Homeಮುಖಪುಟಆರ್‌ಎಸ್‌ಎಸ್‌ ಮುಖ್ಯಸ್ಥರ ಮಾತನ್ನು ಪಾಲಿಸುತ್ತವೆಯೇ ಬಜರಂಗದಳ, ಬಿಜೆಪಿ, ಎಬಿವಿಪಿ, ವಿಎಚ್‌ಪಿ ಇತ್ಯಾದಿ?

ಆರ್‌ಎಸ್‌ಎಸ್‌ ಮುಖ್ಯಸ್ಥರ ಮಾತನ್ನು ಪಾಲಿಸುತ್ತವೆಯೇ ಬಜರಂಗದಳ, ಬಿಜೆಪಿ, ಎಬಿವಿಪಿ, ವಿಎಚ್‌ಪಿ ಇತ್ಯಾದಿ?

ಮಸೀದಿ ಕೆಡವಿ ಮಂದಿರ ಹುಡುಕುವ ಹೋರಾಟದಲ್ಲಿ ಆರ್‌ಎಸ್‌ಎಸ್‌ ಇಲ್ಲ ಎಂದು ಮೋಹನ್‌ ಭಾಗವತ್‌ ಹೇಳಿದರೆ, ಮತ್ತೊಂದೆಡೆ ಪ್ರವಾದಿ ಮುಹಮ್ಮದ್‌ ಅವರನ್ನು ಅವಹೇಳನ ಮಾಡಿದ ವಕ್ತಾರರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಈ ವಿದ್ಯಮಾನಗಳನ್ನು ಹೇಗೆ ನೋಡಬೇಕು?

- Advertisement -
- Advertisement -

ಎರಡು ಸುದ್ದಿಗಳು. ಮೊದಲನೆಯದು, ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವುದು ಬೇಡ. ಆ ಹೋರಾಟದಲ್ಲಿ ಆರ್‌ಎಸ್‌ಎಸ್‌ ಇಲ್ಲ: ಮೋಹನ್ ಭಾಗವತ್. ಎರಡನೆಯದು, ಮೊಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದ, ಬಿಜೆಪಿ ಓರ್ವ ವಕ್ತಾರೆ ಅಮಾನತು, ಓರ್ವ ವಕ್ತಾರ ಉಚ್ಛಾಟನೆ.

ಅಯೋಧ್ಯೆ ರಾಮಮಂದಿರದ ನಂತರ ಕಾಶಿ ಜ್ಞಾನವ್ಯಾಪಿ ಮಸೀದಿ, ಮಥುರಾ ಶ್ರೀಕೃಷ್ಣ ದೇವಸ್ಥಾನಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂಬ ಕೂಗು ಇತ್ತು. ನಂತರ ಅದು ತಾಜಮಹಲ್, ಕುತುಬ್ ಮೀನಾರ್ ನಂತಹ ಜಾಗತಿಕ ಪ್ರಸಿದ್ಧ ಸ್ಥಳವೂ ಸೇರಿ, ಶ್ರೀರಂಗಪಟ್ಟಣ, ಮಂಗಳೂರು ಬಳಿ ಮಳಲಿ ಮಸೀದಿ ಸೇರಿದಂತೆ ದೇಶದ ಹಲವೆಡೆ ಮಸೀದಿ ದೇವಸ್ಥಾನವಾಗಿತ್ತು. ಅದರ ಸರ್ವೇ ಆಗಲಿ ಎಂಬ ಕೂಗು ವ್ಯಾಪಿಸಿತು.
ಇದೀಗ ಆರ್‌ಎಸ್‌ಎಸ್‌ನ ಸುಪ್ರೀಂ ಮೋಹನ್ ಭಾಗವತ್ ಸ್ಪಷ್ಟವಾಗಿ, “ಪ್ರತೀ ಮಸೀದಿಯಲ್ಲೂ ಹಿಂದೂ ದೇವರನ್ನು ಹುಡುಕುವ ಹೋರಾಟದಲ್ಲಿ ನಾವಿಲ್ಲ. ಇತಿಹಾಸದ ತಪ್ಪುಗಳನ್ನು ನಾವೂ ಮಾಡಿದ್ದಲ್ಲ, ಮುಸ್ಲಿಮರೂ ಮಾಡಿದ್ದಲ್ಲ. ಒಂದೆರಡು ಪ್ರಮುಖ ಕ್ಷೇತ್ರದ ಕುರಿತು ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಬೇಕು. ಉಳಿದಂತೆ ಹೋರಾಟಕ್ಕೆ ನಾವಿಲ್ಲ” ಎಂದು ಹೇಳಿಬಿಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ನಲ್ಲಿ ಒಂದಿಷ್ಟು ನಿಯಮವಿದೆ. ಅದರಲ್ಲಿ ಒಂದು “ಸೂಚನೆ” ಇದೆ. ಅಂದರೆ ಸಂಘದ ಸ್ವಯಂ ಸೇವಕರಿಗೆ ಮೇಲಿನಿಂದ ಬರುವ ಸೂಚನೆ ಪಾಲಿಸುವುದು ಕಡ್ಡಾಯ. ಅದನ್ನು ಪ್ರಶ್ನಿಸುವಂತಿಲ್ಲ, ಉಲ್ಲಂಘಿಸುವಂತಿಲ್ಲ. ಹಾಗೇ ಮಾಡಿದವರನ್ನು ‘ಉಪೇಕ್ಷೆ’ ಮಾಡುವ ಮೂಲಕ ನಿರ್ಲಕ್ಷ್ಯ ಮಾಡುತ್ತಾರೆ. ಯಾವುದೇ ಜವಾಬ್ದಾರಿ ಕೊಡುವುದಿಲ್ಲ. ತನ್ನಿಂದ ತಾನೇ ಆತ ಮೂಲೆಗೆ ಸರಿಯಬೇಕಾದ ಪರಿಸ್ಥಿತಿ.

