Homeಮುಖಪುಟಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ.

- Advertisement -
- Advertisement -

ಹಲಾಲ್ ವಿರುದ್ಧ ಕರಪತ್ರ ಹಂಚಿ ಒಂದು ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದವರು ತಿಳಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಜರಂಗದಳದವರು ಈಗ ಹಲಾಲ್ – ಜಟ್ಕಾ ಕಟ್ ಎಂಬ ಹೆಸರಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದಾರೆ. ಇವತ್ತು ಅವರು ಹಲಾಲ್ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಅದರ ಬದಲಿಗೆ ಜಟ್ಕಾ ಕಟ್ ತೆಗೆದುಕೊಳ್ಳಿ ಎಂದು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು, ಕಟ್ ಮಾಡಲು ಅದೇ ಸಮಾಜದವರೇ ಬರಬೇಕು. ಅವರು ಹಲಾಲ್ ಮಾಡ್ತಾರೊ, ಬಿಡ್ತಾರೊ ಅದು ವಿಷಯವಲ್ಲ. ನಮ್ಮ ರೈತರು ಎಷ್ಟು ಮಾಂಸ ಕಟ್ ಮಾಡುವ ಡಿಮ್ಯಾಂಡ್ ಇದೆ ಅದನ್ನು ಇವರು ಪೂರೈಸುವ ಪರಿಸ್ಥಿತಿಯಲ್ಲಿ ಇಲ್ಲ. ನಿಮ್ಮ ಜಟ್ಕಾ ಕಟ್ ಮಾಡೋಕು, ಇನ್ನೊಂದು ಮಾಡೋಕು ಆ ಸಮುದಾಯದವರೇ ಬೇಕು” ಎಂದರು.

ಈಗ ರೇಷ್ಮೆ, ಮಾವು ಬೆಳೆ ಮಾರಾಟಕ್ಕೂ ಸಹ ಅದೇ ಸಮುದಾಯದವರು ಬರಬೇಕು. ಈ ಬಜರಂಗದಳ ಪೋಲಿಗಳು ಬರ್ತಾವಾ ರೇಷ್ಮೆ ಮತ್ತು ಮಾವು ಖರೀದಿ ಮಾಡಲು? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಮಾವು ಬೆಳೆ ನಷ್ಟವಾಗಿದೆ. ನಾಳೆ ಮಾವು ಖರೀದಿ ಮಾಡಲು ನಮಗೆ ಅದೇ ಸಮುದಾಯದ ಸಹಕಾರ ಬೇಕು. ಇವು ಯಾವೊ ವಿಶ್ವ ಹಿಂದೂ ಪರಿಷತ್‌ನವರು, ಬಜರಂಗದಳದವರು ತಮ್ಮ ಹೊಟ್ಟೆಪಾಡಿಗೆ, ದೇಶ ಹಾಳು ಮಾಡೋಕೆ ಇಂತಹ ವಿಚಾರ ಇಟ್ಟುಕೊಂಡು ಹೊರಟಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ. ಆದರೆ ರೈತನ ಮಗನಾಗಿ ಇವರನ್ನು ನಂಬಬೇಡಿ, ಇವರು ಸಮಾಜ ಹಾಳು ಮಾಡಲು ಬರುತ್ತಿದ್ದಾರೆ ಎಂದು ರೈತರಿಗೆ ಹೇಳಲು ಬಯಸುತ್ತೇನೆ ಎಂದರು.

ಇಷ್ಟು ವರ್ಷ ಹಲಾಲ್ ಮಾಂಸ ತಿಂದಿದ್ದೇವೆ, ಏನಾಗಿದೆ ನಮಗೆ? ಚೆನ್ನಾಗಿದ್ದೀವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಯ್ತದ? ನಮ್ಮ ದೇವರು ನಮ್ಮನ್ನು ಮೆಚ್ಚಲ್ವ.‌ ಇಷ್ಟು ವರ್ಷ ಹಲಾಲ್ ತಿಂದಾಗ ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಇದು ತಪ್ಪು ಎಂದು ಹೇಳಲಿಲ್ಲವಲ್ಲ ಎಂದು ಲೇವಡಿ ಮಾಡಿದರು.

“ಇವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ನನಗೆ ಓಟು ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಇರಬೇಕು, ನಾಡಿನ ಜನ ನೆಮ್ಮದಿಯಿಂದ ಬದುಕಬೇಕು ಎಂಬುದು ನನ್ನ ಬಯಕೆ. ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ. ಅಯ್ಯೊ ಹಿಂದುಗಳು ನಮಗೆ ವೋಟು ಹಾಕದಿದ್ರೆ ಎಂಬ ಭಯದಲ್ಲಿ ಕಾಂಗ್ರೆಸ್‌ನವರಿಗೆ ಈ ವಿಷಯ ಮಾತನಾಡಲು ತಾಕತ್ ಇಲ್ಲ. ಪಾಪಾ ಧೈರ್ಯ ಕಳೆದುಕೊಂಡಿದ್ದಾರೆ ಅವರು. ಆದರೆ ಮತಬ್ಯಾಂಕ್‌ಗಿಂತ ಹೆಚ್ಚಾಗಿ ನನ್ನ ಜನರ ಬದುಕು ಮುಖ್ಯ ನನಗೆ. ಎಲ್ಲಾ ಸಮಾಜಗಳು ಒಟ್ಟಿಗೆ ಬದುಕಬೇಕು. ಕುವೆಂಪುರವರ ಸಂದೇಶದಂತೆ ಇದು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಏಕೆ ಬೆಂಕಿ ಹಚ್ಚಲು ಬಂದಿದ್ದೀರಿ ನೀವು? ಇದನ್ನೆಲ್ಲ ಉತ್ತರ ಪ್ರದೇಶದಲ್ಲಿ ಇಟ್ಟುಕೊಳ್ಳಿ. ನಿಮ್ಮಿಂದ ಈ ರಾಜ್ಯ ಕಟ್ಟಲು ಆಗುವುದಿಲ್ಲ” ಎಂದು ಎಚ್‌.ಡಿಕೆ ಕಿಡಿಕಾರಿದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಅಗಲಿಲ್ಲ. ಆಗ ಎಲ್ಲಿದ್ದರೂ ಈ ವಿಶ್ವ ಹಿಂದೂ ಪರಿಷತ್ – ಭಜರಂಗದಳದವರು? ಎಂದು ಎಚ್‌ಡಿಕೆ ಪ್ರಶ್ನಿಸಿದರು. ಸಮಾಜ ಒಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ ಇನ್ನು‌ ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಕೂಡಲೆ ಈ ರೀತಿ ಮಾತನಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಸವಾಲು ಹಾಕಿದರು.

ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದಲೆ ಸ್ಪರ್ಧೆ

ಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿನ ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ. ಇವತ್ತಿ‌ನ ಮಂಡ್ಯ ಸಂಸದರ ಹೇಳಿಕೆಗಳು ನೋಡಿದಾಗ ಇದು ನನ್ನ ಮನಸ್ಸಿಗೆ ಬಂದಿದೆ. ಅವತ್ತು ನಮ್ಮ‌ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು‌‌. ಕಾಂಗ್ರೆಸ್‌, ಬಿಜೆಪಿ, ರೈತಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಹಾಸನ: ಗುರಾಯಿಸಿ ನೋಡಿದ್ದಾಗಿ ಆರೋಪಿಸಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾಜಘಾತುಕ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕುಮಾರಣ್ಣನವರು ಹೇಳಿಕೆ ಸತ್ಯವಾದುದು ಕೇಸರಿ ಬಣ್ಣಕ್ಕೆ ಇರುವಂತಹ ಮೌಲ್ಯವನ್ನು ಕೆಲವೊಂದು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಕುಮಾರಣ್ಣನವರ ಈ ಹೋರಾಟಕ್ಕೆ ನಾವೆಲ್ಲರೂ ಧ್ವನಿಗೂಡಿಸಿದ ಸಮರ್ಥಿಸೋಣ ಹಾಗೂ ಕುಮಾರಣ್ಣನವರ ಹೇಳಿಕೆಯ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ವನ್ನು ಪ್ರಾರಂಭಿಸೋಣ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....