Homeಮುಖಪುಟಭಜರಂಗದಳ ಬ್ಯಾನ್ ಪ್ರಸ್ತಾಪ; ಖರ್ಗೆ ವಿರುದ್ಧ 100 ಕೋಟಿ ರೂ. ಮಾನಹಾನಿ ಮೊಕದ್ದಮೆ

ಭಜರಂಗದಳ ಬ್ಯಾನ್ ಪ್ರಸ್ತಾಪ; ಖರ್ಗೆ ವಿರುದ್ಧ 100 ಕೋಟಿ ರೂ. ಮಾನಹಾನಿ ಮೊಕದ್ದಮೆ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಪಂಜಾಬ್‌ನ ಸಂಗ್ರೂರ್‌ನ ಸ್ಥಳೀಯ ನ್ಯಾಯಾಲಯದಲ್ಲಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಪ್ರಸ್ತಾಪಿಸಿದ್ದಕ್ಕಾಗಿ ಈ ಪ್ರಕರಣ ದಾಖಲಿಸಲಾಗಿದೆ.

‘ಹಿಂದೂ ಸುರಕ್ಷಾ ಪರಿಷತ್’ ಹೆಸರಿನ ಬಜರಂಗದಳ ಘಟಕದ ರಾಷ್ಟ್ರೀಯ ಅಧ್ಯಕ್ಷ ಹಿತೇಶ್ ಭಾರದ್ವಾಜ್ ಅವರು ದೂರು ನೀಡಿದ್ದಾರೆ. “ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ [ಪಿಎಫ್‌ಐ] ಥರದ ಕಾನೂನುಬಾಹಿರ ಭಯೋತ್ಪಾದಕ ಸಂಘಟನೆಗಳಿಗೆ ಹೋಲಿಸುವ ಮೂಲಕ ಖರ್ಗೆ ಅವರು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭಜರಂಗದಳದ ವಿರುದ್ಧ ಮಾನಹಾನಿಕರ ಅಭಿಪ್ರಾಯಗಳನ್ನು ತಾಳಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿತು. ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ ಆರೋಪ ಹೊರಿಸಲಾಯಿತು.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯ ‘ಕಾನೂನು ಮತ್ತು ನ್ಯಾಯ’ ವಿಭಾಗದಲ್ಲಿ ಬಜರಂಗದಳದ ಹೆಸರನ್ನು ಉಲ್ಲೇಖಿಸಿತ್ತು. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು.

“ಕಾನೂನು ಮತ್ತು ಸಂವಿಧಾನವನ್ನು ಉಲ್ಲಂಘಿಸುವ, ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಹರಡುವ ಬಜರಂಗದಳ, ಪಿಎಫ್‌ಐದಂತಹ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿತ್ತು.

ಭಜರಂಗದಳದ ಸದಸ್ಯರನ್ನು ಪಿಎಫ್‌ಐ ಜೊತೆಗೆ ಹೋಲಿಕೆ ಮಾಡಿದ್ದರಿಂದ ಖರ್ಗೆ ಅವರು ಪರಿಹಾರವನ್ನು ನೀಡಬೇಕು ಎಂದು ದೂರುದಾರರ ಪರ ವಕೀಲರು ತಿಳಿಸಿದ್ದಾರೆ.

“ಭಜರಂಗ ದಳವನ್ನು ಪಿಎಫ್‌ಐ ಜೊತೆಗೆ ಹೋಲಿಸಿರುವುದರಿಂದ ಕೋಟಿಗಟ್ಟಲೆ ಸಂಖ್ಯೆಯಲ್ಲಿರುವ ಭಜರಂಗದಳ, ಹಿಂದೂ ಸುರಕ್ಷಾ ಪರಿಷತ್ ಸದಸ್ಯರ ಹೆಸರು ಮತ್ತು ಗೌರವಕ್ಕೆ ಧಕ್ಕೆಯುಂಟಾಗಿದೆ. ಭಗವಾನ್ ಹನುಮಂತನ ಅನುಯಾಯಿಗಳನ್ನು ನಿಂದಿಸಲಾಗಿದೆ” ಎಂದು ದೂರುದಾರರು ವಾದಿಸಿದ್ದಾರೆ.

ಬಜರಂಗದಳದ ಹಿಂಸಾ ಕೃತ್ಯಗಳು; ಕಿರು ಪಟ್ಟಿ

‘ಬಜರಂಗದಳ’ ಬ್ಯಾನ್ ಚರ್ಚೆಯ ಹಿನ್ನೆಲೆಯಲ್ಲಿ ‘ನ್ಯಾಯಪಥ’ ವಾರ ಪತ್ರಿಕೆಯು ಇತ್ತೀಚೆಗೆ ವಿಸ್ತೃತ ವರದಿಯನ್ನು ಪ್ರಕಟಿಸಿದೆ. ಬಜರಂಗದಳದಿಂದ ನಡೆದಿರುವ ಹಿಂಸಾ ಕೃತ್ಯಗಳ ಕಿರುಪಟ್ಟಿಯನ್ನು ವರದಿಯಲ್ಲಿ ಉಲ್ಲೇಖಿಸಿದೆ.

