Homeಮುಖಪುಟಸ್ನೇಹಿತೆಯ ಭೇಟಿ - ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

- Advertisement -
- Advertisement -

ಉತ್ತರ ಪ್ರದೇಶದ ಮೀರತ್‌‌ ಜಿಲ್ಲೆಯ ಸಾಕೇತ್‌‌‌ನ ಗೋಲ್‌ ಮಾರ್ಕೆಟ್‌ ಪಾರ್ಕ್‌ನಲ್ಲಿ ತನ್ನ ಸ್ನೇಹಿತ ಸಲ್ಮಾನ್‌ ಎಂಬ ಮುಸ್ಲಿಂ ಯುವಕನನ್ನು ಭೇಟಿಯಾದ ಯುವತಿಯನ್ನು, ಬಜರಂಗದಳ ಕಾರ್ಯಕರ್ತರು ಚಪ್ಪಲಿ ಬಳಸಿ ಬಲವಾಗಿ ಥಳಿಸುವಂತೆ ಮಾಡಿರುವ ಘಟನೆ ಘಟನೆ ಸೆಪ್ಟೆಂಬರ್‌ 17 ರ ಶುಕ್ರವಾರದಂದು ನಡೆದಿದೆ. ಇಷ್ಟೇ ಅಲ್ಲದೆ ಯುವಕನ ಮೇಲೆ ದುಷ್ಕಮಿಗಳು ದೌರ್ಜನ್ಯ ನಡೆಸಿದ್ದು, ಮರವೊಂದರ ಕಟ್ಟೆಯ ಮೇಲೆ ಯುವಕನನ್ನು ಬಗ್ಗಿ ನಿಲ್ಲಿಸಿ ಶಿಕ್ಷೆಯನ್ನು ನೀಡಿದ್ದಾರೆ.

ಈ ಬಗ್ಗೆ ಯುವತಿ ದೂರು ನೀಡಿದ್ದು, “ಶುಕ್ರವಾರ ಸಂಜೆ ನಾನು ಮತ್ತು ನನ್ನ ಇನ್ನೊಬ್ಬ ಸ್ನೇಹಿತೆ ಗೋಲ್ ಮಾರ್ಕೆಟ್‌ಗೆ ಬಂದಿದ್ದು, ಈ ವೇಳೆ ಸಲ್ಮಾನ್ ಕೂಡಾ ಸಿಕ್ಕಿದ್ದರು. ಈ ವೇಳೆ ನಾವು ಮೂವರೂ ತಂಪು ಪಾನಿಯ ಕುಡಿಯಲು ಅಂಗಡಿಗೆ ತೆರಳಿದ್ದಾಗ ಬಜರಂಗದಳದವರು ಎಂದು ಹೇಳಿಕೊಂಡು ಕೆಲವರು ಆಗಮಿಸಿದ್ದರು. ಅದರಲ್ಲಿಒಬ್ಬನ ಹೆಸರು ಸಚಿನ್ ಸಿರೋಹಿ ಎಂದಾಗಿತ್ತು” ಎಂದು ದೂರಿದ್ದಾರೆ.

ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

“ಅವರು ಬಂದು ನನ್ನ ಮತ್ತು ನನ್ನ ಸ್ನೇಹಿತರ ಹೆಸರು ಕೇಳಿದರು. ನಂತರ ಸ್ನೇಹಿತ ಸಲ್ಮಾನ್‌ಗೆ ಹಲ್ಲೆ ನಡೆಸಿದ್ದಾರೆ. ನನ್ನೊಂದಿಗೆ ಮತ್ತು ನನ್ನ ಸ್ನೇಹಿತೆಯೊಂದಿಗೂ ಸಲ್ಮಾನ್‌ಗೆ ಹಲ್ಲೆ ನಡೆಸುವಂತೆ ಅವರು ಒತ್ತಾಯಿಸಿದ್ದಾರೆ. ಮತ್ತೆ ಸಲ್ಮಾನ್ ವಿರುದ್ದ ಪ್ರಕರಣ ದಾಖಲು ಮಾಡುವಂತೆಯು ಒತ್ತಾಯ ಮಾಡಿದ್ದು, ಇಲ್ಲವೆಂದರೆ ಚೆನ್ನಾಗಿರುವುದಿಲ್ಲ ಎಂದು ಬೆದಸಿದ್ದಾರೆ” ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಯುವತಿಯ ಕೈಯಲ್ಲಿ ಚಪ್ಪಲಿಯಿಂದ ಥಳಿಸುವಂತೆ ಬಲವಂತ ಪಡಿಸುವ ವಿಡಿಯೊ ಕೂಡಾ ವೈರಲ್ ಆಗಿದೆ. ವಿಡಿಯೊದಲ್ಲಿ ಯುವತಿ ಹಿಂಜರಿದರೂ ದುಷ್ಕರ್ಮಿಗಳು ಮತ್ತೆ ಮತ್ತೆ ಜೋರಾಗಿ ಥಳಿಸುವಂತೆ ಯುವತಿಗೆ ಬೆದರಿಸುವುದು ದಾಖಲಾಗಿದೆ.

“ಸಿವಿಲ್ ಲೈನ್ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ” ಎಂದು ಮೀರತ್‌ ಪೊಲೀಸ್‌ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...