HomeUncategorizedದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ

ದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ

- Advertisement -
- Advertisement -

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನಲ್ಲಿ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸಾಹಾರದ ಮಳಿಗೆಗಳಿರುವುದನ್ನು ವಿರೋಧಿಸಿ ಬಲಪಂಥೀಯ ಗುಂಪುಗಳಾದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರು ಕಾರ್ಯಕ್ರಮ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ.

ಭಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಸಂಗೀತ ಕಚೇರಿಯ ಸ್ಥಳದಲ್ಲಿ ಮದ್ಯ ಮತ್ತು ಮಾಂಸಾಹಾರಿ ಮಳಿಗೆಗಳನ್ನು ಇಡದಂತೆ ಸಂಘಟಕರಿಗೆ ಎಚ್ಚರಿಕೆ ನೀಡಿದರು. ಇಂತಹ ವ್ಯವಸ್ಥೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಗುಂಪು ಆರೋಪಿಸಿದೆ.

ಸಂಗೀತ ಕಚೇರಿ ನಡೆಯುವ ಸ್ಥಳಕ್ಕೆ ಗುಂಪೊಂದು ತಲುಪಿ ತಮ್ಮ ಆಕ್ಷೇಪಣೆಗಳನ್ನು ಎತ್ತುತ್ತಿರುವ ಘಟನೆಯ ದೃಶ್ಯಾವಳಿಗಳು ಬಿತ್ತರವಾಗುತ್ತಿವೆ. ಮದ್ಯ ಮಾರಾಟದ ಟಿಕೆಟ್ ಕೌಂಟರ್ ಮತ್ತು ಕೆಎಫ್‌ಸಿ ಮಳಿಗೆಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ.

ದೋಸಾಂಜ್  ಅವರ ಸಂಗೀತ ಕಚೇರಿಯನ್ನು ಇಂದು (ಭಾನುವಾರ) ಸಂಜೆ 7 ಗಂಟೆಗೆ ಇಂದೋರ್‌ನಲ್ಲಿ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಆದಾಗ್ಯೂ, ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಮರೇಂದ್ರ ಸಿಂಗ್ ಅವರು ಕಾರ್ಯಕ್ರಮಕ್ಕೆ ಇನ್ನೂ ಅನುಮತಿ ನೀಡಿಲ್ಲ ಮತ್ತು ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

“ನಾವು ಸ್ಥಳವನ್ನು ಪರಿಶೀಲಿಸಿದ್ದೇವೆ. ಕೆಲವರು ಈ ಮಳಿಗೆಗಳನ್ನು ವಿರೋಧಿಸುತ್ತಿದ್ದಾರೆ. ನಾವು ಇನ್ನೂ ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ. ಎಲ್ಲವನ್ನೂ ಅರ್ಥಮಾಡಿಕೊಂಡ ನಂತರವೇ ನಾವು ಅನುಮತಿ ನೀಡುತ್ತೇವೆ. ನಾವು  ಸಂಗೀತ ಕಚೇರಿಯ ಪ್ರದರ್ಶನದ ಷರತ್ತುಗಳನ್ನು ಶೀಘ್ರದಲ್ಲೇ ನಿರ್ಧರಿಸುತ್ತೇವೆ ಎಂದು ಡಿಸಿಪಿ ಸಿಂಗ್ ಹೇಳಿದರು.

ಸ್ಥಳದಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ಸಂಘಟಕರ ನಡುವೆ ಮಾತುಕತೆ ನಡೆಯುತ್ತಿದೆ. ದಿಲ್ಜಿತ್ ದೋಸಾಂಜ್ ಅವರ ‘ದಿಲ್-ಲುಮಿನಾಟಿ’ ಕಾರ್ಯಕ್ರಮವು ಮದ್ಯ ಸೇವನೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿ  ಮದ್ಯ ಮಾರಾಟದ ವಿರುದ್ಧ ಕೆಲವು ಗುಂಪುಗಳಿಂದ ಆಕ್ಷೇಪಣೆಗಳಿಂದ ವಿವಾದಗಳನ್ನು ಎದುರಿಸುತ್ತಲೇ ಇದೆ.

ಇಂತಹ ವಿರೋಧದ  ಪ್ರಥಮ ಘಟನೆಯು ಹೈದರಾಬಾದ್‌ನಲ್ಲಿ ಸಂಭವಿಸಿತ್ತು. ಅಲ್ಲಿ ಗಾಯಕನಿಗೆ ಮದ್ಯ ಉಲ್ಲೇಖಿಸುವ ಹಾಡುಗಳನ್ನು ಹಾಡದಂತೆ ನೋಟಿಸ್ ನೀಡಲಾಗಿತ್ತು. ಅವರು ತಮ್ಮ ಒಂದು ಹಾಡಿನಲ್ಲಿ “ಮದ್ಯ” ಪದವನ್ನು “ಕೋಕ್” ನೊಂದಿಗೆ ಬದಲಿಸುವ ಮೂಲಕ ಪ್ರತಿಕ್ರಿಯಿಸಿದ್ದರು.

ಪುಣೆಯಲ್ಲಿ, ಮಹಾರಾಷ್ಟ್ರದ ಅಬಕಾರಿ ಇಲಾಖೆಯು ಸ್ಥಳೀಯ ನಾಯಕರ ಆಕ್ಷೇಪದ ನಂತರ ಅವರ ಸಂಗೀತ ಕಚೇರಿಯಲ್ಲಿ ಮದ್ಯ ಪೂರೈಸುವ ಅನುಮತಿಯನ್ನು ರದ್ದುಗೊಳಿಸಿತ್ತು.

ಇದೇ ರೀತಿಯ ವಿರೋಧವು ಅಹಮದಾಬಾದ್‌ನಲ್ಲಿ ಉದ್ಭವಿಸಿತ್ತು. ಅಲ್ಲಿ ದೋಸಾಂಜ್ ಅವರು ಇಂತಹ ನಿರ್ಬಂಧಗಳ ಬಗ್ಗೆ ವ್ಯಂಗ್ಯವಾಡಿದ್ದರು. “ನಾವು ಶುಷ್ಕ ರಾಷ್ಟ್ರ ಚಳವಳಿಯನ್ನು ಪ್ರಾರಂಭಿಸೋಣ” ಎಂಬ ಶೀರ್ಷಿಕೆಯೊಂದಿಗೆ ಟ್ವಿಟರ್ ನಲ್ಲಿ ಸಂಗೀತ ಕಚೇರಿಯ ತುಣುಕನ್ನು ಹಂಚಿಕೊಂಡಿದ್ದರು. “ನೀವು ಯುವಕರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಮದ್ಯವನ್ನು ಸಂಪೂರ್ಣ ನಿಷೇಧವಲ್ಲದಿದ್ದರು, ಕೊನೆಪಕ್ಷ ನನ್ನ ಪ್ರದರ್ಶನದ ದಿನದಂದು ನಿಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಘೋಷಿಸಿ. ಆಗ ನಾನು ಯಾವುದೇ ಮದ್ಯ-ಸಂಬಂಧಿತ ಹಾಡುಗಳನ್ನು ಹಾಡುವುದನ್ನು ನಿಲ್ಲಿಸುತ್ತೇನೆ ಎಂದು ದೋಸಾಂಜ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ…ವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...