Homeಕರ್ನಾಟಕಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಇಂದು (ಮಂಗಳವಾರ) ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆಯಾಯಿತು.

ಮೇ 10ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಹಲವಾರು ಜನಪ್ರಿಯ ಯೋಜನೆಗಳೊಂದಿಗೆ ಪ್ರಣಾಳಿಕೆ ಬಿಡುಗಡೆ ಮಾಡುತ್ತದೆ ಎಂದು ಹೇಳಲಾಗಿತ್ತು ಅದರಂತೆ ಇಂದು ‘ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್‌ ಬದ್ದತೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ”ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ’ ಎಂಬ ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ಘೋಷಿಸಿರುವ ಪ್ರಮುಖ ಯೋಜನೆಗಳು: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ, ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪ್ರಣಾಳಿಗೆ ಹೊಂದಿದೆ.

ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿಯೂ ಹೇಳಿದೆ. ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ,  ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ, ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ, ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.

ಕಾಂಗ್ರೆಸ್ ಪಕ್ಷದ ಘೋಷಣೆಗಳ ಸಂಕ್ಷಿಪ್ತ ಚಿತ್ರಣ:

  • ಸರ್ಕಾರದಲ್ಲಿ ಖಾಲಿ ಇರುವ ಎಲ್ಲಾ ಅನುಮೋಧಿತ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರೂ.ಗಳಿಂದ 15,000 ರೂಪಾಯಿಗೆ ಹೆಚ್ಚಳ
  • ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನ 7,500 ರೂ.ಗಳಿಂದ 10,000 ರೂಪಾಯಿಗೆ ಏರಿಕೆ
  • ಆಶಾ ಕಾರ್ಯಕರ್ತೆಯರ ನಿಶ್ಚಿತ ಗೌರವ ಧನ 5000 ರೂ.ಗಳಿಂದ 8,000 ರೂ.ಗೆ ಹೆಚ್ಚಳ
  • ಬಿಸಿಯೂಟದ ಅಡಿಗೆಯವರ ಗೌರವ ಧನ 3,600 ರೂ.ಗಳಿಂದ 6,000 ರೂಪಾಯಿಗೆ ಹೆಚ್ಚಳ
  • ಪೊಲೀಸ್ ವ್ಯವಸ್ಥೆಯಲ್ಲಿ ಶೇ.33ರಷ್ಟು ಮಹಿಳೆ ಇರುವಂತೆ ನೇಮಕಾತಿ. ಕನಿಷ್ಠ ಶೇ.1ರಷ್ಟು ತೃತೀಯ ಲಿಂಗಿಗಳಿಗೆ ಮೀಸಲಾತಿ
  • ಭಜರಂಗದಳ ನಿಷೇಧ
  • ರೈತರಿಗೆ ಬಡ್ಡಿ ರಹಿತ ಸಾಲ 3 ಲಕ್ಷದಿಂದ 10 ಲಕ್ಷದವರೆಗೆ ವಿಸ್ತರಣೆ
  • ಗ್ರಾಮೀಣ ಕೃಷಿಕ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ
  • ಪಶುಭಾಗ್ಯ- ಹಸು/ ಎಮ್ಮೆ ಖರೀದಿಗೆ ಬಡ್ಡಿರಹಿತ 3 ಲಕ್ಷ ಸಾಲ
  • ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ
  • ಪ್ರತಿ ಕ್ಷೇತ್ರದಲ್ಲಿ ಶಿತಲೀಕರಣ ಘಟಕ ಸ್ಥಾಪನೆ
  • ಬಿಜೆಪಿ ತಂದಿರುವ ಕೃಷಿ ಕಾಯ್ದೆಗಳು ರದ್ಧು
  • ಎಪಿಎಂಸಿ ಕಾಯ್ದೆ ರದ್ಧು ಪಡಿಸುತ್ತೇವೆ
  • ರೈತರ ಮೇಲಿನ ಎಲ್ಲಾ ಕೇಸ್ ವಾಪಸ್
  • ಪ್ರತಿ ಜಿಲ್ಲೆಗೆ ಒಂದು ರೈತ ಮಾಲ್ ಆರಂಭ
  • ಸಾವಯವ ಕೃಷಿ ಯೋಜನೆಗೆ 2500ಕೋಟಿ ಹೂಡಿಕೆ
  • ನೇಗಿಲ ತುಡಿತ ಹೆಸರಿನಲ್ಲಿ ಮಂಡಳಿ ಸ್ಥಾಪನೆ
  • ಹನಿ,ತುಂತುರು ನೀರಾವರಿಗೆ ೧೦೦ ರಷ್ಟು ಸಬ್ಸಿಡಿ
  • ಸೌರ ಪಂಪ್ ಸೆಟ್ ಯೋಜನೆಗೆ ಸಬ್ಸಿಡಿ
  • ಬೀದರ್,ಕಲಬುರಗಿಯಲ್ಲಿ ಕೃಷಿ ಉತ್ಪನ್ನ ಸಂಶೋಧನಾ ಸಂಸ್ಥೆ
  • ಚಾಮರಾಜನಗರದಲ್ಲಿ ಅರಣ್ಯ ಸಂಶೋಧನಾ ಸಂಸ್ಥೆ
  • ಗ್ರಾ.ಪಂ ವ್ಯಾಪ್ತಿಯಲ್ಲಿ ಯಾಂತ್ರೀಕರಣ ಸೌಲಭ್ಯ
  • ಪತ್ರಕರ್ತರ ಕ್ಷೇಮಾಭಿವೃದ್ಧಿ ಸ್ಥಾಪನೆ- 500 ಕೋಟಿ
  • ಸ್ವಸಹಾಯ ಗುಂಪುಗಳಿಗೆ 3 ಲಕ್ಷ ಬಡ್ಡಿರಹಿತ ಸಾಲ
  • ಪ್ರತ್ಯೇಕ ಕೃಷಿ ಕೋಶ ಕೇಂದ್ರ ಸ್ಥಾಪನೆ
  • ಗದಗದಲ್ಲಿ ಹತ್ತಿ ರಫ್ತು ಸಂಸ್ಕರಣ ಕೇಂದ್ರ
  • ಸಿಂಧನೂರಿನಲ್ಲಿ ಅಕ್ಕಿ ಸಂಸ್ಕರಣ ಕೇಂದ್ರ
  • ಬೆಳಗಾವಿ, ಬಾಗಲಕೋಟೆ, ಮಂಡ್ಯದಲ್ಲಿ ಎಥೆನಾಲ್ ಘಟಕ
  • ಕೊಡಗು,ಚಿಕ್ಕಮಗಳೂರಿನಲ್ಲಿ ಕಾಳು ಮೆಣಸು ಸಂಸ್ಕರಣೆ
  • ದೊಡ್ಡಬಳ್ಳಾಪುರದಲ್ಲಿ ಹೂ ಸಂಶೋಧನಾ ಕೇಂದ್ರ
  • ಜೇನು ಸಾಕಾಣಿಕೆಗೆ 50 ಕೋಟಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...