Homeಮುಖಪುಟಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

‘ಆಶ್ರಮ್‌’ ವೆಬ್‌ ಸೀರೀಸ್‌ ಚಿತ್ರೀಕರಣದ ಮೇಲೆ ಆದ ದಾಳಿಯನ್ನು ಪ್ರೊಡ್ಯೂಸರ್ಸ್ ಗಿಲ್ಡ್‌ ಆಫ್‌ ಇಂಡಿಯಾ ಮತ್ತು ವೆಸ್ಟ್‌ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್‌ ಫೆಡರೇಷನ್‌ ಖಂಡಿಸಿವೆ.

- Advertisement -
- Advertisement -

ಭೋಪಾಲ್‌: ಪ್ರಕಾಶ್‌ ಝಾ ನಿರ್ದೇಶನದ ‘ಆಶ್ರಮ್‌-3’ ವೆಬ್‌ ಸೀರೀಸ್‌ ಚಿತ್ರೀಕರಣ ವೇಳೆ ಬಜರಂಗದಳದ ದುಷ್ಕರ್ಮಿಗಳು ದಾಳಿ ಮಾಡಿದ್ದನ್ನು ಮಧ್ಯಪ್ರದೇಶದ ಗೃಹಸಚಿವರು ಸಮರ್ಥಿಸಿದ್ದಾರೆ.

ಮಧ್ಯಪ್ರದೇಶದ ಗೃಹಸಚಿವ ನರೋತ್ತಮ್‌ ಮಿಶ್ರಾ ಅವರು, ಪ್ರಕಾಶ್‌ ಝಾ ಅವರ ನಿರ್ದೇಶನದ ‘ಆಶ್ರಮ್‌’ ವೆಬ್‌ ಸೀರೀಸ್‌ ಅನ್ನು ವಿರೋಧಿಸಿದ್ದು, ಬಲಪಂಥೀಯ ಗುಂಪುಗಳ ಆಗ್ರಹವನ್ನು ಒಪ್ಪಿ ವೆಬ್‌ ಸಿರೀಸ್‌ನ ಹೆಸರನ್ನು ಬದಲಾಯಿಸಬೇಕು ಎಂದು ಹೇಳಿದ್ದಾರೆ.

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ನಿರ್ದೇಶಕ, ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಭಾನುವಾರ ನಡೆದಿದೆ. ಆದರೆ ಈ ಅಮಾನವೀಯ ಘಟನೆಯನ್ನು ರಾಜ್ಯದ ಗೃಹಸಚಿವರೇ ಸಮರ್ಥಿಸಿಕೊಂಡಿದ್ದಾರೆ. “ಈ ರೀತಿಯ ಟೆಲಿವಿಷನ್‌ ಕಟೆಂಟ್‌ಗಳು ಬಹುಸಂಖ್ಯಾತರನ್ನು ಗುರಿಯಾಗಿಸಿಕೊಂಡಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ವಿವಾದವನ್ನು ಹುಟ್ಟುಹಾಕಿರುವ ಕರ್ವಾ ಚೌತ್ ಆಚರಿಸುವ ಸಲಿಂಗ ದಂಪತಿಗಳ ಕುರಿತ ಡಾಬರ್‌ ಸಂಸ್ಥೆಯ ಜಾಹೀರಾತಿನ ವಿರುದ್ಧವೂ ರಾಜ್ಯ ಸರ್ಕಾರ ಕ್ರಮ ಜರುಗಿಸಲಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ನಾನು ಇದನ್ನು ಬೆಂಬಲಿಸುವೆ. ಅವರು ವೆಬ್‌ ಸಿರೀಸ್‌ಗೆ ಆಶ್ರಮ್‌ ಎಂದು ಹೆಸರು ಏಕೆ ಇಟ್ಟಿದ್ದಾರೆ. ಇತರರಿಗೆ (ಇತರ ಧರ್ಮದವರಿಗೆ) ಸಂಬಂಧಿಸಿದ ಹೆಸರು ಇದ್ದಾಗಿದ್ದರೆ ಅವರು (ಪರಿಣಾಮವನ್ನು) ಅರ್ಥ ಮಾಡಿಕೊಳ್ಳುತ್ತಿದ್ದರು. ನಾಲ್ಕು ಜನರನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಆದರೆ ಪ್ರಕಾಶ್ ಝಾ ಸಾಹೇಬರು ತಮ್ಮ ತಪ್ಪಿನ ಕುರಿತೂ ಯೋಚಿಸಬೇಕು” ಎಂದು ಮಿಶ್ರಾ ಪ್ರತಿಕ್ರಿಯಿಸಿದ್ದಾರೆ.

“ವೆಬ್‌ ಸರಣಿಯ ಹೆಸರಲ್ಲಿ ದೀರ್ಘಕಾಲಿಕವಾದ ದಾಳಿಯನ್ನು ಹಿಂದುತ್ವದ ಮೇಲೆ ನಡೆಸಲಾಗಿದೆ. ಬಹುಸಂಖ್ಯಾತ ಸಮಾಜದ ಭಾವನೆಗಳನ್ನು ಪರಿಗಣಿಸಿ ಆಶ್ರಮ್‌ ಎಂಬ ಹೆಸರನ್ನು ಪ್ರಕಾಶ್ ಝಾ ಬದಲಾಯಿಸಬೇಕು” ಎಂದಿದ್ದಾರೆ.

