Homeಮುಖಪುಟಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ.

- Advertisement -
- Advertisement -

ಹಲಾಲ್ ವಿರುದ್ಧ ಕರಪತ್ರ ಹಂಚಿ ಒಂದು ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದವರು ತಿಳಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಜರಂಗದಳದವರು ಈಗ ಹಲಾಲ್ – ಜಟ್ಕಾ ಕಟ್ ಎಂಬ ಹೆಸರಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದಾರೆ. ಇವತ್ತು ಅವರು ಹಲಾಲ್ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಅದರ ಬದಲಿಗೆ ಜಟ್ಕಾ ಕಟ್ ತೆಗೆದುಕೊಳ್ಳಿ ಎಂದು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು, ಕಟ್ ಮಾಡಲು ಅದೇ ಸಮಾಜದವರೇ ಬರಬೇಕು. ಅವರು ಹಲಾಲ್ ಮಾಡ್ತಾರೊ, ಬಿಡ್ತಾರೊ ಅದು ವಿಷಯವಲ್ಲ. ನಮ್ಮ ರೈತರು ಎಷ್ಟು ಮಾಂಸ ಕಟ್ ಮಾಡುವ ಡಿಮ್ಯಾಂಡ್ ಇದೆ ಅದನ್ನು ಇವರು ಪೂರೈಸುವ ಪರಿಸ್ಥಿತಿಯಲ್ಲಿ ಇಲ್ಲ. ನಿಮ್ಮ ಜಟ್ಕಾ ಕಟ್ ಮಾಡೋಕು, ಇನ್ನೊಂದು ಮಾಡೋಕು ಆ ಸಮುದಾಯದವರೇ ಬೇಕು” ಎಂದರು.

ಈಗ ರೇಷ್ಮೆ, ಮಾವು ಬೆಳೆ ಮಾರಾಟಕ್ಕೂ ಸಹ ಅದೇ ಸಮುದಾಯದವರು ಬರಬೇಕು. ಈ ಬಜರಂಗದಳ ಪೋಲಿಗಳು ಬರ್ತಾವಾ ರೇಷ್ಮೆ ಮತ್ತು ಮಾವು ಖರೀದಿ ಮಾಡಲು? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಮಾವು ಬೆಳೆ ನಷ್ಟವಾಗಿದೆ. ನಾಳೆ ಮಾವು ಖರೀದಿ ಮಾಡಲು ನಮಗೆ ಅದೇ ಸಮುದಾಯದ ಸಹಕಾರ ಬೇಕು. ಇವು ಯಾವೊ ವಿಶ್ವ ಹಿಂದೂ ಪರಿಷತ್‌ನವರು, ಬಜರಂಗದಳದವರು ತಮ್ಮ ಹೊಟ್ಟೆಪಾಡಿಗೆ, ದೇಶ ಹಾಳು ಮಾಡೋಕೆ ಇಂತಹ ವಿಚಾರ ಇಟ್ಟುಕೊಂಡು ಹೊರಟಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ. ಆದರೆ ರೈತನ ಮಗನಾಗಿ ಇವರನ್ನು ನಂಬಬೇಡಿ, ಇವರು ಸಮಾಜ ಹಾಳು ಮಾಡಲು ಬರುತ್ತಿದ್ದಾರೆ ಎಂದು ರೈತರಿಗೆ ಹೇಳಲು ಬಯಸುತ್ತೇನೆ ಎಂದರು.

ಇಷ್ಟು ವರ್ಷ ಹಲಾಲ್ ಮಾಂಸ ತಿಂದಿದ್ದೇವೆ, ಏನಾಗಿದೆ ನಮಗೆ? ಚೆನ್ನಾಗಿದ್ದೀವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಯ್ತದ? ನಮ್ಮ ದೇವರು ನಮ್ಮನ್ನು ಮೆಚ್ಚಲ್ವ.‌ ಇಷ್ಟು ವರ್ಷ ಹಲಾಲ್ ತಿಂದಾಗ ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಇದು ತಪ್ಪು ಎಂದು ಹೇಳಲಿಲ್ಲವಲ್ಲ ಎಂದು ಲೇವಡಿ ಮಾಡಿದರು.

“ಇವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ನನಗೆ ಓಟು ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಇರಬೇಕು, ನಾಡಿನ ಜನ ನೆಮ್ಮದಿಯಿಂದ ಬದುಕಬೇಕು ಎಂಬುದು ನನ್ನ ಬಯಕೆ. ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ. ಅಯ್ಯೊ ಹಿಂದುಗಳು ನಮಗೆ ವೋಟು ಹಾಕದಿದ್ರೆ ಎಂಬ ಭಯದಲ್ಲಿ ಕಾಂಗ್ರೆಸ್‌ನವರಿಗೆ ಈ ವಿಷಯ ಮಾತನಾಡಲು ತಾಕತ್ ಇಲ್ಲ. ಪಾಪಾ ಧೈರ್ಯ ಕಳೆದುಕೊಂಡಿದ್ದಾರೆ ಅವರು. ಆದರೆ ಮತಬ್ಯಾಂಕ್‌ಗಿಂತ ಹೆಚ್ಚಾಗಿ ನನ್ನ ಜನರ ಬದುಕು ಮುಖ್ಯ ನನಗೆ. ಎಲ್ಲಾ ಸಮಾಜಗಳು ಒಟ್ಟಿಗೆ ಬದುಕಬೇಕು. ಕುವೆಂಪುರವರ ಸಂದೇಶದಂತೆ ಇದು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಏಕೆ ಬೆಂಕಿ ಹಚ್ಚಲು ಬಂದಿದ್ದೀರಿ ನೀವು? ಇದನ್ನೆಲ್ಲ ಉತ್ತರ ಪ್ರದೇಶದಲ್ಲಿ ಇಟ್ಟುಕೊಳ್ಳಿ. ನಿಮ್ಮಿಂದ ಈ ರಾಜ್ಯ ಕಟ್ಟಲು ಆಗುವುದಿಲ್ಲ” ಎಂದು ಎಚ್‌.ಡಿಕೆ ಕಿಡಿಕಾರಿದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಅಗಲಿಲ್ಲ. ಆಗ ಎಲ್ಲಿದ್ದರೂ ಈ ವಿಶ್ವ ಹಿಂದೂ ಪರಿಷತ್ – ಭಜರಂಗದಳದವರು? ಎಂದು ಎಚ್‌ಡಿಕೆ ಪ್ರಶ್ನಿಸಿದರು. ಸಮಾಜ ಒಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ ಇನ್ನು‌ ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಕೂಡಲೆ ಈ ರೀತಿ ಮಾತನಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಸವಾಲು ಹಾಕಿದರು.

ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದಲೆ ಸ್ಪರ್ಧೆ

ಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿನ ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ. ಇವತ್ತಿ‌ನ ಮಂಡ್ಯ ಸಂಸದರ ಹೇಳಿಕೆಗಳು ನೋಡಿದಾಗ ಇದು ನನ್ನ ಮನಸ್ಸಿಗೆ ಬಂದಿದೆ. ಅವತ್ತು ನಮ್ಮ‌ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು‌‌. ಕಾಂಗ್ರೆಸ್‌, ಬಿಜೆಪಿ, ರೈತಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಹಾಸನ: ಗುರಾಯಿಸಿ ನೋಡಿದ್ದಾಗಿ ಆರೋಪಿಸಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾಜಘಾತುಕ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕುಮಾರಣ್ಣನವರು ಹೇಳಿಕೆ ಸತ್ಯವಾದುದು ಕೇಸರಿ ಬಣ್ಣಕ್ಕೆ ಇರುವಂತಹ ಮೌಲ್ಯವನ್ನು ಕೆಲವೊಂದು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಕುಮಾರಣ್ಣನವರ ಈ ಹೋರಾಟಕ್ಕೆ ನಾವೆಲ್ಲರೂ ಧ್ವನಿಗೂಡಿಸಿದ ಸಮರ್ಥಿಸೋಣ ಹಾಗೂ ಕುಮಾರಣ್ಣನವರ ಹೇಳಿಕೆಯ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ವನ್ನು ಪ್ರಾರಂಭಿಸೋಣ.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...