Homeಮುಖಪುಟನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾವು ಯಾವುದೇ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡಿದ್ದಕ್ಕೆ ಯಾವುದಾದರೂ ಸಾಕ್ಷಿಯಿದ್ದರೆ ತೋರಿಸಿ, ಮತಾಂತರ ಎಂದರೆ ಏನು ಎಂದು ನಮಗೆ ತಿಳಿಸಿ ಎಂದು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -
- Advertisement -

ಕ್ರಿಸ್‌ಮಸ್‌ ಆಚರಣೆಗೆ ತಡೆಯೊಡ್ಡಿದ ಬಜರಂಗದಳ ಸದಸ್ಯರನ್ನು ಕೆಲ ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿಳಿದೇವಾಲಯ ಗ್ರಾಮದಲ್ಲಿ ಡಿಸೆಂಬರ್ 28ರ ಮಂಗಳವಾರ ಸಂಜೆ ಜರುಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ನಂದಿನಿ ಎಂಬುವವರ ಮನೆಗೆ ನುಗ್ಗಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿದ್ದಾರೆ. ಅಲ್ಲಿದ್ದ ಮಹಿಳೆಯರು ನಾವು ಮತಾಂತರ ಮಾಡುತ್ತಿಲ್ಲ ಎಂದು ಸಮರ್ಥನೆ ನೀಡಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ಹಿಂದೂ ಧರ್ಮದಂತೆ ನಿಮ್ಮ ಹಣೆಯಲ್ಲಿ ಸಿಂಧೂರ ಏಕಿಲ್ಲ ಎಂದು ಪ್ರಶ್ನಿಸಿದಾಗ ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಅದನ್ನು ಕೇಳಲು ಅಧಿಕಾರ ನಿಮಗೆ ಕೊಟ್ಟವರ್ಯಾರು ಎಂದು ನಂದಿನಿಯವರು ತರಾಟೆಗೆ ತೆಗೆದುಕೊಂಡಿರುವುದು ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ನೀವು ಹೊರಗಡೆ ಹೋದಾಗ ವಾರಗಟ್ಟಲೆ ಮುಖ ತೊಳೆಯುವುದಿಲ್ಲ, ನಾಮ ಇಕ್ಕಿಕೊಳ್ಳುವುದಿಲ್ಲ. ಅದನ್ನು ಯಾರಾದರೂ ಪ್ರಶ್ನಿಸಿದ್ದಾರ? ಇಲ್ಲವಾದರೆ ನಮ್ಮನ್ನು ಏಕೆ ಪ್ರಶ್ನಿಸುತ್ತೀರಿ? ಎಂದು ನಂದಿನಿಯವರು ಮರು ಪ್ರಶ್ನಿಸಿದ್ದಾರೆ. ನಾವು ನಮ್ಮ ಮನಶಾಂತಿಗಾಗಿ ಪ್ರಾರ್ಥನೆ ಮಾಡುತ್ತೇವೆ ಎಂದು ಮತ್ತೊಬ್ಬ ಮಹಿಳೆ ಇದೇ ಸಮಯದಲ್ಲಿ ತಿಳಿಸಿದ್ದಾರೆ.

ನಾವು ಯಾವುದೇ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡಿದ್ದಕ್ಕೆ ಯಾವುದಾದರೂ ಸಾಕ್ಷಿಯಿದ್ದರೆ ತೋರಿಸಿ, ಮತಾಂತರ ಎಂದರೆ ಏನು ಎಂದು ನಮಗೆ ತಿಳಿಸಿ ಎಂದು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಾರ್ಥನೆಯನ್ನು ಚರ್ಚ್‌ಗಳಲ್ಲಿ ಮಾತ್ರ ಮಾಡಬೇಕು ಎಂಬು ಬಜರಂಗದಳದ ಸದಸ್ಯರ ಪ್ರಶ್ನೆಗೆ ನಾವು ಹಿಂದೂಗಳ ಹಬ್ಬದಲ್ಲಿ ಮನೆ ಮುಂದೆಯೇ ಬಲಿ ಕೊಡುತ್ತೇವೆ, ಒಂದೊಂದು ದೇವರಿಗೂ ಒಂದೊಂದು ಆಚರಣೆ ಇದೆ ಇದೆ. ಅದೇ ರೀತಿ ಪ್ರಾರ್ಥನೆ ಮಾಡುತ್ತಿದ್ದೇವೆ. ಮರಿ ಕಡಿದು ಹಬ್ಬ ಮಾಡುತ್ತೇವೆ, ಬಂದು ನೀವು ಊಟ ಮಾಡಿಕೊಂಡು ಹೋಗಿ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆಯಲ್ಲಿ ಹಿಂದೂ ದೇವರ ಫೋಟೊಗಳಿಲ್ಲ ಎಂಬ ಪ್ರಶ್ನೆಗೆ ನಮ್ಮ ಮನೆಯಲ್ಲಿ ಹಿಂದೂ ದೇವರ ಫೋಟೊಗಳು, ದೇವರ ಮನೆ ಎಲ್ಲಾ ಇದೆ ಎಂದು ಮಹಿಳೆಯರು ಪ್ರತಿ ಉತ್ತರ ನೀಡಿದ್ದಾರೆ. ಅದೇ ಸಮಯದಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಮನೆಗೆ ದಾಳಿ ಮಾಡಿ ಪ್ರಾರ್ಥನೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೂರುವುದನ್ನು ಕಾಣಬಹುದಾಗಿದೆ.

ಬಿಳಿದೇವಾಲಯ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ದೂರಿನ ಮೇಲೆ ಬಜರಂಗದಳ ಸದಸ್ಯರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದೂರು-ಪ್ರತಿದೂರು ದಾಖಲಾಗಿದೆ, ಆದರೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ತರುವ ಪ್ರಯತ್ನದ ಬೆನ್ನಲ್ಲೆ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗಿವೆ. ನಿನ್ನೆ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.


ಇದನ್ನೂ ಓದಿ: ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತಾಳಿ,ಕಾಲುಂಗರ ಹಾಕಬೇಡಿ ,ಹಾಕು ಅಂತ ಯಾರು ಹೇಳ್ತಾರೆ ಇವರಿಗೆ .ಮತಾಂತರ ಆಗಿರೋರು ಕ್ರಿಶ್ಚಿಯನ್ ಸಮುದಾಯದಲ್ಲಿ ಅಧಿಕೃತವಾಗಿ ಸೇರಲಿ ,ಹಿಂದೂ ಸಮುದಾಯದ SC,ST ,OBC ಮೀಸಲಾತಿ ಏನಕ್ಕೆ ಇವರಿಗೆ .

  2. ದಾರ್ಮಿಕ ಸ್ವಾತಂತ್ರ್ಯ ಈ ದೇಶದ ಜನರ ಸಂವಿಧಾನಿಕ ಹಕ್ಕು ಅದನ್ನ ಪ್ರಶ್ನಿಸೋಕೆ ಬಜರಂಗದಳ ಅಲ್ಲ ಸುಪ್ರಿಂಕೋರ್ಟ್ಗೂ ಹಕ್ಕಿಲ್ಲ..

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...