಿಯ ಮಗ ಶಿವಕುಮಾರ್ ಅವರು 2016 ರಲ್ಲಿ ಸೋನಿಪತ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ-ಉಪಕರಣಗಳನ್ನು ನಿರ್ವಹಿಸುವ ತರಬೇತಿಯಲ್ಲಿ ಪದವಿ ಪಡೆದರು. ಕುಂಡ್ಲಿಯಲ್ಲಿ ಎಲ್‌ಇಡಿ ದೀಪಗಳು ಮತ್ತು ವಾಹನ ಭಾಗಗಳನ್ನು ತಯಾರಿಸುವ ಕಾರ್ಖಾನೆಗಳಲ್ಲಿ ಎರಡು ವರ್ಷ ಕೆಲಸ ಮಾಡಿದರು. 2018 ರಲ್ಲಿ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಸೇರಿದರು.

ಇದನ್ನೂ ಓದಿ: ದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು. ಆ ನಂತರ ಅವರನ್ನು ಬಂಧಿಸಲಾಗಿತ್ತು.

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದರು.


ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...