ಇದನ್ನೂ ಓದಿರಿ: ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಈಗ ಸಂಘದ ಸಂಯೋಜನೆಯಲ್ಲಿ (ಸಹ ಸಂಘಟನೆಗಳು) ಅನೇಕವಿವೆ. ವಿಹೆಚ್‌ಪಿ, ಬಿಜೆಪಿ, ಅಭಾವಿಪ, ಭಜರಂಗದಳ, ದುರ್ಗಾವಾಹಿನಿ ಇತ್ಯಾದಿ. (ರಾಮ ಸೇನೆ, ಹಿಂದೂ ಮಹಾಸಭಾ ಇದರ ಒಳಗಿರದ ಸ್ವತಂತ್ರ ಸಂಘಟನೆಗಳು. ಆದರೂ ಅವರು ಆರ್‌ಎಸ್‌ಎಸ್‌ಅನ್ನು ವಿರೋಧಿಸುವುದಿಲ್ಲ.)

ಈ ಸಹ ಸಂಘಟನೆಗಳು ಸರ ಸಂಘಚಾಲಕರ ಸೂಚನೆಯನ್ನು ಬೈಠಕ್ ಗಳ ಮೂಲಕ ಪ್ರತೀ ಕಾರ್ಯಕರ್ತರಿಗೆ ತಲುಪಿಸಲೇಬೇಕು. ಅದು ಅನುಶಾಸನದ ನೆಲೆಗಟ್ಟಿನಲ್ಲಿ. (ನಾನು ಸಂಘದಲ್ಲಿ ಇದ್ದಾಗ ಈ ಪದ್ಧತಿ ಇತ್ತು. ಇದೆಲ್ಲಾ ಬದಲಾಗಿರಲಿಕ್ಕಿಲ್ಲವೆಂದು ಭಾವಿಸಿದ್ದೇನೆ.)

ಈಗ ಮೋಹನ್ ಭಾಗವತರ ಮಾತನ್ನು ಸಂಘದ ಪ್ರತಿಯೊಬ್ಬನೂ ಕಡ್ಡಾಯವಾಗಿ ಪಾಲಿಸಲೇಬೇಕು. ಆತ ಬಿಜೆಪಿಯಲ್ಲಿರಲಿ, ಭಜರಂಗದಳದಲ್ಲಿರಲಿ. ಆತ ತಾನು ಆರ್‌ಎಸ್‌ಎಸ್‌ ಅಲ್ಲ, ಕೇವಲ ಬಿಜೆಪಿ ಅಥವಾ ಅಭಾವಿಪ ಎಂದು ಹೇಳಿಕೊಳ್ಳಬಹುದು. ಆಗ ಆತನ ನಿಲುವು ಸಂಘದ್ದು ಆಗಿರುವುದಿಲ್ಲ. ಅದಕ್ಕೆ ಬೆಲೆಯೂ ಇಲ್ಲ. ಸಂಘದ ಹೆಸರು ದುರುಪಯೋಗ ಮಾಡಿಕೊಂಡರೆ ಸಂಘದವರು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.

ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ. ಅದರ ಬಹುತೇಕ ನಾಯಕರು ತಾವು ಆರ್‌ಎಸ್‌ಎಸ್‌ ಎಂದೇ ಹೇಳುವುದು. (ಶಾಖೆಗೆ ಹೋಗದವರೂ ಹಾಗೇ ಹೇಳಿಕೊಳ್ಳುತ್ತಿರುವುದೂ ಇದೆ.)

ಇದನ್ನೂ ಓದಿರಿ: ಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

ಈಶ್ವರಪ್ಪನವರು “ಹೌದ್ರೀ, ಸಂಘದ ಆದೇಶದಂತೆ ನಾವು ನಡೆಯುವುದು… ಏನೀಗ?” ಎಂದು ವಿಧಾನಸೌಧದಲ್ಲೇ ಗುಡುಗಿರುವುದು ದಾಖಲಾಗಿದೆ. ಸಿ.ಟಿ.ರವಿ, ಯತ್ನಾಳ್‌, ಅಶೋಕ್‌, ನಳೀನ್‌ ಇತ್ಯಾದಿ ನಾಯಕರು ತಾವು ಆರ್‌ಎಸ್‌ಎಸ್‌ ಎಂದೇ ಹೇಳುವುದು. ಅದು ನಿಜ ಕೂಡಾ.

ಆರ್‌ಎಸ್‌ಎಸ್‌ನ ಕೆಳ ಹಂತದಿಂದ ರಾಷ್ಟ್ರ ಮಟ್ಟದವರಗೆ ನಿರಂತರವಾಗಿ ಪರಿವಾರ ಬೈಠಕ್ ನಡೆಯುತ್ತದೆ. ಅಲ್ಲಿ ಕೆಲವು ವಿಷಯಗಳಲ್ಲಿ ಅಭಿಪ್ರಾಯ ಕ್ರೂಢೀಕರಿಸಿ ಬೈಠಕ್ ಆಗುತ್ತದೆ. ಏಕ ಅಭಿಪ್ರಾಯ ಘೋಷಣೆಯಾಗುತ್ತದೆ. ಜಿಲ್ಲಾಮಟ್ಟದಿಂದ ರಾಷ್ಟ್ರ ಮಟ್ಟದತನಕ ಆರ್‌ಎಸ್‌ಎಸ್‌ನ ಓರ್ವ ವ್ಯಕ್ತಿಯನ್ನು ಸಂಘಟನಾ ಕಾರ್ಯದರ್ಶಿ ಎಂದು ಬಿಜೆಪಿಗೆ ನೀಡಲಾಗುತ್ತದೆ. ಆತ ಸಂಘ ಮತ್ತು ಬಿಜೆಪಿ ನಡುವೆ co-ordinator ಆಗಿ ಕಾರ್ಯ ನಿರ್ವಹಿಸುತ್ತಾನೆ. ಬಿಜೆಪಿಗೆ ಸಂಘ ಕೇವಲ ಸಲಹೆ ಕೊಡುವುದಲ್ಲ, ಆದೇಶ ಅಥವಾ ಸೂಚನೆಯನ್ನೂ ಕೊಡುತ್ತದೆ. ಅಲ್ಲಿಗೆ ಸಂಘ ಪಕ್ಷ ರಾಜಕಾರಣದಲ್ಲಿ ನೇರ ಪಾತ್ರ ವಹಿಸುತ್ತದೆ.

ಸಂಘ ಒಂದು ಸಂಘಟನೆಯಾಗಿ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿದೆ. ಅದು ಸಾರ್ವಜನಿಕವಾಗಿ ತನ್ನನ್ನು ತಾನು ತೆರೆದುಕೊಂಡಿದೆ. ಹೀಗಿರುವಾಗ ನೀವು ಸಂಘದ ವಿಮರ್ಶೆ ಮಾಡಬಾರದು, ಪ್ರಶ್ನೆ ಕೇಳಬಾರದು ಅನ್ನುವುದು ಸರಿಯಲ್ಲ. ಅದು ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೀಯತೆಯನ್ನು ಬೆಳೆಸುವ ಪಾರದರ್ಶಕ ಸಂಸ್ಥೆ ಎಂದು ಘೋಷಣೆ ಮಾಡಿಕೊಂಡಿರುವಾಗ ಮತ್ತು ದಿನನಿತ್ಯ ಒಂದಿಲ್ಲ ಒಂದು ದೇಶದ ಸಾರ್ವಜನಿಕ ಬದುಕಿನ ಸಂಗತಿಗಳಲ್ಲಿ ಪಾಲ್ಗೊಳ್ಳುವಾಗ ಅದರ ಕುರಿತು ಚರ್ಚೆ ತೀರಾ ಸಹಜ ಪ್ರತಿಕ್ರಿಯೆ ಆಗಿದೆ.

