Homeಕರ್ನಾಟಕಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಇಂದು (ಮಂಗಳವಾರ) ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆಯಾಯಿತು.

ಮೇ 10ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಹಲವಾರು ಜನಪ್ರಿಯ ಯೋಜನೆಗಳೊಂದಿಗೆ ಪ್ರಣಾಳಿಕೆ ಬಿಡುಗಡೆ ಮಾಡುತ್ತದೆ ಎಂದು ಹೇಳಲಾಗಿತ್ತು ಅದರಂತೆ ಇಂದು ‘ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್‌ ಬದ್ದತೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ”ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ’ ಎಂಬ ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ಘೋಷಿಸಿರುವ ಪ್ರಮುಖ ಯೋಜನೆಗಳು: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ, ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪ್ರಣಾಳಿಗೆ ಹೊಂದಿದೆ.

ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿಯೂ ಹೇಳಿದೆ. ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ,  ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ, ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ, ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.

ಕಾಂಗ್ರೆಸ್ ಪಕ್ಷದ ಘೋಷಣೆಗಳ ಸಂಕ್ಷಿಪ್ತ ಚಿತ್ರಣ:

  • ಸರ್ಕಾರದಲ್ಲಿ ಖಾಲಿ ಇರುವ ಎಲ್ಲಾ ಅನುಮೋಧಿತ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರೂ.ಗಳಿಂದ 15,000 ರೂಪಾಯಿಗೆ ಹೆಚ್ಚಳ
  • ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನ 7,500 ರೂ.ಗಳಿಂದ 10,000 ರೂಪಾಯಿಗೆ ಏರಿಕೆ
  • ಆಶಾ ಕಾರ್ಯಕರ್ತೆಯರ ನಿಶ್ಚಿತ ಗೌರವ ಧನ 5000 ರೂ.ಗಳಿಂದ 8,000 ರೂ.ಗೆ ಹೆಚ್ಚಳ
  • ಬಿಸಿಯೂಟದ ಅಡಿಗೆಯವರ ಗೌರವ ಧನ 3,600 ರೂ.ಗಳಿಂದ 6,000 ರೂಪಾಯಿಗೆ ಹೆಚ್ಚಳ
  • ಪೊಲೀಸ್ ವ್ಯವಸ್ಥೆಯಲ್ಲಿ ಶೇ.33ರಷ್ಟು ಮಹಿಳೆ ಇರುವಂತೆ ನೇಮಕಾತಿ. ಕನಿಷ್ಠ ಶೇ.1ರಷ್ಟು ತೃತೀಯ ಲಿಂಗಿಗಳಿಗೆ ಮೀಸಲಾತಿ
  • ಭಜರಂಗದಳ ನಿಷೇಧ
  • ರೈತರಿಗೆ ಬಡ್ಡಿ ರಹಿತ ಸಾಲ 3 ಲಕ್ಷದಿಂದ 10 ಲಕ್ಷದವರೆಗೆ ವಿಸ್ತರಣೆ
  • ಗ್ರಾಮೀಣ ಕೃಷಿಕ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ
  • ಪಶುಭಾಗ್ಯ- ಹಸು/ ಎಮ್ಮೆ ಖರೀದಿಗೆ ಬಡ್ಡಿರಹಿತ 3 ಲಕ್ಷ ಸಾಲ
  • ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ
  • ಪ್ರತಿ ಕ್ಷೇತ್ರದಲ್ಲಿ ಶಿತಲೀಕರಣ ಘಟಕ ಸ್ಥಾಪನೆ
  • ಬಿಜೆಪಿ ತಂದಿರುವ ಕೃಷಿ ಕಾಯ್ದೆಗಳು ರದ್ಧು
  • ಎಪಿಎಂಸಿ ಕಾಯ್ದೆ ರದ್ಧು ಪಡಿಸುತ್ತೇವೆ
  • ರೈತರ ಮೇಲಿನ ಎಲ್ಲಾ ಕೇಸ್ ವಾಪಸ್
  • ಪ್ರತಿ ಜಿಲ್ಲೆಗೆ ಒಂದು ರೈತ ಮಾಲ್ ಆರಂಭ
  • ಸಾವಯವ ಕೃಷಿ ಯೋಜನೆಗೆ 2500ಕೋಟಿ ಹೂಡಿಕೆ
  • ನೇಗಿಲ ತುಡಿತ ಹೆಸರಿನಲ್ಲಿ ಮಂಡಳಿ ಸ್ಥಾಪನೆ
  • ಹನಿ,ತುಂತುರು ನೀರಾವರಿಗೆ ೧೦೦ ರಷ್ಟು ಸಬ್ಸಿಡಿ
  • ಸೌರ ಪಂಪ್ ಸೆಟ್ ಯೋಜನೆಗೆ ಸಬ್ಸಿಡಿ
  • ಬೀದರ್,ಕಲಬುರಗಿಯಲ್ಲಿ ಕೃಷಿ ಉತ್ಪನ್ನ ಸಂಶೋಧನಾ ಸಂಸ್ಥೆ
  • ಚಾಮರಾಜನಗರದಲ್ಲಿ ಅರಣ್ಯ ಸಂಶೋಧನಾ ಸಂಸ್ಥೆ
  • ಗ್ರಾ.ಪಂ ವ್ಯಾಪ್ತಿಯಲ್ಲಿ ಯಾಂತ್ರೀಕರಣ ಸೌಲಭ್ಯ
  • ಪತ್ರಕರ್ತರ ಕ್ಷೇಮಾಭಿವೃದ್ಧಿ ಸ್ಥಾಪನೆ- 500 ಕೋಟಿ
  • ಸ್ವಸಹಾಯ ಗುಂಪುಗಳಿಗೆ 3 ಲಕ್ಷ ಬಡ್ಡಿರಹಿತ ಸಾಲ
  • ಪ್ರತ್ಯೇಕ ಕೃಷಿ ಕೋಶ ಕೇಂದ್ರ ಸ್ಥಾಪನೆ
  • ಗದಗದಲ್ಲಿ ಹತ್ತಿ ರಫ್ತು ಸಂಸ್ಕರಣ ಕೇಂದ್ರ
  • ಸಿಂಧನೂರಿನಲ್ಲಿ ಅಕ್ಕಿ ಸಂಸ್ಕರಣ ಕೇಂದ್ರ
  • ಬೆಳಗಾವಿ, ಬಾಗಲಕೋಟೆ, ಮಂಡ್ಯದಲ್ಲಿ ಎಥೆನಾಲ್ ಘಟಕ
  • ಕೊಡಗು,ಚಿಕ್ಕಮಗಳೂರಿನಲ್ಲಿ ಕಾಳು ಮೆಣಸು ಸಂಸ್ಕರಣೆ
  • ದೊಡ್ಡಬಳ್ಳಾಪುರದಲ್ಲಿ ಹೂ ಸಂಶೋಧನಾ ಕೇಂದ್ರ
  • ಜೇನು ಸಾಕಾಣಿಕೆಗೆ 50 ಕೋಟಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...