Homeಕರ್ನಾಟಕನಟ ದರ್ಶನ್ ಜಾಮೀನು ವಿರುದ್ಧದ ಅರ್ಜಿ ಏಪ್ರಿಲ್ 2 ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ನಟ ದರ್ಶನ್ ಜಾಮೀನು ವಿರುದ್ಧದ ಅರ್ಜಿ ಏಪ್ರಿಲ್ 2 ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

- Advertisement -
- Advertisement -

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಮತ್ತು ಇತರರಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಯನ್ನು ಏಪ್ರಿಲ್ 2 ರಂದು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಕೊಂಡಿದೆ. ರಾಜ್ಯ ಸರ್ಕಾರದ ಪರವಾಗಿ ವಕೀಲ ಅನಿಲ್ ಸಿ. ನಿಶಾನಿ ಮಾಡಿದ ತುರ್ತು ಪ್ರಸ್ತಾಪದ ವಿಚಾರಣೆಯ ದಿನಾಂಕವನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಮತ್ತು ಆರ್. ಮಹಾದೇವನ್ ಅವರ ಪೀಠವು ಮಂಗಳವಾರ ನೀಡಿತು.

ಜನವರಿ 24 ರಂದು, ನ್ಯಾಯಾಲಯವು ಹೈಕೋರ್ಟ್ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತ್ತು ಆದರೆ ಅದರ ಸಿಂಧುತ್ವವನ್ನು ಪ್ರಶ್ನಿಸಿದ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿತ್ತು. ನಂತರ ಹೈಕೋರ್ಟ್‌ನ ಜಾಮೀನು ಆದೇಶದ ವಿರುದ್ಧ ರಾಜ್ಯದ ಅರ್ಜಿಯ ಕುರಿತು ದರ್ಶನ್ ಮತ್ತು ಇತರರಿಗೆ ನ್ಯಾಯಾಲಯ ನೋಟಿಸ್ ನೀಡಿತ್ತು.

ಜನವರಿ 6, 2025 ರಂದು, ರಾಜ್ಯ ಸರ್ಕಾರವು ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ 16 ಜನರಿಗೆ ನೀಡಲಾದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅದಕ್ಕೂ ಮೊದಲು ಡಿಸೆಂಬರ್ 13, 2024 ರಂದು, ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿತ್ತು.

ಚಿತ್ರದುರ್ಗ ಮೂಲದ 33 ವರ್ಷದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 47 ವರ್ಷದ ನಟ ದರ್ಶನ್ ಅವರನ್ನು ಜೂನ್ 11, 2024 ರಂದು ಬಂಧಿಸಲಾಯಿತು. ಜೂನ್ 9 ರಂದು ಬೆಂಗಳೂರಿನಲ್ಲಿ ಮಳೆನೀರಿನ ಚರಂಡಿ ಬಳಿ ರೇಣುಕಾ ಸ್ವಾಮಿ ಅವರ ಶವ ಪತ್ತೆಯಾಗಿತ್ತು.

ಕೊಲೆಗೀಡಾದ ರೇಣುಕಸ್ವಾಮಿ ಅವರು ನಟ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು. ಇದು ದರ್ಶನ್ ಅವರನ್ನು ಕೆರಳಿಸಿತ್ತು ಎನ್ನಲಾಗಿತ್ತು. ಪೊಲೀಸ್ ತನಿಖೆಯ ಪರಿಣಾಮವಾಗಿ ನಟ ದರ್ಶನ್, ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡ ಮತ್ತು ಇತರ 15 ಸಹಚರರನ್ನು ಬಂಧಿಸಲಾಗಿತ್ತು.

ಬೆಂಗಳೂರು ಪೊಲೀಸರು ಸೆಪ್ಟೆಂಬರ್ 3 ರಂದು ಪವಿತ್ರಾ ಅವರನ್ನು ಆರೋಪಿ ಸಂಖ್ಯೆ 1 ಮತ್ತು ದರ್ಶನ್ ಅವರನ್ನು ಆರೋಪಿ ಸಂಖ್ಯೆ 2 ಎಂದು ಹೆಸರಿಸಿ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪವಿತ್ರಾ ಅವರಿಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುವ ರೇಣುಕಸ್ವಾಮಿಯ ಕೃತ್ಯವೇ ಅಪರಾಧಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

ಆರೋಪ ಪಟ್ಟಿಯಲ್ಲಿ ಹೆಸರಿಸಲಾದ ಇತರರೆಂದರೆ ಪವನ್ ಕೆ (29); ರಾಘವೇಂದ್ರ (43); ನಂದೀಶ್ (28); ಜಗದೀಶ್ (36); ಅನುಕುಮಾರ್ (25); ರವಿಶಂಕರ್ (32); ಧನರಾಜ್ ಡಿ (27); ವಿನಯ್ ವಿ (38); ನಾಗರಾಜು (41); ಲಕ್ಷ್ಮಣ್ (54); ದೀಪಕ್ (39); ಪ್ರದೋಶ್ (40); ಕಾರ್ತಿಕ್ (27); ಕೇಶವಮೂರ್ತಿ (27), ಮತ್ತು ನಿಖಿಲ್ ನಾಯಕ್ (21).

ಅಕ್ಟೋಬರ್ 30, 2024 ರಂದು ನಟನಿಗೆ ವೈದ್ಯಕೀಯ ಕಾರಣಗಳಿಗಾಗಿ ಮೊದಲು ಮಧ್ಯಂತರ ಜಾಮೀನು ನೀಡಲಾಯಿತು. ಪ್ರಕರಣದ ಎಲ್ಲಾ 17 ಆರೋಪಿಗಳು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಕ್ಷೇತ್ರ ಪುನರ್‌ವಿಂಗಡಣೆ ಕುರಿತ ಸರ್ವಪಕ್ಷ ಸಭೆಯಿಂದ ದೂರ ಉಳಿದ ಬಿಆರ್‌ಎಸ್-ಬಿಜೆಪಿ

ತೆಲಂಗಾಣ| ಕ್ಷೇತ್ರ ಪುನರ್‌ವಿಂಗಡಣೆ ಕುರಿತ ಸರ್ವಪಕ್ಷ ಸಭೆಯಿಂದ ದೂರ ಉಳಿದ ಬಿಆರ್‌ಎಸ್-ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...