Homeಮುಖಪುಟಭಜರಂಗದಳ ಬ್ಯಾನ್ ಪ್ರಸ್ತಾಪ; ಖರ್ಗೆ ವಿರುದ್ಧ 100 ಕೋಟಿ ರೂ. ಮಾನಹಾನಿ ಮೊಕದ್ದಮೆ

ಭಜರಂಗದಳ ಬ್ಯಾನ್ ಪ್ರಸ್ತಾಪ; ಖರ್ಗೆ ವಿರುದ್ಧ 100 ಕೋಟಿ ರೂ. ಮಾನಹಾನಿ ಮೊಕದ್ದಮೆ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಪಂಜಾಬ್‌ನ ಸಂಗ್ರೂರ್‌ನ ಸ್ಥಳೀಯ ನ್ಯಾಯಾಲಯದಲ್ಲಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಪ್ರಸ್ತಾಪಿಸಿದ್ದಕ್ಕಾಗಿ ಈ ಪ್ರಕರಣ ದಾಖಲಿಸಲಾಗಿದೆ.

‘ಹಿಂದೂ ಸುರಕ್ಷಾ ಪರಿಷತ್’ ಹೆಸರಿನ ಬಜರಂಗದಳ ಘಟಕದ ರಾಷ್ಟ್ರೀಯ ಅಧ್ಯಕ್ಷ ಹಿತೇಶ್ ಭಾರದ್ವಾಜ್ ಅವರು ದೂರು ನೀಡಿದ್ದಾರೆ. “ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ [ಪಿಎಫ್‌ಐ] ಥರದ ಕಾನೂನುಬಾಹಿರ ಭಯೋತ್ಪಾದಕ ಸಂಘಟನೆಗಳಿಗೆ ಹೋಲಿಸುವ ಮೂಲಕ ಖರ್ಗೆ ಅವರು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭಜರಂಗದಳದ ವಿರುದ್ಧ ಮಾನಹಾನಿಕರ ಅಭಿಪ್ರಾಯಗಳನ್ನು ತಾಳಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿತು. ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ ಆರೋಪ ಹೊರಿಸಲಾಯಿತು.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯ ‘ಕಾನೂನು ಮತ್ತು ನ್ಯಾಯ’ ವಿಭಾಗದಲ್ಲಿ ಬಜರಂಗದಳದ ಹೆಸರನ್ನು ಉಲ್ಲೇಖಿಸಿತ್ತು. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು.

“ಕಾನೂನು ಮತ್ತು ಸಂವಿಧಾನವನ್ನು ಉಲ್ಲಂಘಿಸುವ, ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಹರಡುವ ಬಜರಂಗದಳ, ಪಿಎಫ್‌ಐದಂತಹ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿತ್ತು.

ಭಜರಂಗದಳದ ಸದಸ್ಯರನ್ನು ಪಿಎಫ್‌ಐ ಜೊತೆಗೆ ಹೋಲಿಕೆ ಮಾಡಿದ್ದರಿಂದ ಖರ್ಗೆ ಅವರು ಪರಿಹಾರವನ್ನು ನೀಡಬೇಕು ಎಂದು ದೂರುದಾರರ ಪರ ವಕೀಲರು ತಿಳಿಸಿದ್ದಾರೆ.

“ಭಜರಂಗ ದಳವನ್ನು ಪಿಎಫ್‌ಐ ಜೊತೆಗೆ ಹೋಲಿಸಿರುವುದರಿಂದ ಕೋಟಿಗಟ್ಟಲೆ ಸಂಖ್ಯೆಯಲ್ಲಿರುವ ಭಜರಂಗದಳ, ಹಿಂದೂ ಸುರಕ್ಷಾ ಪರಿಷತ್ ಸದಸ್ಯರ ಹೆಸರು ಮತ್ತು ಗೌರವಕ್ಕೆ ಧಕ್ಕೆಯುಂಟಾಗಿದೆ. ಭಗವಾನ್ ಹನುಮಂತನ ಅನುಯಾಯಿಗಳನ್ನು ನಿಂದಿಸಲಾಗಿದೆ” ಎಂದು ದೂರುದಾರರು ವಾದಿಸಿದ್ದಾರೆ.

ಬಜರಂಗದಳದ ಹಿಂಸಾ ಕೃತ್ಯಗಳು; ಕಿರು ಪಟ್ಟಿ

‘ಬಜರಂಗದಳ’ ಬ್ಯಾನ್ ಚರ್ಚೆಯ ಹಿನ್ನೆಲೆಯಲ್ಲಿ ‘ನ್ಯಾಯಪಥ’ ವಾರ ಪತ್ರಿಕೆಯು ಇತ್ತೀಚೆಗೆ ವಿಸ್ತೃತ ವರದಿಯನ್ನು ಪ್ರಕಟಿಸಿದೆ. ಬಜರಂಗದಳದಿಂದ ನಡೆದಿರುವ ಹಿಂಸಾ ಕೃತ್ಯಗಳ ಕಿರುಪಟ್ಟಿಯನ್ನು ವರದಿಯಲ್ಲಿ ಉಲ್ಲೇಖಿಸಿದೆ.

