Homeಕರ್ನಾಟಕಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಇಂದು (ಮಂಗಳವಾರ) ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆಯಾಯಿತು.

ಮೇ 10ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಹಲವಾರು ಜನಪ್ರಿಯ ಯೋಜನೆಗಳೊಂದಿಗೆ ಪ್ರಣಾಳಿಕೆ ಬಿಡುಗಡೆ ಮಾಡುತ್ತದೆ ಎಂದು ಹೇಳಲಾಗಿತ್ತು ಅದರಂತೆ ಇಂದು ‘ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್‌ ಬದ್ದತೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ”ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ’ ಎಂಬ ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ಘೋಷಿಸಿರುವ ಪ್ರಮುಖ ಯೋಜನೆಗಳು: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ, ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪ್ರಣಾಳಿಗೆ ಹೊಂದಿದೆ.

ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿಯೂ ಹೇಳಿದೆ. ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ,  ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ, ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ, ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.

ಕಾಂಗ್ರೆಸ್ ಪಕ್ಷದ ಘೋಷಣೆಗಳ ಸಂಕ್ಷಿಪ್ತ ಚಿತ್ರಣ:

  • ಸರ್ಕಾರದಲ್ಲಿ ಖಾಲಿ ಇರುವ ಎಲ್ಲಾ ಅನುಮೋಧಿತ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರೂ.ಗಳಿಂದ 15,000 ರೂಪಾಯಿಗೆ ಹೆಚ್ಚಳ
  • ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನ 7,500 ರೂ.ಗಳಿಂದ 10,000 ರೂಪಾಯಿಗೆ ಏರಿಕೆ
  • ಆಶಾ ಕಾರ್ಯಕರ್ತೆಯರ ನಿಶ್ಚಿತ ಗೌರವ ಧನ 5000 ರೂ.ಗಳಿಂದ 8,000 ರೂ.ಗೆ ಹೆಚ್ಚಳ
  • ಬಿಸಿಯೂಟದ ಅಡಿಗೆಯವರ ಗೌರವ ಧನ 3,600 ರೂ.ಗಳಿಂದ 6,000 ರೂಪಾಯಿಗೆ ಹೆಚ್ಚಳ
  • ಪೊಲೀಸ್ ವ್ಯವಸ್ಥೆಯಲ್ಲಿ ಶೇ.33ರಷ್ಟು ಮಹಿಳೆ ಇರುವಂತೆ ನೇಮಕಾತಿ. ಕನಿಷ್ಠ ಶೇ.1ರಷ್ಟು ತೃತೀಯ ಲಿಂಗಿಗಳಿಗೆ ಮೀಸಲಾತಿ
  • ಭಜರಂಗದಳ ನಿಷೇಧ
  • ರೈತರಿಗೆ ಬಡ್ಡಿ ರಹಿತ ಸಾಲ 3 ಲಕ್ಷದಿಂದ 10 ಲಕ್ಷದವರೆಗೆ ವಿಸ್ತರಣೆ
  • ಗ್ರಾಮೀಣ ಕೃಷಿಕ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ
  • ಪಶುಭಾಗ್ಯ- ಹಸು/ ಎಮ್ಮೆ ಖರೀದಿಗೆ ಬಡ್ಡಿರಹಿತ 3 ಲಕ್ಷ ಸಾಲ
  • ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ
  • ಪ್ರತಿ ಕ್ಷೇತ್ರದಲ್ಲಿ ಶಿತಲೀಕರಣ ಘಟಕ ಸ್ಥಾಪನೆ
  • ಬಿಜೆಪಿ ತಂದಿರುವ ಕೃಷಿ ಕಾಯ್ದೆಗಳು ರದ್ಧು
  • ಎಪಿಎಂಸಿ ಕಾಯ್ದೆ ರದ್ಧು ಪಡಿಸುತ್ತೇವೆ
  • ರೈತರ ಮೇಲಿನ ಎಲ್ಲಾ ಕೇಸ್ ವಾಪಸ್
  • ಪ್ರತಿ ಜಿಲ್ಲೆಗೆ ಒಂದು ರೈತ ಮಾಲ್ ಆರಂಭ
  • ಸಾವಯವ ಕೃಷಿ ಯೋಜನೆಗೆ 2500ಕೋಟಿ ಹೂಡಿಕೆ
  • ನೇಗಿಲ ತುಡಿತ ಹೆಸರಿನಲ್ಲಿ ಮಂಡಳಿ ಸ್ಥಾಪನೆ
  • ಹನಿ,ತುಂತುರು ನೀರಾವರಿಗೆ ೧೦೦ ರಷ್ಟು ಸಬ್ಸಿಡಿ
  • ಸೌರ ಪಂಪ್ ಸೆಟ್ ಯೋಜನೆಗೆ ಸಬ್ಸಿಡಿ
  • ಬೀದರ್,ಕಲಬುರಗಿಯಲ್ಲಿ ಕೃಷಿ ಉತ್ಪನ್ನ ಸಂಶೋಧನಾ ಸಂಸ್ಥೆ
  • ಚಾಮರಾಜನಗರದಲ್ಲಿ ಅರಣ್ಯ ಸಂಶೋಧನಾ ಸಂಸ್ಥೆ
  • ಗ್ರಾ.ಪಂ ವ್ಯಾಪ್ತಿಯಲ್ಲಿ ಯಾಂತ್ರೀಕರಣ ಸೌಲಭ್ಯ
  • ಪತ್ರಕರ್ತರ ಕ್ಷೇಮಾಭಿವೃದ್ಧಿ ಸ್ಥಾಪನೆ- 500 ಕೋಟಿ
  • ಸ್ವಸಹಾಯ ಗುಂಪುಗಳಿಗೆ 3 ಲಕ್ಷ ಬಡ್ಡಿರಹಿತ ಸಾಲ
  • ಪ್ರತ್ಯೇಕ ಕೃಷಿ ಕೋಶ ಕೇಂದ್ರ ಸ್ಥಾಪನೆ
  • ಗದಗದಲ್ಲಿ ಹತ್ತಿ ರಫ್ತು ಸಂಸ್ಕರಣ ಕೇಂದ್ರ
  • ಸಿಂಧನೂರಿನಲ್ಲಿ ಅಕ್ಕಿ ಸಂಸ್ಕರಣ ಕೇಂದ್ರ
  • ಬೆಳಗಾವಿ, ಬಾಗಲಕೋಟೆ, ಮಂಡ್ಯದಲ್ಲಿ ಎಥೆನಾಲ್ ಘಟಕ
  • ಕೊಡಗು,ಚಿಕ್ಕಮಗಳೂರಿನಲ್ಲಿ ಕಾಳು ಮೆಣಸು ಸಂಸ್ಕರಣೆ
  • ದೊಡ್ಡಬಳ್ಳಾಪುರದಲ್ಲಿ ಹೂ ಸಂಶೋಧನಾ ಕೇಂದ್ರ
  • ಜೇನು ಸಾಕಾಣಿಕೆಗೆ 50 ಕೋಟಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...