ಮಧ್ಯಪ್ರದೇಶದ ಗೃಹಸಚಿವ ನರೋತ್ತಮ್ ಮಿಶ್ರಾ

“ವಿವಾದ ಹಿನ್ನೆಲೆಯಲ್ಲಿ ಆಶ್ರಮ್‌-3 ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಶಾಶ್ವತ ಮಾರ್ಗಸೂಚಿಯನ್ನು ನೀಡಲು ಮುಂದಾಗಿದ್ದೇವೆ. ಯಾವುದೇ ಧರ್ಮದ ಭಾವನೆಗೆ ಧಕ್ಕೆ ತರುವ ವಿಚಾರಗಳ ಚಿತ್ರೀಕರಣಕ್ಕೆ ಹೋಗುವ ಮುನ್ನ ಆಡಳಿತ ವ್ಯವಸ್ಥೆಯಿಂದ ಅನುಮತಿಯನ್ನು ಪಡೆದು ಅವರು ಮುಂದುವರಿಯಬೇಕಾಗುತ್ತದೆ” ಎಂದಿರುವ ಸಚಿವರು, ಅಭಿವ್ಯಕ್ತಿ ಸ್ವತಂತ್ರವನ್ನು ಮೊಟುಕು ಮಾಡಲು ಹೊರಟಿದ್ದಾರೆ.

“ಹಿಂದೂ ಧರ್ಮದ ಮೇಲಷ್ಟೇ ಏಕೆ ಜಾಹೀರಾತುಗಳು, ಸಿನಿಮಾಗಳು ಮೂಡಿಬರುತ್ತವೆ” ಎಂದು ಕೇಳಿರುವ ನರೋತ್ತಮ್‌ ಮಿಶ್ರಾ, “ಈ ರೀತಿಯ ನಡೆಯನ್ನು ನಾವು ಕಟುವಾಗಿ ವಿರೋಧಿಸುತ್ತೇವೆ. ನಿಮಗೆ ಧೈರ್ಯವಿದ್ದರೆ ಇತರ ಧರ್ಮದವರ ಕುರಿತೂ ಚಿತ್ರೀಕರಿಸಿ” ಎಂದು ಪ್ರಚೋದನಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ಭಾನುವಾರ ದಾಳಿ ನಡೆಸಿದ್ದರು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವಿಡಿಯೊದಲ್ಲಿ, ಚಿತ್ರೀಕರಣದ ಸೆಟ್‌ನಲ್ಲಿನ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದಾದಾಗಿತ್ತು. ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ದುಷ್ಕರ್ಮಿಗಳು ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಾಬಿ ಡಿಯೋಲ್ ನಟಿಸಿದ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ್‌’ ಹಿಂದೂ ಧರ್ಮದ ಮೇಲಿನ ಆಕ್ರಮಣವಾಗಿದ್ದು, ಶೀರ್ಷಿಕೆಯನ್ನು ಬದಲಾಯಿಸುವವರೆಗೂ ಅದರ ಚಿತ್ರೀಕರಣವನ್ನು ಮಾಡಲು ಬಿಡುವುದಿಲ್ಲ ಎಂದು ಬಜರಂಗ ದಳದ ಕಾರ್ಯಕರ್ತರು ಹೇಳಿದ್ದರು.

ಭಾನುವಾರ ಸಂಜೆ ಅರೆರಾ ಹಿಲ್ಸ್‌ನಲ್ಲಿನ ಓಲ್ಡ್ ಜೈಲ್ ಆವರಣದಲ್ಲಿರುವ ಸೆಟ್‌ನ ಮೇಲೆ ದಾಳಿ ಮಾಡಿರುವ ಬಜರಂಗ ದಳದ ಸದಸ್ಯರು “ಪ್ರಕಾಶ್ ಝಾ ಮುರ್ದಾಬಾದ್”, “ಬಾಬಿ ಡಿಯೋಲ್ ಮುರ್ದಾಬಾದ್” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದರು.

“ಅವರು ಆಶ್ರಮ 1, ಆಶ್ರಮ 2 ಅನ್ನು ಮಾಡಿದ್ದಾರೆ. ಇಲ್ಲಿ ಆಶ್ರಮ 3ರ ಚಿತ್ರೀಕರಣ ಮಾಡುತ್ತಿದ್ದರು. ಗುರುಗಳು ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾ ಅದರಲ್ಲಿ ತೋರಿಸಿದ್ದಾರೆ. ಚರ್ಚ್ ಅಥವಾ ಮದ್ರಸದ ಬಗ್ಗೆ ಅಂತಹ ಚಲನಚಿತ್ರವನ್ನು ಮಾಡಲು ಅವರಿಗೆ ಧೈರ್ಯವಿದೆಯೇ?” ಎಂದು ಭಜರಂಗದಳದ ನಾಯಕ ಸುಶೀಲ್ ಸುರ್ಹೆಲೆ ಕೇಳಿದ್ದಾರೆ.