ಬಲವಂತದ ಮತಾಂತರದ ಆರೋಪದಲ್ಲಿ ಚರ್ಚ್‌ಗಳ ಮೇಲೆ ದಾಳಿ, ಹಿಂದೂ-ಮುಸ್ಲಿಂ ಸ್ನೇಹಿತರು ಮಾತನಾಡಿದರೆ ಮಾರಲ್ ಪೊಲೀಸಿಂಗ್, ಗೋರಕ್ಷಣೆ ಹೆಸರಲ್ಲಿ ಹತ್ಯೆ- ಹೀಗೆ ಧಾರ್ಮಿಕ ಮೂಲಭೂತವಾದ ಹಿನ್ನೆಲೆಯಲ್ಲಿ ಬಜರಂಗದಳ ಹಲವು ದಾಳಿಗಳು ನಡೆಸಿರುವುದನ್ನು ’ಇಂಡಿಯಾ ಟುಡೇ’ ವರದಿಯನ್ನಾಧರಿಸಿ ದಾಖಲಿಸಲಾಗಿದೆ.

2008 ಚರ್ಚ್ ದಾಳಿ: 2008ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಸಂಸ್ಥೆಗಳ ಮೇಲೆ ಸರಣಿ ದಾಳಿಗಳು ನಡೆದವು. ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ತನಿಖೆಗಾಗಿ ಜಸ್ಟಿಸ್ ಬಿ.ಕೆ.ಸೋಮಶೇಖರ ಆಯೋಗವನ್ನು ರಚಿಸಿತ್ತು.

2009ರ ಸೆಪ್ಟೆಂಬರ್‌ನಲ್ಲಿ ಆಗಿನ ಸರ್ಕಾರದ ಮುಂದೆ ಮಧ್ಯಂತರ ವರದಿ ಸಲ್ಲಿಕೆಯಾಯಿತು. “ಮಂಗಳೂರು ಪ್ರದೇಶದಲ್ಲಿ ಚರ್ಚ್‌ಗಳ ಮೇಲೆ ನಡೆದ ದಾಳಿಯಲ್ಲಿ ಬಜರಂಗದಳದಂತಹ ಬಲಪಂಥೀಯ ಗುಂಪುಗಳ ಕೈವಾಡವಿದೆ” ಎಂದು ಆಯೋಗ ತಿಳಿಸಿತ್ತು.

ಏಪ್ರಿಲ್ 1, 2022: ’ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸಿ’ ಎಂಬ ಅಭಿಯಾನವನ್ನು ವಿಎಚ್‌ಪಿ ಮತ್ತು ಬಜರಂಗದಳ ಹಮ್ಮಿಕೊಂಡಿದ್ದವು. ಹಲಾಲ್ ಮಾಂಸವನ್ನು ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಐವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಲಾಯಿತು.

ಜನವರಿ 18, 2022: ಬಜರಂಗದಳದ ಸದಸ್ಯರನ್ನು ಒಳಗೊಂಡ ಗುಂಪು ಗದಗ ಜಿಲ್ಲೆಯಲ್ಲಿ 20 ವರ್ಷದ ಮುಸ್ಲಿಂ ಯುವಕನನ್ನು ಚಾಕುವಿನಿಂದ ಇರಿದು ಕೊಂದಿತ್ತು.

ಏಪ್ರಿಲ್ 1, 2021: ತನ್ನ ಹಿಂದೂ ಸ್ನೇಹಿತೆಯೊಂದಿಗೆ ಖಾಸಗಿ ಬಸ್‌ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಮಂಗಳೂರಿನ ಪಂಪ್‌ವೆಲ್ ಬಳಿ ಬಜರಂಗದಳದವರು ಗುಂಪು ಹಲ್ಲೆ ನಡೆಸಿದ್ದರು. ಮಂಗಳೂರು ನಗರ ಪೊಲೀಸರು ಬಜರಂಗದಳದ ನಾಲ್ವರನ್ನು ಏಪ್ರಿಲ್ 2ರಂದು ಬಂಧಿಸಿ ಗಲಭೆ, ಕೋಮು ದ್ವೇಷ, ಹಲ್ಲೆ ಮತ್ತು ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ನವೆಂಬರ್ 28, 2021: ಬೇಲೂರು ಪಟ್ಟಣದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಕ್ರಿಶ್ಚಿಯನ್ನರಿಗೆ ಬಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಆ ಕಾರ್ಯಕರ್ತರು “ಬಲವಂತದ ಧಾರ್ಮಿಕ ಮತಾಂತರಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದರು. ಸ್ಥಳದಲ್ಲಿದ್ದ ಮಹಿಳೆಯರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.

