HomeUncategorizedದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ

ದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ

- Advertisement -
- Advertisement -

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನಲ್ಲಿ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸಾಹಾರದ ಮಳಿಗೆಗಳಿರುವುದನ್ನು ವಿರೋಧಿಸಿ ಬಲಪಂಥೀಯ ಗುಂಪುಗಳಾದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರು ಕಾರ್ಯಕ್ರಮ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ.

ಭಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಸಂಗೀತ ಕಚೇರಿಯ ಸ್ಥಳದಲ್ಲಿ ಮದ್ಯ ಮತ್ತು ಮಾಂಸಾಹಾರಿ ಮಳಿಗೆಗಳನ್ನು ಇಡದಂತೆ ಸಂಘಟಕರಿಗೆ ಎಚ್ಚರಿಕೆ ನೀಡಿದರು. ಇಂತಹ ವ್ಯವಸ್ಥೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಗುಂಪು ಆರೋಪಿಸಿದೆ.

ಸಂಗೀತ ಕಚೇರಿ ನಡೆಯುವ ಸ್ಥಳಕ್ಕೆ ಗುಂಪೊಂದು ತಲುಪಿ ತಮ್ಮ ಆಕ್ಷೇಪಣೆಗಳನ್ನು ಎತ್ತುತ್ತಿರುವ ಘಟನೆಯ ದೃಶ್ಯಾವಳಿಗಳು ಬಿತ್ತರವಾಗುತ್ತಿವೆ. ಮದ್ಯ ಮಾರಾಟದ ಟಿಕೆಟ್ ಕೌಂಟರ್ ಮತ್ತು ಕೆಎಫ್‌ಸಿ ಮಳಿಗೆಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ.

ದೋಸಾಂಜ್  ಅವರ ಸಂಗೀತ ಕಚೇರಿಯನ್ನು ಇಂದು (ಭಾನುವಾರ) ಸಂಜೆ 7 ಗಂಟೆಗೆ ಇಂದೋರ್‌ನಲ್ಲಿ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಆದಾಗ್ಯೂ, ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಮರೇಂದ್ರ ಸಿಂಗ್ ಅವರು ಕಾರ್ಯಕ್ರಮಕ್ಕೆ ಇನ್ನೂ ಅನುಮತಿ ನೀಡಿಲ್ಲ ಮತ್ತು ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

“ನಾವು ಸ್ಥಳವನ್ನು ಪರಿಶೀಲಿಸಿದ್ದೇವೆ. ಕೆಲವರು ಈ ಮಳಿಗೆಗಳನ್ನು ವಿರೋಧಿಸುತ್ತಿದ್ದಾರೆ. ನಾವು ಇನ್ನೂ ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ. ಎಲ್ಲವನ್ನೂ ಅರ್ಥಮಾಡಿಕೊಂಡ ನಂತರವೇ ನಾವು ಅನುಮತಿ ನೀಡುತ್ತೇವೆ. ನಾವು  ಸಂಗೀತ ಕಚೇರಿಯ ಪ್ರದರ್ಶನದ ಷರತ್ತುಗಳನ್ನು ಶೀಘ್ರದಲ್ಲೇ ನಿರ್ಧರಿಸುತ್ತೇವೆ ಎಂದು ಡಿಸಿಪಿ ಸಿಂಗ್ ಹೇಳಿದರು.

ಸ್ಥಳದಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ಸಂಘಟಕರ ನಡುವೆ ಮಾತುಕತೆ ನಡೆಯುತ್ತಿದೆ. ದಿಲ್ಜಿತ್ ದೋಸಾಂಜ್ ಅವರ ‘ದಿಲ್-ಲುಮಿನಾಟಿ’ ಕಾರ್ಯಕ್ರಮವು ಮದ್ಯ ಸೇವನೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿ  ಮದ್ಯ ಮಾರಾಟದ ವಿರುದ್ಧ ಕೆಲವು ಗುಂಪುಗಳಿಂದ ಆಕ್ಷೇಪಣೆಗಳಿಂದ ವಿವಾದಗಳನ್ನು ಎದುರಿಸುತ್ತಲೇ ಇದೆ.

ಇಂತಹ ವಿರೋಧದ  ಪ್ರಥಮ ಘಟನೆಯು ಹೈದರಾಬಾದ್‌ನಲ್ಲಿ ಸಂಭವಿಸಿತ್ತು. ಅಲ್ಲಿ ಗಾಯಕನಿಗೆ ಮದ್ಯ ಉಲ್ಲೇಖಿಸುವ ಹಾಡುಗಳನ್ನು ಹಾಡದಂತೆ ನೋಟಿಸ್ ನೀಡಲಾಗಿತ್ತು. ಅವರು ತಮ್ಮ ಒಂದು ಹಾಡಿನಲ್ಲಿ “ಮದ್ಯ” ಪದವನ್ನು “ಕೋಕ್” ನೊಂದಿಗೆ ಬದಲಿಸುವ ಮೂಲಕ ಪ್ರತಿಕ್ರಿಯಿಸಿದ್ದರು.

ಪುಣೆಯಲ್ಲಿ, ಮಹಾರಾಷ್ಟ್ರದ ಅಬಕಾರಿ ಇಲಾಖೆಯು ಸ್ಥಳೀಯ ನಾಯಕರ ಆಕ್ಷೇಪದ ನಂತರ ಅವರ ಸಂಗೀತ ಕಚೇರಿಯಲ್ಲಿ ಮದ್ಯ ಪೂರೈಸುವ ಅನುಮತಿಯನ್ನು ರದ್ದುಗೊಳಿಸಿತ್ತು.

ಇದೇ ರೀತಿಯ ವಿರೋಧವು ಅಹಮದಾಬಾದ್‌ನಲ್ಲಿ ಉದ್ಭವಿಸಿತ್ತು. ಅಲ್ಲಿ ದೋಸಾಂಜ್ ಅವರು ಇಂತಹ ನಿರ್ಬಂಧಗಳ ಬಗ್ಗೆ ವ್ಯಂಗ್ಯವಾಡಿದ್ದರು. “ನಾವು ಶುಷ್ಕ ರಾಷ್ಟ್ರ ಚಳವಳಿಯನ್ನು ಪ್ರಾರಂಭಿಸೋಣ” ಎಂಬ ಶೀರ್ಷಿಕೆಯೊಂದಿಗೆ ಟ್ವಿಟರ್ ನಲ್ಲಿ ಸಂಗೀತ ಕಚೇರಿಯ ತುಣುಕನ್ನು ಹಂಚಿಕೊಂಡಿದ್ದರು. “ನೀವು ಯುವಕರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಮದ್ಯವನ್ನು ಸಂಪೂರ್ಣ ನಿಷೇಧವಲ್ಲದಿದ್ದರು, ಕೊನೆಪಕ್ಷ ನನ್ನ ಪ್ರದರ್ಶನದ ದಿನದಂದು ನಿಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಘೋಷಿಸಿ. ಆಗ ನಾನು ಯಾವುದೇ ಮದ್ಯ-ಸಂಬಂಧಿತ ಹಾಡುಗಳನ್ನು ಹಾಡುವುದನ್ನು ನಿಲ್ಲಿಸುತ್ತೇನೆ ಎಂದು ದೋಸಾಂಜ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ…ವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...