Homeಮುಖಪುಟಗಂಭೀರ ಪ್ರಕರಣಗಳಲ್ಲೂ ಜಾಮೀನಿಗೆ ಆದ್ಯತೆ : ಸುಪ್ರೀಂ ಕೋರ್ಟ್‌

ಗಂಭೀರ ಪ್ರಕರಣಗಳಲ್ಲೂ ಜಾಮೀನಿಗೆ ಆದ್ಯತೆ : ಸುಪ್ರೀಂ ಕೋರ್ಟ್‌

"ಅರ್ಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ"

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967 ರಂತಹ ವಿಶೇಷ ಕಾನೂನುಗಳಲ್ಲಿಯೂ ಸಹ ‘ಜಾಮೀನು ನಿಯಮ, ಜೈಲು ವಿನಾಯಿತಿ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಆಗಸ್ಟ್ 13) ಹೇಳಿದೆ.

ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ತರಬೇತಿ ಶಿಬಿರ ನಡೆಸಲು ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಗೆ ತನ್ನ ಮನೆಯನ್ನು ಬಾಡಿಗೆಗೆ ನೀಡಿದ ಪ್ರಕರಣ ಆರೋಪಿಗೆ ಜಾಮೀನು ನೀಡುವ ವೇಳೆ ಮೇಲಿನಂತೆ ತಿಳಿಸಿದೆ.

“ಜಾಮೀನು ಮಂಜೂರಾತಿ ನೀಡುವ ಪ್ರಕರಣವಿದ್ದಾಗ ನ್ಯಾಯಾಲಯವು ಜಾಮೀನು ನೀಡಲು ಹಿಂಜರಿಯಬಾರದು. ಪ್ರಾಸಿಕ್ಯೂಷನ್‌ನ ಆರೋಪಗಳು ತುಂಬಾ ಗಂಭೀರವಾಗಿರಬಹುದು, ಆದರೆ ನ್ಯಾಯಾಲಯದ ಕರ್ತವ್ಯವು ಕಾನೂನಿನ ಪ್ರಕಾರ ಜಾಮೀನಿಗಾಗಿ ಪ್ರಕರಣವನ್ನು ಪರಿಗಣಿಸುವುದು.  ನ್ಯಾಯಾಲಯಗಳು ಅರ್ಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಲು ಪ್ರಾರಂಭಿಸಿದರೆ, ಅದು ಆರ್ಟಿಕಲ್ 21 ರ ಅಡಿಯಲ್ಲಿ ನೀಡಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ” ಎಂದು ನ್ಯಾಯಾಧೀಶ ಅಭಯ್ ಓಕಾ ಅವರು ಹೇಳಿದ್ದಾರೆ.

ಜಾಮೀನು ನಿರಾಕರಿಸಿದ ಪಾಟ್ನಾ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ಜಲಾಲುದ್ದೀನ್ ಖಾನ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

ಮೇಲ್ಮನವಿದಾರ ಜಲಾಲುದ್ದೀನ್ ಖಾನ್ ಅವರು ಬಿಹಾರಕ್ಕೆ ಪ್ರಧಾನಿ ಮೋದಿಯವರ ಭೇಟಿಗೆ ಅಡ್ಡಿಪಡಿಸುವ ಯೋಜನೆಗಳಲ್ಲಿ ಭಾಗಿಯಾಗಿದ್ದಾರೆ ಮತ್ತು ನಿಷೇಧಿತ ಪಿಎಫ್‌ಐಗೆ ಸಂಬಂಧಿಸಿದ ಇತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧ ಐಪಿಸಿಯ ಸೆಕ್ಷನ್ 120, 120 ಬಿ, 121,121 ಎ, 153 ಎ, 153 ಬಿ, 34 ಮತ್ತು ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಲಾಲುದ್ದೀನ್ ಖಾನ್ ಅವರು ಬಾಡಿಗೆಗೆ ನೀಡಿದ್ದ ಮನೆಗೆ ಪೊಲೀಸರು ದಾಳಿ ನಡೆಸಿದಾಗ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಅವರು ಜುಲೈ 6 ಮತ್ತು 7, 2022 ರಂದು ಪಿಎಫ್‌ಐ ತರಬೇತಿ ಶಿಬಿರಕ್ಕೆ ತಮ್ಮ ಮನೆಯ ಮೊದಲ ಮಹಡಿಯನ್ನು ಬಾಡಿಗೆಗೆ ನೀಡಿದ್ದರು. ಬಿಹಾರದ ಹೊರಗಿನ ವ್ಯಕ್ತಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

ಪ್ರಾಸಿಕ್ಯೂಷನ್ ಪ್ರಕಾರ, ಈ ತರಬೇತಿ ಶಿಬಿರವು ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ ಮತ್ತು ಪಿಎಫ್‌ಐ ಮಾಜಿ ಸದಸ್ಯರನ್ನು ಹೊಸ ಗುಂಪಾಗಿ ಮರುಸಂಘಟಿಸುವ ವಿಶಾಲ ಯೋಜನೆಯ ಭಾಗವಾಗಿದ್ದು, ಭಾರತದಲ್ಲಿ ಮುಸ್ಲಿಮರ ವಿರುದ್ಧದ ದೌರ್ಜನ್ಯಗಳಿಗೆ ಪ್ರತೀಕಾರವಾಗಿ ಹಿಂಸಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಉದ್ದೇಶ ಹೊಂದಿತ್ತು.

ಮೇಲ್ಮನವಿದಾರ ಜಲಾಲುದ್ದೀನ್ ತಾನು ಪಿಎಫ್‌ಐ ಅಥವಾ ಯಾವುದೇ ನಿಷೇಧಿತ ಸಂಘಟನೆಯೊಂದಿಗೆ ಸಂಬಂಧ ಹೊಂದಿಲ್ಲ. ನನ್ನ ಮನೆಯನ್ನು ಬಾಡಿಗೆಗೆ ನೀಡಿದ್ದೆ ಅಷ್ಟೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಈ ಹಿಂದೆ ವಿಶೇಷ ಎನ್‌ಐಎ ನ್ಯಾಯಾಲಯವೂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ : ಪೂರ್ಣಗೊಳ್ಳದ ಅದಾನಿ ವಿರುದ್ದದ ಸೆಬಿ ತನಿಖೆ : ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ವಕೀಲ ವಿಶಾಲ್ ತಿವಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...