Homeಮುಖಪುಟನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾವು ಯಾವುದೇ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡಿದ್ದಕ್ಕೆ ಯಾವುದಾದರೂ ಸಾಕ್ಷಿಯಿದ್ದರೆ ತೋರಿಸಿ, ಮತಾಂತರ ಎಂದರೆ ಏನು ಎಂದು ನಮಗೆ ತಿಳಿಸಿ ಎಂದು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -
- Advertisement -

ಕ್ರಿಸ್‌ಮಸ್‌ ಆಚರಣೆಗೆ ತಡೆಯೊಡ್ಡಿದ ಬಜರಂಗದಳ ಸದಸ್ಯರನ್ನು ಕೆಲ ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿಳಿದೇವಾಲಯ ಗ್ರಾಮದಲ್ಲಿ ಡಿಸೆಂಬರ್ 28ರ ಮಂಗಳವಾರ ಸಂಜೆ ಜರುಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ನಂದಿನಿ ಎಂಬುವವರ ಮನೆಗೆ ನುಗ್ಗಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿದ್ದಾರೆ. ಅಲ್ಲಿದ್ದ ಮಹಿಳೆಯರು ನಾವು ಮತಾಂತರ ಮಾಡುತ್ತಿಲ್ಲ ಎಂದು ಸಮರ್ಥನೆ ನೀಡಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ಹಿಂದೂ ಧರ್ಮದಂತೆ ನಿಮ್ಮ ಹಣೆಯಲ್ಲಿ ಸಿಂಧೂರ ಏಕಿಲ್ಲ ಎಂದು ಪ್ರಶ್ನಿಸಿದಾಗ ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಅದನ್ನು ಕೇಳಲು ಅಧಿಕಾರ ನಿಮಗೆ ಕೊಟ್ಟವರ್ಯಾರು ಎಂದು ನಂದಿನಿಯವರು ತರಾಟೆಗೆ ತೆಗೆದುಕೊಂಡಿರುವುದು ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ನೀವು ಹೊರಗಡೆ ಹೋದಾಗ ವಾರಗಟ್ಟಲೆ ಮುಖ ತೊಳೆಯುವುದಿಲ್ಲ, ನಾಮ ಇಕ್ಕಿಕೊಳ್ಳುವುದಿಲ್ಲ. ಅದನ್ನು ಯಾರಾದರೂ ಪ್ರಶ್ನಿಸಿದ್ದಾರ? ಇಲ್ಲವಾದರೆ ನಮ್ಮನ್ನು ಏಕೆ ಪ್ರಶ್ನಿಸುತ್ತೀರಿ? ಎಂದು ನಂದಿನಿಯವರು ಮರು ಪ್ರಶ್ನಿಸಿದ್ದಾರೆ. ನಾವು ನಮ್ಮ ಮನಶಾಂತಿಗಾಗಿ ಪ್ರಾರ್ಥನೆ ಮಾಡುತ್ತೇವೆ ಎಂದು ಮತ್ತೊಬ್ಬ ಮಹಿಳೆ ಇದೇ ಸಮಯದಲ್ಲಿ ತಿಳಿಸಿದ್ದಾರೆ.

ನಾವು ಯಾವುದೇ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡಿದ್ದಕ್ಕೆ ಯಾವುದಾದರೂ ಸಾಕ್ಷಿಯಿದ್ದರೆ ತೋರಿಸಿ, ಮತಾಂತರ ಎಂದರೆ ಏನು ಎಂದು ನಮಗೆ ತಿಳಿಸಿ ಎಂದು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಾರ್ಥನೆಯನ್ನು ಚರ್ಚ್‌ಗಳಲ್ಲಿ ಮಾತ್ರ ಮಾಡಬೇಕು ಎಂಬು ಬಜರಂಗದಳದ ಸದಸ್ಯರ ಪ್ರಶ್ನೆಗೆ ನಾವು ಹಿಂದೂಗಳ ಹಬ್ಬದಲ್ಲಿ ಮನೆ ಮುಂದೆಯೇ ಬಲಿ ಕೊಡುತ್ತೇವೆ, ಒಂದೊಂದು ದೇವರಿಗೂ ಒಂದೊಂದು ಆಚರಣೆ ಇದೆ ಇದೆ. ಅದೇ ರೀತಿ ಪ್ರಾರ್ಥನೆ ಮಾಡುತ್ತಿದ್ದೇವೆ. ಮರಿ ಕಡಿದು ಹಬ್ಬ ಮಾಡುತ್ತೇವೆ, ಬಂದು ನೀವು ಊಟ ಮಾಡಿಕೊಂಡು ಹೋಗಿ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆಯಲ್ಲಿ ಹಿಂದೂ ದೇವರ ಫೋಟೊಗಳಿಲ್ಲ ಎಂಬ ಪ್ರಶ್ನೆಗೆ ನಮ್ಮ ಮನೆಯಲ್ಲಿ ಹಿಂದೂ ದೇವರ ಫೋಟೊಗಳು, ದೇವರ ಮನೆ ಎಲ್ಲಾ ಇದೆ ಎಂದು ಮಹಿಳೆಯರು ಪ್ರತಿ ಉತ್ತರ ನೀಡಿದ್ದಾರೆ. ಅದೇ ಸಮಯದಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಮನೆಗೆ ದಾಳಿ ಮಾಡಿ ಪ್ರಾರ್ಥನೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೂರುವುದನ್ನು ಕಾಣಬಹುದಾಗಿದೆ.

ಬಿಳಿದೇವಾಲಯ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ದೂರಿನ ಮೇಲೆ ಬಜರಂಗದಳ ಸದಸ್ಯರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದೂರು-ಪ್ರತಿದೂರು ದಾಖಲಾಗಿದೆ, ಆದರೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ತರುವ ಪ್ರಯತ್ನದ ಬೆನ್ನಲ್ಲೆ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗಿವೆ. ನಿನ್ನೆ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.


ಇದನ್ನೂ ಓದಿ: ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಾಳಿ,ಕಾಲುಂಗರ ಹಾಕಬೇಡಿ ,ಹಾಕು ಅಂತ ಯಾರು ಹೇಳ್ತಾರೆ ಇವರಿಗೆ .ಮತಾಂತರ ಆಗಿರೋರು ಕ್ರಿಶ್ಚಿಯನ್ ಸಮುದಾಯದಲ್ಲಿ ಅಧಿಕೃತವಾಗಿ ಸೇರಲಿ ,ಹಿಂದೂ ಸಮುದಾಯದ SC,ST ,OBC ಮೀಸಲಾತಿ ಏನಕ್ಕೆ ಇವರಿಗೆ .

  2. ದಾರ್ಮಿಕ ಸ್ವಾತಂತ್ರ್ಯ ಈ ದೇಶದ ಜನರ ಸಂವಿಧಾನಿಕ ಹಕ್ಕು ಅದನ್ನ ಪ್ರಶ್ನಿಸೋಕೆ ಬಜರಂಗದಳ ಅಲ್ಲ ಸುಪ್ರಿಂಕೋರ್ಟ್ಗೂ ಹಕ್ಕಿಲ್ಲ..

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...