ಸಂಘದಿಂದಲೇ ಬಂದ ಮತ್ತು ಖಡಕ್ಕಾಗಿ ಹಾಗೇ ಹೇಳಿಕೊಳ್ಳುವ ಮಂತ್ರಿಗಳ ಭ್ರಷ್ಟಾಚಾರ ಅಥವಾ ಯಾವುದಾರೂ ತಪ್ಪು ಆದಾಗ ಅದು ವೈಯಕ್ತಿಕ ಎಂದು ಹೇಳಿ ಮುಗಿಸಲಾಗದು. ಅದು ಸಂಘದ product. ಕಾಂಗ್ರೆಸ್ ಕಮ್ಯುನಿಸ್ಟ್‌ನ productಗಳು ಸರಿ ಇಲ್ಲದಿದ್ದರೆ ಹೇಗೆ ಉತ್ತರದಾಯಿತ್ವವಾಗುತ್ತದೋ ಹಾಗೇ ಸಂಘವೂ ಉತ್ತರದಾಯಿತ್ವವಾಗುತ್ತದೆ.

ನಾವು ಸಂಘಕ್ಕೆ ಹೋಗುತ್ತಿದ್ದಾಗ, ನೀವು ಯಾವ ಪಕ್ಷಕ್ಕೇ ಬೇಕಾದರೂ ಹೋಗಿ, ಒಳ್ಳೆಯವರಾಗಿರಿ, ರಾಷ್ಟ್ರೀಯವಾದಿಗಳಾಗಿರಿ ಅಂತಿತ್ತು. 1989ರ ನಂತರ ಅದು ಹಿಂದುತ್ವ ಆಧರಿತ ಬಿಜೆಪಿಯನ್ನು ಬೆಂಬಲಿಸಿತು. ಈಗ ಸಂಘದವರು ನೇರ ಬಿಜೆಪಿಯೇ ಆಗಿರಬೇಕು ಅನ್ನುವ ಅಲಿಖಿತ ನಿಯಮ ಬಂದಾಗಿದೆ. ಹಾಗಾಗಿ ಬಿಜೆಪಿ ಅಂದರೆ ಸಂಘ. ಸಂಘದವರು ಬಿಜೆಪಿಯಾಗಿದೆ. ಇಲ್ಲಿ ರಾಜಕೀಯವಾಗಿ ಬೇರೆ ಪಕ್ಷದ ಪ್ರವೇಶವಾಗುವುದಿಲ್ಲ. ಬಿಜೆಪಿ ಪ್ರಮುಖ ನಾಯಕ ತಾನು ಆರ್‌ಎಸ್‌ಎಸ್‌ ಎಂದು ಪದೇ ಪದೇ ಹೇಳುತ್ತ, ರಾಜಕಾರಣದಲ್ಲಿ ಮಾತನಾಡುವಾಗ ಅದು ಆರ್‌ಎಸ್‌ಎಸ್‌ ಹೊರತುಪಡಿಸಿ ಅನ್ನುವುದು ಕಷ್ಟಸಾಧ್ಯ.