“ಭಜರಂಗದಳದ ಮೂಲಕ ಅವರಿಗೆ ಸವಾಲು ಹಾಕುತ್ತಿದ್ದೇವೆ. ಈಗ ಪ್ರಕಾಶ್ ಝಾ ಅವರ ಮುಖಕ್ಕೆ ಮಾತ್ರ ಮಸಿ ಬಳಿದಿದ್ದೇವೆ. ನಾವು ಬಾಬಿ ಡಿಯೋಲ್‌ ಅವರನ್ನು ಕೂಡಾ ಹುಡುಕುತ್ತಿದ್ದೇವೆ. ಅವರು ತನ್ನ ಸಹೋದರ ಸನ್ನಿ ಡಿಯೋಲ್‌ ಮೂಲಕ ಆದರೂ ಕಲಿಯಬೇಕು. ಅವರು ಎಂತಹ ದೇಶಭಕ್ತಿಯ ಚಲನಚಿತ್ರಗಳನ್ನು ಮಾಡಿದ್ದಾರೆ” ಎಂದು ಬೆದರಿಕೆ ಹಾಕಿದ್ದರು.

ಪ್ರಕಾಶ್ ಝಾ ತಂಡದಿಂದ ಯಾರೊಬ್ಬರೂ ಆರೋಪಗಳನ್ನು ಮಾಡದಿದ್ದರೂ, ಸಂಬಂಧಪಟ್ಟವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಚಿತ್ರೀಕರಣದ ಸೆಟ್‌ ಮೇಲೆ ದಾಳಿ ಮಾಡಿ ಅಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಬಂಧಿಸಲಾಗುವುದು. ಸಾಮಾಜಿಕ ವಿರೋಧಿಗಳು ವಾಹನಗಳನ್ನು ಕೊಂಡೋಯ್ದು ತೊಂದರೆ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಭದ್ರತೆ ನೀಡಲಾಗುವುದು ಮತ್ತು ಈ ರೀತಿಯ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಹೇಳಿದ್ದಾರೆ.

ಇದನ್ನೂ ಓದಿರಿ: ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

2017ರಲ್ಲಿ, ಮತ್ತೊಂದು ಬಲಪಂಥೀಯ ಗುಂಪಾದ ಕರ್ಣಿ ಸೇನೆಯು ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಚಿತ್ರದ ಸೆಟ್‌ಗಳ ಮೇಲೆ ದಾಳಿ ಮಾಡಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತ್ತು. ಜೊತೆಗೆ ಚಿತ್ರದ ದೃಶ್ಯಗಳನ್ನು ಮಾರ್ಪಡಿಸಲು ಮತ್ತು ಅದರ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.

 ನಿರ್ಮಾಪಕರ ಖಂಡನೆ

‘ಆಶ್ರಮ್‌’ ವೆಬ್‌ ಸೀರೀಸ್‌ ಚಿತ್ರೀಕರಣದ ಮೇಲೆ ಆದ ದಾಳಿಯನ್ನು ಪ್ರೊಡ್ಯೂಸರ್ಸ್ ಗಿಲ್ಡ್‌ ಆಫ್‌ ಇಂಡಿಯಾ ಮತ್ತು ವೆಸ್ಟ್‌ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್‌ ಫೆಡರೇಷನ್‌ (ಎಫ್‌ಡಬ್ಲ್ಯೂಐಸಿಇ) ಖಂಡಿಸಿವೆ. ಈ ದುಷ್ಕೃತ್ಯವನ್ನು ನಡೆಸಲು ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ನಿರ್ಮಾಪಕರ  ಸಂಘವು ಆತಂಕ ವ್ಯಕ್ತಪಡಿಸಿದ್ದು, ಚಿತ್ರರಂಗದ ಸಿಬ್ಬಂದಿ ಎದುರಿಸುತ್ತಿರುವ ಹಿಂಸಾಚಾರ, ಕಿರುಕುಳ ಮತ್ತು ವಿಧ್ವಂಸಕ ಕೃತ್ಯಗಳನ್ನು ಬಲವಾಗಿ ಖಂಡಿಸಿದೆ.

“ಒಂದು ಚಿತ್ರೀಕರಣ ಸ್ಥಳೀಯ ಆರ್ಥಿಕತೆಗಳಿಗೆ ಗಮನಾರ್ಹ ಕೊಡುಗೆ ನೀಡುತ್ತದೆ. ಉದ್ಯೋಗವನ್ನು ಸೃಷ್ಟಿಸುತ್ತದೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಅದಕ್ಕಾಗಿಯೇ ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತದ ಅಧಿಕರಿ ವರ್ಗವು ನಿರ್ಮಾಪಕರನ್ನು ತಮ್ಮ ಪ್ರದೇಶಗಳಿಗೆ ಆಕರ್ಷಿಸಲು ನೀತಿಗಳನ್ನು ರೂಪಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

“ಈ ಹಿಂಸಾತ್ಮಕ ಕೃತ್ಯಗಳನ್ನು ಎಸಗಿದವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿರಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...