Homeಮುಖಪುಟಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

‘ಗೋದ್ರಾ ಆದಮೇಲೆ ಏನಾಯ್ತು ಗೊತ್ತ? 2002ರ ಇತಿಹಾಸ ನೆನಪಿಸಿಕೊಳ್ಳಿ. 48 ಜನ ರಾಮಭಕ್ತರನ್ನು ಕೊಂದ ಮೇಲೆ ಆದ ಪ್ರತಿಕಾರವಿದೆಯಲ್ಲ ಅದು ಎಲ್ಲೂ ಆಗಬಾರದು. ಅದಕ್ಕಾಗಿ ನೀವು ದಯವಿಟ್ಟು ಮನೆಯಲ್ಲಿ ದಿನಕ್ಕೆ ಐದು ಸಾರಿ ನಮಾಜ್‌ ಮಾಡಿಕೊಂಡಿರಿ'

- Advertisement -
- Advertisement -

‘ಗೋದ್ರಾ ಆದಮೇಲೆ ಏನಾಯ್ತು ಗೊತ್ತ? 2002ರ ಇತಿಹಾಸ ನೆನಪಿಸಿಕೊಳ್ಳಿ. 48 ಜನ ರಾಮಭಕ್ತರನ್ನು ಕೊಂದ ಮೇಲೆ ಆದ ಪ್ರತಿಕಾರವಿದೆಯಲ್ಲ ಅದು ಎಲ್ಲೂ ಆಗಬಾರದು. ಅದಕ್ಕಾಗಿ ನೀವು ದಯವಿಟ್ಟು ಮನೆಯಲ್ಲಿ ದಿನಕ್ಕೆ ಐದು ಸಾರಿ ನಮಾಜ್‌ ಮಾಡಿಕೊಂಡಿರಿ’ ಎಂದು ಬಹಿರಂಗ ಕಾರ್ಯಕ್ರಮದಲ್ಲಿ ಬಜರಂಗದಳದ ಮುಖಂಡ ಉಲ್ಲಾಸ್‌ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ.

ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಜಂಟಿಯಾಗಿ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಆಯೋಜಿಸಿದ್ದ ಬಹಿರಂಗ ಕಾರ್ಯಕ್ರಮದಲ್ಲಿ ಕೋಮುಸೌಹಾರ್ದತೆ ಕದಡುವಂತಹ ಹೇಳಿಕೆ ನೀಡಿದ್ದಾರೆ.

‘ನಾವು ಮೆರವಣಿಗೆ ಕರೆದುಕೊಂಡು ಬರುವುದು ವರ್ಷಕ್ಕೊಂದು ಸಲ. ಇದು ಕೇವಲ ಟ್ರೇಲರ್‌ ಅಷ್ಟೆ. ಇನ್ನೆರಡು ತಿಂಗಳು ಕಾಯಿರಿ. ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ. ಇನ್ನು ಮುಂದೆ ಪ್ರತಿ ಆರು ತಿಂಗಳಿಗೊಮ್ಮೆ ಆರ್‌ಎಸ್‌ಎಸ್, ಬಜರಂಗದಳ ಮತ್ತು ವಿಎಚ್‌ಪಿ ನಾಯಕತ್ವದಲ್ಲಿ ಪಿಕ್ಚರ್‌ ತೋರಿಸುತ್ತೇವೆ’ ಎನ್ನುವ ಮೂಲಕ ಮತೀಯ ದ್ವೇಷಕಾರಿದ್ದಾರೆ.

ಬಹಿರಂಗ ಸಭೆಗೂ ಮೊದಲು ನಡೆದ ಪ್ರತಿಭಟನಾ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯ ಮತ್ತು ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ್ದಾರೆ’ ಎಂದು ಸುನ್ನಿ ಮುಸ್ಲಿಂ ಜಮಾತ್‌ ಕಮಿಟಿ ಆರೋಪಿಸಿದೆ.

ಈ ಪ್ರಕರಣ ಕುರಿತಂತೆ ತಹಶೀಲ್ದಾರರಿಗೆ ದೂರು ನೀಡಿರುವ ಮುಸ್ಲಿಂ ಜಮಾತ್ ಕಮಿಟಿಯು, ‘ಇಸ್ಲಾಂ ಧರ್ಮ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಘೋಷಣೆ ಕೂಗಿ, ಜಾತಿ ನಿಂದನೆ ಮಾಡಿದ್ದಾರೆ. ಈ ಮೂಲಕ ಮುಸ್ಲಿಂ ಸಮುದಾಯದ ಬಗ್ಗೆ ಪ್ರಚೋದನಕಾರಿ, ಅವಹೇಳನಕಾರಿ ಘೋಷಣೆಗಳನ್ನು ಮತ್ತು ಬೆದರಿಕೆಯ ಹೇಳಿಕೆಗಳನ್ನು ನೀಡಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವಿಎಚ್‌ಪಿ ಬಜರಂಗದಳ ನಾಯಕರ ಮೇಲೆ ಕಠಿಣವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರಸೀಕೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ತಿಮ್ಮಯ್ಯನವರು, “ಎರಡೂ ಕಡೆಯಿಂದಲೂ ಕೋಮುವಾದಿ ಭಾಷಣಗಳು ನಡೆದಿವೆ. ಮುಸ್ಲಿಂ ಗುಂಪುಗಳು ಸಹ ಬಜರಂಗದಳದ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಕುರಿತು ಒಟ್ಟು ಎರಡೂ ಕಡೆಯವರ ಮೇಲೆ ಒಟ್ಟು 7 ಪ್ರಕರಣಗಳು ದಾಖಲಾಗಿವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...