Homeಮುಖಪುಟಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ.

- Advertisement -
- Advertisement -

ಹಲಾಲ್ ವಿರುದ್ಧ ಕರಪತ್ರ ಹಂಚಿ ಒಂದು ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದವರು ತಿಳಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಜರಂಗದಳದವರು ಈಗ ಹಲಾಲ್ – ಜಟ್ಕಾ ಕಟ್ ಎಂಬ ಹೆಸರಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದಾರೆ. ಇವತ್ತು ಅವರು ಹಲಾಲ್ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಅದರ ಬದಲಿಗೆ ಜಟ್ಕಾ ಕಟ್ ತೆಗೆದುಕೊಳ್ಳಿ ಎಂದು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು, ಕಟ್ ಮಾಡಲು ಅದೇ ಸಮಾಜದವರೇ ಬರಬೇಕು. ಅವರು ಹಲಾಲ್ ಮಾಡ್ತಾರೊ, ಬಿಡ್ತಾರೊ ಅದು ವಿಷಯವಲ್ಲ. ನಮ್ಮ ರೈತರು ಎಷ್ಟು ಮಾಂಸ ಕಟ್ ಮಾಡುವ ಡಿಮ್ಯಾಂಡ್ ಇದೆ ಅದನ್ನು ಇವರು ಪೂರೈಸುವ ಪರಿಸ್ಥಿತಿಯಲ್ಲಿ ಇಲ್ಲ. ನಿಮ್ಮ ಜಟ್ಕಾ ಕಟ್ ಮಾಡೋಕು, ಇನ್ನೊಂದು ಮಾಡೋಕು ಆ ಸಮುದಾಯದವರೇ ಬೇಕು” ಎಂದರು.

ಈಗ ರೇಷ್ಮೆ, ಮಾವು ಬೆಳೆ ಮಾರಾಟಕ್ಕೂ ಸಹ ಅದೇ ಸಮುದಾಯದವರು ಬರಬೇಕು. ಈ ಬಜರಂಗದಳ ಪೋಲಿಗಳು ಬರ್ತಾವಾ ರೇಷ್ಮೆ ಮತ್ತು ಮಾವು ಖರೀದಿ ಮಾಡಲು? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಮಾವು ಬೆಳೆ ನಷ್ಟವಾಗಿದೆ. ನಾಳೆ ಮಾವು ಖರೀದಿ ಮಾಡಲು ನಮಗೆ ಅದೇ ಸಮುದಾಯದ ಸಹಕಾರ ಬೇಕು. ಇವು ಯಾವೊ ವಿಶ್ವ ಹಿಂದೂ ಪರಿಷತ್‌ನವರು, ಬಜರಂಗದಳದವರು ತಮ್ಮ ಹೊಟ್ಟೆಪಾಡಿಗೆ, ದೇಶ ಹಾಳು ಮಾಡೋಕೆ ಇಂತಹ ವಿಚಾರ ಇಟ್ಟುಕೊಂಡು ಹೊರಟಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ. ಆದರೆ ರೈತನ ಮಗನಾಗಿ ಇವರನ್ನು ನಂಬಬೇಡಿ, ಇವರು ಸಮಾಜ ಹಾಳು ಮಾಡಲು ಬರುತ್ತಿದ್ದಾರೆ ಎಂದು ರೈತರಿಗೆ ಹೇಳಲು ಬಯಸುತ್ತೇನೆ ಎಂದರು.

ಇಷ್ಟು ವರ್ಷ ಹಲಾಲ್ ಮಾಂಸ ತಿಂದಿದ್ದೇವೆ, ಏನಾಗಿದೆ ನಮಗೆ? ಚೆನ್ನಾಗಿದ್ದೀವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಯ್ತದ? ನಮ್ಮ ದೇವರು ನಮ್ಮನ್ನು ಮೆಚ್ಚಲ್ವ.‌ ಇಷ್ಟು ವರ್ಷ ಹಲಾಲ್ ತಿಂದಾಗ ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಇದು ತಪ್ಪು ಎಂದು ಹೇಳಲಿಲ್ಲವಲ್ಲ ಎಂದು ಲೇವಡಿ ಮಾಡಿದರು.

“ಇವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ನನಗೆ ಓಟು ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಇರಬೇಕು, ನಾಡಿನ ಜನ ನೆಮ್ಮದಿಯಿಂದ ಬದುಕಬೇಕು ಎಂಬುದು ನನ್ನ ಬಯಕೆ. ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ. ಅಯ್ಯೊ ಹಿಂದುಗಳು ನಮಗೆ ವೋಟು ಹಾಕದಿದ್ರೆ ಎಂಬ ಭಯದಲ್ಲಿ ಕಾಂಗ್ರೆಸ್‌ನವರಿಗೆ ಈ ವಿಷಯ ಮಾತನಾಡಲು ತಾಕತ್ ಇಲ್ಲ. ಪಾಪಾ ಧೈರ್ಯ ಕಳೆದುಕೊಂಡಿದ್ದಾರೆ ಅವರು. ಆದರೆ ಮತಬ್ಯಾಂಕ್‌ಗಿಂತ ಹೆಚ್ಚಾಗಿ ನನ್ನ ಜನರ ಬದುಕು ಮುಖ್ಯ ನನಗೆ. ಎಲ್ಲಾ ಸಮಾಜಗಳು ಒಟ್ಟಿಗೆ ಬದುಕಬೇಕು. ಕುವೆಂಪುರವರ ಸಂದೇಶದಂತೆ ಇದು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಏಕೆ ಬೆಂಕಿ ಹಚ್ಚಲು ಬಂದಿದ್ದೀರಿ ನೀವು? ಇದನ್ನೆಲ್ಲ ಉತ್ತರ ಪ್ರದೇಶದಲ್ಲಿ ಇಟ್ಟುಕೊಳ್ಳಿ. ನಿಮ್ಮಿಂದ ಈ ರಾಜ್ಯ ಕಟ್ಟಲು ಆಗುವುದಿಲ್ಲ” ಎಂದು ಎಚ್‌.ಡಿಕೆ ಕಿಡಿಕಾರಿದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಅಗಲಿಲ್ಲ. ಆಗ ಎಲ್ಲಿದ್ದರೂ ಈ ವಿಶ್ವ ಹಿಂದೂ ಪರಿಷತ್ – ಭಜರಂಗದಳದವರು? ಎಂದು ಎಚ್‌ಡಿಕೆ ಪ್ರಶ್ನಿಸಿದರು. ಸಮಾಜ ಒಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ ಇನ್ನು‌ ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಕೂಡಲೆ ಈ ರೀತಿ ಮಾತನಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಸವಾಲು ಹಾಕಿದರು.

ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದಲೆ ಸ್ಪರ್ಧೆ

ಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿನ ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ. ಇವತ್ತಿ‌ನ ಮಂಡ್ಯ ಸಂಸದರ ಹೇಳಿಕೆಗಳು ನೋಡಿದಾಗ ಇದು ನನ್ನ ಮನಸ್ಸಿಗೆ ಬಂದಿದೆ. ಅವತ್ತು ನಮ್ಮ‌ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು‌‌. ಕಾಂಗ್ರೆಸ್‌, ಬಿಜೆಪಿ, ರೈತಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಹಾಸನ: ಗುರಾಯಿಸಿ ನೋಡಿದ್ದಾಗಿ ಆರೋಪಿಸಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾಜಘಾತುಕ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕುಮಾರಣ್ಣನವರು ಹೇಳಿಕೆ ಸತ್ಯವಾದುದು ಕೇಸರಿ ಬಣ್ಣಕ್ಕೆ ಇರುವಂತಹ ಮೌಲ್ಯವನ್ನು ಕೆಲವೊಂದು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಕುಮಾರಣ್ಣನವರ ಈ ಹೋರಾಟಕ್ಕೆ ನಾವೆಲ್ಲರೂ ಧ್ವನಿಗೂಡಿಸಿದ ಸಮರ್ಥಿಸೋಣ ಹಾಗೂ ಕುಮಾರಣ್ಣನವರ ಹೇಳಿಕೆಯ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ವನ್ನು ಪ್ರಾರಂಭಿಸೋಣ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...