ಈಗ ಬಿಜೆಪಿ ಮುಸ್ಲಿಂ ಧರ್ಮಕ್ಕೆ ಅಪಮಾನ ಮಾಡಿದೆ ಎಂದು ವಕ್ತಾರರನ್ನು ತೆಗೆದಿದೆ. ಭಾಗವತ್ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ತಾವು ಆರ್‌ಎಸ್‌ಎಸ್‌ ಎಂದು ಹೇಳಿಕೊಳ್ಳುವ ಸ್ವಯಂ ಸೇವಕ ಬಿಜೆಪಿ ಅಥವಾ ಭಜರಂಗದಳ ಅಥವಾ ಜಾಗರಣ ವೇದಿಕೆ ಎಲ್ಲಿಯೇ ಇರಲಿ ಆತ ಇನ್ನು ಮುಂದೆ ಹೊಸ ಹೊಸ ಮಸೀದಿಯಲ್ಲಿ ದೇವರನ್ನು ಹುಡುಕುವಂತಿಲ್ಲ, ಇಸ್ಲಾಂ ಧರ್ಮವನ್ನು ಅವಹೇಳನ ಮಾಡುವಂತಿಲ್ಲ. ಹಾಗೆ ಮಾಡುವುದು ಮಾತೃ ದ್ರೋಹವಾಗುತ್ತದೆ. ಪರಿವಾರದಲ್ಲಿರದ, ಆದರೆ ಆರ್‌ಎಸ್‌ಎಸ್‌ ತನ್ನ ತಾಯಿ ಅನ್ನುವ ಮುತಾಲಿಕರಂಥವರೂ ಕೂಡಾ ತಮ್ಮ ನಿಲುವು ಬದಲಿಸಬೇಕು ಅಥವಾ ಆರ್‌ಎಸ್‌ಎಸ್‌ಗೆ ವಿರುದ್ದ ನಿಲ್ಲಬೇಕು.

ಜಗತ್ತಿನ ಹಳೆಯ ಇತಿಹಾಸ ಯುದ್ಧ ಯುಗ. ಹಿಂದೂಗಳ ಮೇಲೆ ಮೊಘಲರು, ಡಚ್ಚರು, ಪೋರ್ಚುಗೀಸರು, ಬ್ರಿಟಿಷರು, ಗ್ರೀಕರು ಹೀಗೆ ಹಲವರ ಆಕ್ರಮಣವಾಗಿದೆ. ಹಿಂದೂ ರಾಜರ ಮೇಲೆ ಹಿಂದೂ ರಾಜರ, ಮುಸ್ಲಿಂ ರಾಜನ ಮೇಲೆ ಮುಸ್ಲಿಂ ರಾಜನ, ಬೌದ್ಧರ ಮೇಲೆ ಹಿಂದೂಗಳ, ಜೈನರ ಮೇಲೆ ಹಿಂದೂಗಳ, ಹಿಂದೂಗಳ ಮೇಲೆ ಬೌದ್ಧರ ಹೀಗೆ ಯಾವುದೂ ಆಗಿಲ್ಲ ಅನ್ನುವಂತಿಲ್ಲ. ಅನೇಕ ದೇಶಗಳ ಇತಿಹಾಸವೂ ಇದೇ ರೀತಿ. ನಮ್ಮದು ಮಾತ್ರವಲ್ಲ. ಯಾಕೆಂದರೆ ಅದು ಯುದ್ಧ ಯಗ. ಹಾಗಾಗಿ ಭಾಗವತ್ ಅವರ ನಿರ್ಧಾರ ಸರಿ. ಅದನ್ನು ಜಾರಿಗೆ ತರಬೇಕಾದುದು ಮತ್ತು ಸಂಘದವರಲ್ಲದಿದ್ದರೂ ಸಂಘದ ಹೆಸರು ಹೇಳಿ, ಹಾದಿ ಬೀದಿಯಲ್ಲಿ ಹಿಂದುತ್ವದ ಗಲಾಟೆ ಮಾಡುವವರನ್ನು ನಿಯಂತ್ರಣ ಮಾಡಬೇಕಾದುದೂ ಅವರೇ. ಯಾಕೆಂದರೆ ಅವರದೇ ಸರ್ಕಾರ ಈಗ ಇರುವುದು.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಹಳೆಯದನ್ನೆಲ್ಲ, ಈಗ ಸರಿ ಮಾಡುತ್ತೇನೆ. ಭಾರತದ 30 ಸಾವಿರ ಮಸೀದಿ ಒಳಗಡೆ ಹುಡುಕುತ್ತೇನೆ, ಬೌದ್ಧರ ಸ್ತೂಪಗಳು, ಜೈನರ ಬಸದಿಗಳು ದೇವಸ್ಥಾನವಾಗಿದೆ ಅದನ್ನೂ ಅಗೆದು ನೋಡುತ್ತೇನೆ ಎನ್ನುವುದು ಹೊಸ ಜಗತ್ತಿನಲ್ಲಿ ಅಸಾಧ್ಯವಾದುದು. ಇಂದಿನ ಜಗತ್ತು ಪರಸ್ಪರ ತಳುಕು ಹಾಕಿಕೊಂಡಾಗಿದೆ. ಒಬ್ಬರನ್ನೊಬ್ಬರು ಬಿಟ್ಟು ಬದುಕದ ನಿಸರ್ಗ ನಿಯಮವೊಂದು ನಮ್ಮನ್ನು ಆವರಿಸಿಯಾಗಿದೆ. ಅದಕ್ಕೆ ಬಿಜೆಪಿ ವಕ್ತಾರರು ಹುದ್ದೆ ಕಳೆದುಕೊಂಡದ್ದು. ಮುಸ್ಲಿಂ ವ್ಯಾಪಾರಿಯೊಂದಿಗೆ ಕೋಟ್ಯಾಂತರ ವ್ಯವಹಾರ ಕುದುರಿಸಿದ ಮೋದಿ ಸರ್ಕಾರ, ಏಕಾಏಕಿ ಮುಸ್ಲಿಂ ಧರ್ಮ ಅವಹೇಳನ ಆಗುವಾಗ ಮೌನಕ್ಕೆ ಸರಿಯುವಂತಿಲ್ಲ. ಮುಸ್ಲಿಂ ರಾಷ್ಟ್ರಗಳಲ್ಲಿ ನಮ್ಮವರ ವರ್ತನೆಗಳನ್ನು ಗಂಭೀರವಾಗಿಸಿ, ಅಲ್ಲಿಯೂ ವ್ಯಾಪಾರ ವಹಿವಾಟು ಬಹಿಷ್ಕಾರ , ಭಾರತೀಯ ಉದ್ಯೋಗಿಗಳನ್ನು ಕೈಬಿಡುವ ಚಿಂತನೆ ಜೋರಾಗಿದೆ. ನಾವು ಸಾಮೂಹಿಕವಾಗಿ ಮಸೀದಿ ಅಗೆದರೆ, ನಿಮ್ಮ ದೇವಸ್ಥಾನದಲ್ಲಿ ಬಸದಿಯಿದೆ, ಬೌದ್ಧ ವಿಹಾರವಿದೆ, ಶೈವ ವೈಷ್ಣವ, ಹನುಮನ ಹುಟ್ಟು ಹೀಗೆ ಪಟ್ಟಿ ಬೆಳೆದರೆ ದೇಶ ಛಿದ್ರವಾಗುತ್ತದೆ. ಹಾಗೇ ಆಗಬಾರದು ಅನ್ನುವುದು ರಾಷ್ಟ್ರೀಯವಾದ.