ಬಲವಂತದ ಮತಾಂತರದ ಆರೋಪದಲ್ಲಿ ಚರ್ಚ್‌ಗಳ ಮೇಲೆ ದಾಳಿ, ಹಿಂದೂ-ಮುಸ್ಲಿಂ ಸ್ನೇಹಿತರು ಮಾತನಾಡಿದರೆ ಮಾರಲ್ ಪೊಲೀಸಿಂಗ್, ಗೋರಕ್ಷಣೆ ಹೆಸರಲ್ಲಿ ಹತ್ಯೆ- ಹೀಗೆ ಧಾರ್ಮಿಕ ಮೂಲಭೂತವಾದ ಹಿನ್ನೆಲೆಯಲ್ಲಿ ಬಜರಂಗದಳ ಹಲವು ದಾಳಿಗಳು ನಡೆಸಿರುವುದನ್ನು ’ಇಂಡಿಯಾ ಟುಡೇ’ ವರದಿಯನ್ನಾಧರಿಸಿ ದಾಖಲಿಸಲಾಗಿದೆ.

2008 ಚರ್ಚ್ ದಾಳಿ: 2008ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಸಂಸ್ಥೆಗಳ ಮೇಲೆ ಸರಣಿ ದಾಳಿಗಳು ನಡೆದವು. ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ತನಿಖೆಗಾಗಿ ಜಸ್ಟಿಸ್ ಬಿ.ಕೆ.ಸೋಮಶೇಖರ ಆಯೋಗವನ್ನು ರಚಿಸಿತ್ತು.

2009ರ ಸೆಪ್ಟೆಂಬರ್‌ನಲ್ಲಿ ಆಗಿನ ಸರ್ಕಾರದ ಮುಂದೆ ಮಧ್ಯಂತರ ವರದಿ ಸಲ್ಲಿಕೆಯಾಯಿತು. “ಮಂಗಳೂರು ಪ್ರದೇಶದಲ್ಲಿ ಚರ್ಚ್‌ಗಳ ಮೇಲೆ ನಡೆದ ದಾಳಿಯಲ್ಲಿ ಬಜರಂಗದಳದಂತಹ ಬಲಪಂಥೀಯ ಗುಂಪುಗಳ ಕೈವಾಡವಿದೆ” ಎಂದು ಆಯೋಗ ತಿಳಿಸಿತ್ತು.

ಏಪ್ರಿಲ್ 1, 2022: ’ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸಿ’ ಎಂಬ ಅಭಿಯಾನವನ್ನು ವಿಎಚ್‌ಪಿ ಮತ್ತು ಬಜರಂಗದಳ ಹಮ್ಮಿಕೊಂಡಿದ್ದವು. ಹಲಾಲ್ ಮಾಂಸವನ್ನು ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಐವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಲಾಯಿತು.

ಜನವರಿ 18, 2022: ಬಜರಂಗದಳದ ಸದಸ್ಯರನ್ನು ಒಳಗೊಂಡ ಗುಂಪು ಗದಗ ಜಿಲ್ಲೆಯಲ್ಲಿ 20 ವರ್ಷದ ಮುಸ್ಲಿಂ ಯುವಕನನ್ನು ಚಾಕುವಿನಿಂದ ಇರಿದು ಕೊಂದಿತ್ತು.

ಏಪ್ರಿಲ್ 1, 2021: ತನ್ನ ಹಿಂದೂ ಸ್ನೇಹಿತೆಯೊಂದಿಗೆ ಖಾಸಗಿ ಬಸ್‌ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಮಂಗಳೂರಿನ ಪಂಪ್‌ವೆಲ್ ಬಳಿ ಬಜರಂಗದಳದವರು ಗುಂಪು ಹಲ್ಲೆ ನಡೆಸಿದ್ದರು. ಮಂಗಳೂರು ನಗರ ಪೊಲೀಸರು ಬಜರಂಗದಳದ ನಾಲ್ವರನ್ನು ಏಪ್ರಿಲ್ 2ರಂದು ಬಂಧಿಸಿ ಗಲಭೆ, ಕೋಮು ದ್ವೇಷ, ಹಲ್ಲೆ ಮತ್ತು ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ನವೆಂಬರ್ 28, 2021: ಬೇಲೂರು ಪಟ್ಟಣದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಕ್ರಿಶ್ಚಿಯನ್ನರಿಗೆ ಬಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಆ ಕಾರ್ಯಕರ್ತರು “ಬಲವಂತದ ಧಾರ್ಮಿಕ ಮತಾಂತರಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದರು. ಸ್ಥಳದಲ್ಲಿದ್ದ ಮಹಿಳೆಯರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.

