Homeಕರ್ನಾಟಕಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಇಂದು (ಮಂಗಳವಾರ) ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆಯಾಯಿತು.

ಮೇ 10ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಹಲವಾರು ಜನಪ್ರಿಯ ಯೋಜನೆಗಳೊಂದಿಗೆ ಪ್ರಣಾಳಿಕೆ ಬಿಡುಗಡೆ ಮಾಡುತ್ತದೆ ಎಂದು ಹೇಳಲಾಗಿತ್ತು ಅದರಂತೆ ಇಂದು ‘ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್‌ ಬದ್ದತೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ”ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ’ ಎಂಬ ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ಘೋಷಿಸಿರುವ ಪ್ರಮುಖ ಯೋಜನೆಗಳು: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ, ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪ್ರಣಾಳಿಗೆ ಹೊಂದಿದೆ.

ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿಯೂ ಹೇಳಿದೆ. ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ,  ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ, ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ, ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.

ಕಾಂಗ್ರೆಸ್ ಪಕ್ಷದ ಘೋಷಣೆಗಳ ಸಂಕ್ಷಿಪ್ತ ಚಿತ್ರಣ:

  • ಸರ್ಕಾರದಲ್ಲಿ ಖಾಲಿ ಇರುವ ಎಲ್ಲಾ ಅನುಮೋಧಿತ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರೂ.ಗಳಿಂದ 15,000 ರೂಪಾಯಿಗೆ ಹೆಚ್ಚಳ
  • ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನ 7,500 ರೂ.ಗಳಿಂದ 10,000 ರೂಪಾಯಿಗೆ ಏರಿಕೆ
  • ಆಶಾ ಕಾರ್ಯಕರ್ತೆಯರ ನಿಶ್ಚಿತ ಗೌರವ ಧನ 5000 ರೂ.ಗಳಿಂದ 8,000 ರೂ.ಗೆ ಹೆಚ್ಚಳ
  • ಬಿಸಿಯೂಟದ ಅಡಿಗೆಯವರ ಗೌರವ ಧನ 3,600 ರೂ.ಗಳಿಂದ 6,000 ರೂಪಾಯಿಗೆ ಹೆಚ್ಚಳ
  • ಪೊಲೀಸ್ ವ್ಯವಸ್ಥೆಯಲ್ಲಿ ಶೇ.33ರಷ್ಟು ಮಹಿಳೆ ಇರುವಂತೆ ನೇಮಕಾತಿ. ಕನಿಷ್ಠ ಶೇ.1ರಷ್ಟು ತೃತೀಯ ಲಿಂಗಿಗಳಿಗೆ ಮೀಸಲಾತಿ
  • ಭಜರಂಗದಳ ನಿಷೇಧ
  • ರೈತರಿಗೆ ಬಡ್ಡಿ ರಹಿತ ಸಾಲ 3 ಲಕ್ಷದಿಂದ 10 ಲಕ್ಷದವರೆಗೆ ವಿಸ್ತರಣೆ
  • ಗ್ರಾಮೀಣ ಕೃಷಿಕ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ
  • ಪಶುಭಾಗ್ಯ- ಹಸು/ ಎಮ್ಮೆ ಖರೀದಿಗೆ ಬಡ್ಡಿರಹಿತ 3 ಲಕ್ಷ ಸಾಲ
  • ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ
  • ಪ್ರತಿ ಕ್ಷೇತ್ರದಲ್ಲಿ ಶಿತಲೀಕರಣ ಘಟಕ ಸ್ಥಾಪನೆ
  • ಬಿಜೆಪಿ ತಂದಿರುವ ಕೃಷಿ ಕಾಯ್ದೆಗಳು ರದ್ಧು
  • ಎಪಿಎಂಸಿ ಕಾಯ್ದೆ ರದ್ಧು ಪಡಿಸುತ್ತೇವೆ
  • ರೈತರ ಮೇಲಿನ ಎಲ್ಲಾ ಕೇಸ್ ವಾಪಸ್
  • ಪ್ರತಿ ಜಿಲ್ಲೆಗೆ ಒಂದು ರೈತ ಮಾಲ್ ಆರಂಭ
  • ಸಾವಯವ ಕೃಷಿ ಯೋಜನೆಗೆ 2500ಕೋಟಿ ಹೂಡಿಕೆ
  • ನೇಗಿಲ ತುಡಿತ ಹೆಸರಿನಲ್ಲಿ ಮಂಡಳಿ ಸ್ಥಾಪನೆ
  • ಹನಿ,ತುಂತುರು ನೀರಾವರಿಗೆ ೧೦೦ ರಷ್ಟು ಸಬ್ಸಿಡಿ
  • ಸೌರ ಪಂಪ್ ಸೆಟ್ ಯೋಜನೆಗೆ ಸಬ್ಸಿಡಿ
  • ಬೀದರ್,ಕಲಬುರಗಿಯಲ್ಲಿ ಕೃಷಿ ಉತ್ಪನ್ನ ಸಂಶೋಧನಾ ಸಂಸ್ಥೆ
  • ಚಾಮರಾಜನಗರದಲ್ಲಿ ಅರಣ್ಯ ಸಂಶೋಧನಾ ಸಂಸ್ಥೆ
  • ಗ್ರಾ.ಪಂ ವ್ಯಾಪ್ತಿಯಲ್ಲಿ ಯಾಂತ್ರೀಕರಣ ಸೌಲಭ್ಯ
  • ಪತ್ರಕರ್ತರ ಕ್ಷೇಮಾಭಿವೃದ್ಧಿ ಸ್ಥಾಪನೆ- 500 ಕೋಟಿ
  • ಸ್ವಸಹಾಯ ಗುಂಪುಗಳಿಗೆ 3 ಲಕ್ಷ ಬಡ್ಡಿರಹಿತ ಸಾಲ
  • ಪ್ರತ್ಯೇಕ ಕೃಷಿ ಕೋಶ ಕೇಂದ್ರ ಸ್ಥಾಪನೆ
  • ಗದಗದಲ್ಲಿ ಹತ್ತಿ ರಫ್ತು ಸಂಸ್ಕರಣ ಕೇಂದ್ರ
  • ಸಿಂಧನೂರಿನಲ್ಲಿ ಅಕ್ಕಿ ಸಂಸ್ಕರಣ ಕೇಂದ್ರ
  • ಬೆಳಗಾವಿ, ಬಾಗಲಕೋಟೆ, ಮಂಡ್ಯದಲ್ಲಿ ಎಥೆನಾಲ್ ಘಟಕ
  • ಕೊಡಗು,ಚಿಕ್ಕಮಗಳೂರಿನಲ್ಲಿ ಕಾಳು ಮೆಣಸು ಸಂಸ್ಕರಣೆ
  • ದೊಡ್ಡಬಳ್ಳಾಪುರದಲ್ಲಿ ಹೂ ಸಂಶೋಧನಾ ಕೇಂದ್ರ
  • ಜೇನು ಸಾಕಾಣಿಕೆಗೆ 50 ಕೋಟಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...