Homeಮುಖಪುಟಗುಜರಾತ್: ಈಸ್ಟರ್ ಪ್ರಾರ್ಥನಾ ಸಭೆಗೆ ನುಗ್ಗಿ ವಿಎಚ್‌ಪಿ, ಬಜರಂಗದಳ ದುಷ್ಕರ್ಮಿಗಳಿಂದ ದಾಂಧಲೆ

ಗುಜರಾತ್: ಈಸ್ಟರ್ ಪ್ರಾರ್ಥನಾ ಸಭೆಗೆ ನುಗ್ಗಿ ವಿಎಚ್‌ಪಿ, ಬಜರಂಗದಳ ದುಷ್ಕರ್ಮಿಗಳಿಂದ ದಾಂಧಲೆ

- Advertisement -
- Advertisement -

ಅಹಮದಾಬಾದ್‌ನ ಓಧವ್‌ನಲ್ಲಿ ಪ್ರೊಟೆಸ್ಟಂಟ್ ಕ್ರಿಶ್ಚಿಯನ್ ಗುಂಪಿನ ಈಸ್ಟರ್ ಪ್ರಾರ್ಥನಾ ಸಭೆಗೆ ನುಗ್ಗಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಕಾರ್ಯಕರ್ತರ ಗುಂಪೊಂದು ಗದ್ದಲ ಎಬ್ಬಿಸಿದ ಘಟನೆ ಭಾನುವಾರ (ಏ.20) ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಅದರಲ್ಲಿ ಕೋಲು, ಲಾಠಿಗಳನ್ನು ಹಿಡಿದ ಪುರುಷರ ಗುಂಪು “ಹರ ಹರ ಮಹಾದೇವ್”, “ಜೈ ಶ್ರೀ ರಾಮ್” ಇತ್ಯಾದಿ ಘೋಷಣೆಗಳನ್ನು ಕೂಗುತ್ತಾ ಪ್ರಾರ್ಥನಾ ಸಭೆಗೆ ನುಗ್ಗಿ, ಅಲ್ಲಿ ಸೇರಿದ್ದ ಜನರನ್ನು ಹೊರ ಹೋಗುವಂತೆ ಆಕ್ರಮಣಕಾರಿಯಾಗಿ ಒತ್ತಾಯಿಸಿರುವುದು ಇದೆ.

ವೈರಲ್ ವಿಡಿಯೋವನ್ನು ಅನೇಕರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಗುಜರಾತ್ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಅಹಮದಾಬಾದ್ ನಗರ ಪೊಲೀಸರು, ಘಟನೆಯನ್ನು ದೃಢೀಕರಿಸಿದ್ದಾರೆ. “ಧಾರ್ಮಿಕ ಮತಾಂತರದ ಶಂಕೆ ಮೇಲೆ ವಿಎಚ್‌ಪಿ ಸದಸ್ಯರು ಪ್ರಾರ್ಥನಾ ಸಭೆಗೆ ನುಗ್ಗಿದ್ದರು. ತಕ್ಷಣ ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದಾರೆ. ಅಲ್ಲಿ ಯಾವುದೇ ಅಪಹರಣ ಅಥವಾ ಒತ್ತೆಯಾಳು ಘಟನೆ ನಡೆದಿಲ್ಲ. ದೈಹಿಕ ಗಲಾಟೆ ಮತ್ತು ಇತರ ಅಹಿತಕರ ಘಟನೆ ಸಂಭವಿಸಿಲ್ಲ” ಎಂದು ಅಹಮದಾಬಾದ್ ನಗರ ಪೊಲೀಸರು ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಓಧವ್ ಪೊಲೀಸ್ ಇನ್ಸ್‌ಪೆಕ್ಟರ್ ಪ್ರತೀಕ್ ಜಿಂಜುವಾಡಿಯಾ ಮಾತನಾಡಿ, “ಈಸ್ಟರ್ ಹಬ್ಬದ ಸಂದರ್ಭದಲ್ಲಿ ಓಧವ್‌ನ ವಿಮಲ್‌ಪಾರ್ಕ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಪ್ರಾರ್ಥನಾ ಸಭೆಗೆ ನುಗ್ಗಿದ ವಿಎಚ್‌ಪಿ ಕಾರ್ಯಕರ್ತರು ಗದ್ದಲ ಸೃಷ್ಟಿಸಿದ್ದಾರೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ ಮತ್ತು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ತಿಳಿಸಿದ್ದಾರೆ.

ವಿಎಚ್‌ಪಿ ಕಾರ್ಯಕರ್ತರು ಪ್ರಾರ್ಥನಾ ಸಭೆಗೆ ನುಗ್ಗಿರುವ ಬಗ್ಗೆ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ತಕ್ಷಣ ಓಧವ್ ಪೊಲೀಸರ ತಂಡವು ಅಲ್ಲಿಗೆ ತಲುಪಿ ಪರಿಸ್ಥಿತಿಯನ್ನು ನಿಯಂತ್ರಿಸಿದೆ. ಘಟನೆ ಸಂಬಂಧ ಇನ್ನೂ ಎಫ್‌ಐಆರ್ ದಾಖಲಿಸಲಾಗಿಲ್ಲ ಎಂದು ಜಿಂಜುವಾಡಿಯಾ ಹೇಳಿದ್ದಾರೆ.

“ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದ ಕಾರಣ “ವಿಎಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು ಓಧವ್ ಮತ್ತು ನಿಕೋಲ್‌ನಲ್ಲಿರುವ ಕ್ರಿಶ್ಚಿಯನ್ನರ ಪೂಜಾ ಸ್ಥಳಗಳಿಗೆ ನುಗ್ಗಿದ್ದರು” ಎಂದು ಬಜರಂಗದಳದ ಉತ್ತರ ಗುಜರಾತ್ ಸಂಚಾಲಕ ಜ್ವಾಲಿತ್ ಮೆಹ್ತಾ ಒಪ್ಪಿಕೊಂಡಿದ್ದಾರೆ.

ಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...