ಜೂನ್ 1, 2018: ಜಾನುವಾರು ಸಾಗಾಟ ಮಾಡುತ್ತಿದ್ದ ಹುಸೇನಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 19, 2013: ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದರು.

ಏಪ್ರಿಲ್ 5, 2023: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಬಜರಂಗದಳದ ಗ್ಯಾಂಗ್ ಹಲ್ಲೆ ಮಾಡಿತ್ತು.

ಮಾರ್ಚ್ 17, 2023: ಶಿವಮೊಗ್ಗದಲ್ಲಿನ ಹೋಟೆಲ್‌ವೊಂದರಲ್ಲಿ ಮಹಿಳೆಯರು ನೈಟ್ ಔಟ್ ಪಾರ್ಟಿಗಾಗಿ ಸೇರಿದ್ದರು. ಇಂತಹ ಪಾರ್ಟಿಗಳು ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದ್ದು, ಹೋಟೆಲ್ ಒಳಗೆ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಹೋಟೆಲ್ ಹೊರಗೆ ಬಜರಂಗದಳ ಪ್ರತಿಭಟನೆ ನಡೆಸಿತ್ತು.

ನವೆಂಬರ್ 24, 2022: ಮಂಗಳೂರಿನಲ್ಲಿ ಹಿಂದೂ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿತು. ಬಜರಂಗದಳದ ಸದಸ್ಯರು ದಾಳಿ ಮಾಡಿದ್ದಾರೆಂಬ ವರದಿಗಳಿದ್ದರೂ, ಅದನ್ನು ಬಜರಂಗದಳ ತಳ್ಳಿಹಾಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 28, 2021: ವಿವಿಧ ಧರ್ಮದ ಹಿನ್ನೆಲೆಯ ಸ್ನೇಹಿತರು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದರು. ಅವರು ಮಲ್ಪೆ ಬೀಚ್‌ಗೆ ಭೇಟಿ ನೀಡಿದ್ದರು. ಆದರೆ ಸುರತ್ಕಲ್ ಟೋಲ್ ಬಳಿ ಅವರಿಗೆ ಬಜರಂಗದಳ ಸದಸ್ಯರು ಅಡ್ಡಿಪಡಿಸಿದ್ದರು.

ಅಕ್ಟೋಬರ್ 6, 2021: ಸಂತ ಅಲೋಷಿಯಸ್ ಕಾಲೇಜು ಆಡಳಿತ ಮಂಡಳಿಯು ತಮ್ಮ ವ್ಯಾಪ್ತಿಯಲ್ಲಿನ ಪಾರ್ಕ್ ಒಂದಕ್ಕೆ ಫಾದರ್ ಸ್ವಾಮಿಯವರ ಹೆಸರನ್ನು ಇಡಲು ಮುಂದಾಗಿತ್ತು. ಇದನ್ನು ವಿರೋಧಿಸಿದ ಎಬಿವಿಪಿ, ವಿಎಚ್‌ಪಿ ಮತ್ತು ಬಜರಂಗದಳದ ಮುಖ್ಯಸ್ಥರು ಕಾಲೇಜಿಗೆ ಎಚ್ಚರಿಕೆಯನ್ನು ನೀಡಿದ್ದರು. ಯಾವುದೇ ಅಹಿತಕರ ಘಟನೆ ನಡೆದರೆ ಕಾಲೇಜಿನ ಆಡಳಿತ ಮಂಡಲಿಯೇ ಕಾರಣ ಎಂದಿದ್ದರು.

ಇದನ್ನೂ ಓದಿರಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ಅಕ್ಟೋಬರ್ 17, 2021: ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಹುಬ್ಬಳ್ಳಿಯ ತಾತ್ಕಾಲಿಕ ಚರ್ಚ್ ಮೇಲೆ ಅಟ್ಯಾಕ್ ಮಾಡಿದ್ದರು. ಮತಾಂತರ ನಡೆಯುತ್ತಿದೆ ಎಂದು ದೂರಿದ್ದ ಇವರು, ಭಜನೆ ಮತ್ತು ಹಿಂದೂ ಪಾರ್ಥನೆಗಳನ್ನು ಮೈಕ್‌ನಲ್ಲಿ ಹಾಕಿ ಕಲಹ ಹುಟ್ಟುಹಾಕಿದ್ದರು.

ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ

ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್-ಕ) ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್‌ಎಜೆ), ಆಲ್ ಇಂಡಿಯಾ ಪೀಪಲ್ಸ್ ಫೋರಮ್ (ಎಐಪಿಎಫ್) ಮತ್ತು ಗೌರಿ ಲಂಕೇಶ್ ನ್ಯೂಸ್.ಕಾಂ (gaurilankeshnews.com) ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ’ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿ ಘಟನೆಗಳನ್ನು ವಿಶ್ಲೇಷಿಸಿದೆ. ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣಗಳು ಜಿಲ್ಲೆಯಲ್ಲಿ ಘಟಿಸಿವೆ ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...