ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್ಪಿ-ಬಜರಂಗದಳ ಸಂಚಾಲಕನೊಬ್ಬ ತನ್ನ ಸಂಘಟನೆಯ ಕಾರ್ಯಕರ್ತನ ಪತ್ನಿಯನ್ನೇ ಅಪಹರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿದೆ.
ಆರೋಪಿಯನ್ನು ಕಾರ್ಕಳ ಬಜರಂಗದಳದ ಭಜಗೋಳಿ ವಲಯ ಸಹ ಸಂಚಾಲಕನಾಗಿರುವ ಸಂದೀಪ್ ಆಚಾರ್ಯ ಎಂದು ಗುರುತಿಸಲಾಗಿದೆ.
ಇದನ್ನೂಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ
ಶಿರ್ಲಾಲು ಹೈಸ್ಕೂಲ್ ಬಳಿ ಹಾಡಿಯಂಗಡಿ ನಿವಾಸಿ, ಬಜರಂಗದಳ ಕಾರ್ಯಕರ್ತ ಎನ್ನಲಾಗಿರುವ ಹರೀಶ್ ಎಂಬರವ ಪತ್ನಿಯನ್ನು ಆರೋಪಿಯು ಅಪಹರಿಸಿರುವುದಾಗಿ ದೂರಲಾಗಿದೆ. ಅಪಹರಣಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಮಹಿಳೆಯ ಸಹೋದರ ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿದ್ದರು.
ಮಹಿಳೆಯು ವಾರದ ಹಿಂದೆ ತನ್ನ ಎರಡು ವರ್ಷದ ಮಗುವಿನೊಂದಿಗೆ ತವರು ಮನೆಗೆ ತೆರಳಿದ್ದರು. ಈ ವೇಳೆ ಆರೋಪಿ ಸಂದೀಪ್ ಆಚಾರ್ಯ ಮಹಿಳೆಯನ್ನು ಅಪಹರಿಸಿದ್ದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಮಹಿಳೆಯ ಸಹೋದರ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿದ್ದ ಪೊಲೀಸರು, ಮಹಿಳೆ ಮತ್ತು ಆರೋಪಿ ಸಂದೀಪ್ ಆಚಾರ್ಯನನ್ನು ಪತ್ತೆ ಹಚ್ಚಿದ್ದಾರೆ. ಮಹಿಳೆಯನ್ನು ಮಂಗಳೂರಿನ ಪ್ರಜ್ಞಾ ಕೌನ್ಸಿಲಿಂಗ್ ಕೇಂದ್ರಕ್ಕೆ ಸೇರಿಸಲಾಗಿದೆ ಎಂದು ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ವಾರ್ತಾಭಾರತಿ ವರದಿ ಮಾಡಿದೆ.
ಇದನ್ನೂಓದಿ: ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