Homeಮುಖಪುಟಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

‘ಗೋದ್ರಾ ಆದಮೇಲೆ ಏನಾಯ್ತು ಗೊತ್ತ? 2002ರ ಇತಿಹಾಸ ನೆನಪಿಸಿಕೊಳ್ಳಿ. 48 ಜನ ರಾಮಭಕ್ತರನ್ನು ಕೊಂದ ಮೇಲೆ ಆದ ಪ್ರತಿಕಾರವಿದೆಯಲ್ಲ ಅದು ಎಲ್ಲೂ ಆಗಬಾರದು. ಅದಕ್ಕಾಗಿ ನೀವು ದಯವಿಟ್ಟು ಮನೆಯಲ್ಲಿ ದಿನಕ್ಕೆ ಐದು ಸಾರಿ ನಮಾಜ್‌ ಮಾಡಿಕೊಂಡಿರಿ'

- Advertisement -
- Advertisement -

‘ಗೋದ್ರಾ ಆದಮೇಲೆ ಏನಾಯ್ತು ಗೊತ್ತ? 2002ರ ಇತಿಹಾಸ ನೆನಪಿಸಿಕೊಳ್ಳಿ. 48 ಜನ ರಾಮಭಕ್ತರನ್ನು ಕೊಂದ ಮೇಲೆ ಆದ ಪ್ರತಿಕಾರವಿದೆಯಲ್ಲ ಅದು ಎಲ್ಲೂ ಆಗಬಾರದು. ಅದಕ್ಕಾಗಿ ನೀವು ದಯವಿಟ್ಟು ಮನೆಯಲ್ಲಿ ದಿನಕ್ಕೆ ಐದು ಸಾರಿ ನಮಾಜ್‌ ಮಾಡಿಕೊಂಡಿರಿ’ ಎಂದು ಬಹಿರಂಗ ಕಾರ್ಯಕ್ರಮದಲ್ಲಿ ಬಜರಂಗದಳದ ಮುಖಂಡ ಉಲ್ಲಾಸ್‌ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ.

ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಜಂಟಿಯಾಗಿ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಆಯೋಜಿಸಿದ್ದ ಬಹಿರಂಗ ಕಾರ್ಯಕ್ರಮದಲ್ಲಿ ಕೋಮುಸೌಹಾರ್ದತೆ ಕದಡುವಂತಹ ಹೇಳಿಕೆ ನೀಡಿದ್ದಾರೆ.

‘ನಾವು ಮೆರವಣಿಗೆ ಕರೆದುಕೊಂಡು ಬರುವುದು ವರ್ಷಕ್ಕೊಂದು ಸಲ. ಇದು ಕೇವಲ ಟ್ರೇಲರ್‌ ಅಷ್ಟೆ. ಇನ್ನೆರಡು ತಿಂಗಳು ಕಾಯಿರಿ. ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ. ಇನ್ನು ಮುಂದೆ ಪ್ರತಿ ಆರು ತಿಂಗಳಿಗೊಮ್ಮೆ ಆರ್‌ಎಸ್‌ಎಸ್, ಬಜರಂಗದಳ ಮತ್ತು ವಿಎಚ್‌ಪಿ ನಾಯಕತ್ವದಲ್ಲಿ ಪಿಕ್ಚರ್‌ ತೋರಿಸುತ್ತೇವೆ’ ಎನ್ನುವ ಮೂಲಕ ಮತೀಯ ದ್ವೇಷಕಾರಿದ್ದಾರೆ.

ಬಹಿರಂಗ ಸಭೆಗೂ ಮೊದಲು ನಡೆದ ಪ್ರತಿಭಟನಾ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯ ಮತ್ತು ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ್ದಾರೆ’ ಎಂದು ಸುನ್ನಿ ಮುಸ್ಲಿಂ ಜಮಾತ್‌ ಕಮಿಟಿ ಆರೋಪಿಸಿದೆ.

ಈ ಪ್ರಕರಣ ಕುರಿತಂತೆ ತಹಶೀಲ್ದಾರರಿಗೆ ದೂರು ನೀಡಿರುವ ಮುಸ್ಲಿಂ ಜಮಾತ್ ಕಮಿಟಿಯು, ‘ಇಸ್ಲಾಂ ಧರ್ಮ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಘೋಷಣೆ ಕೂಗಿ, ಜಾತಿ ನಿಂದನೆ ಮಾಡಿದ್ದಾರೆ. ಈ ಮೂಲಕ ಮುಸ್ಲಿಂ ಸಮುದಾಯದ ಬಗ್ಗೆ ಪ್ರಚೋದನಕಾರಿ, ಅವಹೇಳನಕಾರಿ ಘೋಷಣೆಗಳನ್ನು ಮತ್ತು ಬೆದರಿಕೆಯ ಹೇಳಿಕೆಗಳನ್ನು ನೀಡಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವಿಎಚ್‌ಪಿ ಬಜರಂಗದಳ ನಾಯಕರ ಮೇಲೆ ಕಠಿಣವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರಸೀಕೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ತಿಮ್ಮಯ್ಯನವರು, “ಎರಡೂ ಕಡೆಯಿಂದಲೂ ಕೋಮುವಾದಿ ಭಾಷಣಗಳು ನಡೆದಿವೆ. ಮುಸ್ಲಿಂ ಗುಂಪುಗಳು ಸಹ ಬಜರಂಗದಳದ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಕುರಿತು ಒಟ್ಟು ಎರಡೂ ಕಡೆಯವರ ಮೇಲೆ ಒಟ್ಟು 7 ಪ್ರಕರಣಗಳು ದಾಖಲಾಗಿವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...