ಜೂನ್ 1, 2018: ಜಾನುವಾರು ಸಾಗಾಟ ಮಾಡುತ್ತಿದ್ದ ಹುಸೇನಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 19, 2013: ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದರು.

ಏಪ್ರಿಲ್ 5, 2023: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಬಜರಂಗದಳದ ಗ್ಯಾಂಗ್ ಹಲ್ಲೆ ಮಾಡಿತ್ತು.

ಮಾರ್ಚ್ 17, 2023: ಶಿವಮೊಗ್ಗದಲ್ಲಿನ ಹೋಟೆಲ್‌ವೊಂದರಲ್ಲಿ ಮಹಿಳೆಯರು ನೈಟ್ ಔಟ್ ಪಾರ್ಟಿಗಾಗಿ ಸೇರಿದ್ದರು. ಇಂತಹ ಪಾರ್ಟಿಗಳು ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದ್ದು, ಹೋಟೆಲ್ ಒಳಗೆ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಹೋಟೆಲ್ ಹೊರಗೆ ಬಜರಂಗದಳ ಪ್ರತಿಭಟನೆ ನಡೆಸಿತ್ತು.

ನವೆಂಬರ್ 24, 2022: ಮಂಗಳೂರಿನಲ್ಲಿ ಹಿಂದೂ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿತು. ಬಜರಂಗದಳದ ಸದಸ್ಯರು ದಾಳಿ ಮಾಡಿದ್ದಾರೆಂಬ ವರದಿಗಳಿದ್ದರೂ, ಅದನ್ನು ಬಜರಂಗದಳ ತಳ್ಳಿಹಾಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 28, 2021: ವಿವಿಧ ಧರ್ಮದ ಹಿನ್ನೆಲೆಯ ಸ್ನೇಹಿತರು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದರು. ಅವರು ಮಲ್ಪೆ ಬೀಚ್‌ಗೆ ಭೇಟಿ ನೀಡಿದ್ದರು. ಆದರೆ ಸುರತ್ಕಲ್ ಟೋಲ್ ಬಳಿ ಅವರಿಗೆ ಬಜರಂಗದಳ ಸದಸ್ಯರು ಅಡ್ಡಿಪಡಿಸಿದ್ದರು.

ಅಕ್ಟೋಬರ್ 6, 2021: ಸಂತ ಅಲೋಷಿಯಸ್ ಕಾಲೇಜು ಆಡಳಿತ ಮಂಡಳಿಯು ತಮ್ಮ ವ್ಯಾಪ್ತಿಯಲ್ಲಿನ ಪಾರ್ಕ್ ಒಂದಕ್ಕೆ ಫಾದರ್ ಸ್ವಾಮಿಯವರ ಹೆಸರನ್ನು ಇಡಲು ಮುಂದಾಗಿತ್ತು. ಇದನ್ನು ವಿರೋಧಿಸಿದ ಎಬಿವಿಪಿ, ವಿಎಚ್‌ಪಿ ಮತ್ತು ಬಜರಂಗದಳದ ಮುಖ್ಯಸ್ಥರು ಕಾಲೇಜಿಗೆ ಎಚ್ಚರಿಕೆಯನ್ನು ನೀಡಿದ್ದರು. ಯಾವುದೇ ಅಹಿತಕರ ಘಟನೆ ನಡೆದರೆ ಕಾಲೇಜಿನ ಆಡಳಿತ ಮಂಡಲಿಯೇ ಕಾರಣ ಎಂದಿದ್ದರು.

ಇದನ್ನೂ ಓದಿರಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ಅಕ್ಟೋಬರ್ 17, 2021: ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಹುಬ್ಬಳ್ಳಿಯ ತಾತ್ಕಾಲಿಕ ಚರ್ಚ್ ಮೇಲೆ ಅಟ್ಯಾಕ್ ಮಾಡಿದ್ದರು. ಮತಾಂತರ ನಡೆಯುತ್ತಿದೆ ಎಂದು ದೂರಿದ್ದ ಇವರು, ಭಜನೆ ಮತ್ತು ಹಿಂದೂ ಪಾರ್ಥನೆಗಳನ್ನು ಮೈಕ್‌ನಲ್ಲಿ ಹಾಕಿ ಕಲಹ ಹುಟ್ಟುಹಾಕಿದ್ದರು.

ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ

ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್-ಕ) ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್‌ಎಜೆ), ಆಲ್ ಇಂಡಿಯಾ ಪೀಪಲ್ಸ್ ಫೋರಮ್ (ಎಐಪಿಎಫ್) ಮತ್ತು ಗೌರಿ ಲಂಕೇಶ್ ನ್ಯೂಸ್.ಕಾಂ (gaurilankeshnews.com) ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ’ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿ ಘಟನೆಗಳನ್ನು ವಿಶ್ಲೇಷಿಸಿದೆ. ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣಗಳು ಜಿಲ್ಲೆಯಲ್ಲಿ ಘಟಿಸಿವೆ ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...