ಇತಿಹಾಸ ಬೇಕು ನಿಜ. ಆದರೆ ಭೌತಿಕವಾಗಿ ಇತಿಹಾಸವನ್ನು ತಿದ್ದುವುದೇ ವರ್ತಮಾನವಾದರೆ ಭವಿಷ್ಯ ಭಯಾನಕವಾಗುತ್ತದೆ. ಯಾಕೆಂದರೆ ಇತಿಹಾಸ ಬಹುತೇಕ ಯುದ್ಧಯಗವಾಗಿತ್ತು. ಅದಕ್ಕೆ ವರ್ತಮಾನದ ನಾವು ಯಾರೂ ಉತ್ತರದಾಯಿಯೂ ಅಲ್ಲ, ಜವಾಬ್ದಾರಿಯೂ ಅಲ್ಲ. ನಾವು ಭವಿಷ್ಯದ ಸುಂದರ ಚಿತ್ರವೊಂದಕ್ಕೆ ನಕ್ಷೆ ಬರೆದು ಬರುವ ನಾಳೆಗೆ ಅದನ್ನು ಕಟ್ಟಿಕೊಡುವುದೇ ವರ್ತಮಾನವಾಗಬೇಕು. ನಮ್ಮ ವರ್ತಮಾನವೇ ನಾಳೆಗೆ ಇತಿಹಾಸ. ಹಳೆಯದನ್ನು ಬಿಟ್ಟು, ಹೊಸತನ್ನು ಕಟ್ಟುವ. ನಮ್ಮ ಮುಂದಿನ ಪೀಳಿಗೆ ನಮ್ಮ ಇತಿಹಾಸವನ್ನು ಕಣ್ಣರಳಿಸಿ ವಾವ್… ಎಂಬ ಉದ್ಗಾರ ತೆಗೆಯುವಂತೆ ಮಾಡೋಣ.

(ಲೇಖಕರು, ಸಂಘ ಪರಿವಾರದ ಮಾಜಿ ನಾಯಕರು, ಕರಾವಳಿಯ ಭಾಗದ ಶಿಕ್ಷಣತಜ್ಞರೂ ಹೌದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...