Homeಮುಖಪುಟಗುಜರಾತ್: ಈಸ್ಟರ್ ಪ್ರಾರ್ಥನಾ ಸಭೆಗೆ ನುಗ್ಗಿ ವಿಎಚ್‌ಪಿ, ಬಜರಂಗದಳ ದುಷ್ಕರ್ಮಿಗಳಿಂದ ದಾಂಧಲೆ

ಗುಜರಾತ್: ಈಸ್ಟರ್ ಪ್ರಾರ್ಥನಾ ಸಭೆಗೆ ನುಗ್ಗಿ ವಿಎಚ್‌ಪಿ, ಬಜರಂಗದಳ ದುಷ್ಕರ್ಮಿಗಳಿಂದ ದಾಂಧಲೆ

- Advertisement -
- Advertisement -

ಅಹಮದಾಬಾದ್‌ನ ಓಧವ್‌ನಲ್ಲಿ ಪ್ರೊಟೆಸ್ಟಂಟ್ ಕ್ರಿಶ್ಚಿಯನ್ ಗುಂಪಿನ ಈಸ್ಟರ್ ಪ್ರಾರ್ಥನಾ ಸಭೆಗೆ ನುಗ್ಗಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಕಾರ್ಯಕರ್ತರ ಗುಂಪೊಂದು ಗದ್ದಲ ಎಬ್ಬಿಸಿದ ಘಟನೆ ಭಾನುವಾರ (ಏ.20) ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಅದರಲ್ಲಿ ಕೋಲು, ಲಾಠಿಗಳನ್ನು ಹಿಡಿದ ಪುರುಷರ ಗುಂಪು “ಹರ ಹರ ಮಹಾದೇವ್”, “ಜೈ ಶ್ರೀ ರಾಮ್” ಇತ್ಯಾದಿ ಘೋಷಣೆಗಳನ್ನು ಕೂಗುತ್ತಾ ಪ್ರಾರ್ಥನಾ ಸಭೆಗೆ ನುಗ್ಗಿ, ಅಲ್ಲಿ ಸೇರಿದ್ದ ಜನರನ್ನು ಹೊರ ಹೋಗುವಂತೆ ಆಕ್ರಮಣಕಾರಿಯಾಗಿ ಒತ್ತಾಯಿಸಿರುವುದು ಇದೆ.

ವೈರಲ್ ವಿಡಿಯೋವನ್ನು ಅನೇಕರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಗುಜರಾತ್ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಅಹಮದಾಬಾದ್ ನಗರ ಪೊಲೀಸರು, ಘಟನೆಯನ್ನು ದೃಢೀಕರಿಸಿದ್ದಾರೆ. “ಧಾರ್ಮಿಕ ಮತಾಂತರದ ಶಂಕೆ ಮೇಲೆ ವಿಎಚ್‌ಪಿ ಸದಸ್ಯರು ಪ್ರಾರ್ಥನಾ ಸಭೆಗೆ ನುಗ್ಗಿದ್ದರು. ತಕ್ಷಣ ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದಾರೆ. ಅಲ್ಲಿ ಯಾವುದೇ ಅಪಹರಣ ಅಥವಾ ಒತ್ತೆಯಾಳು ಘಟನೆ ನಡೆದಿಲ್ಲ. ದೈಹಿಕ ಗಲಾಟೆ ಮತ್ತು ಇತರ ಅಹಿತಕರ ಘಟನೆ ಸಂಭವಿಸಿಲ್ಲ” ಎಂದು ಅಹಮದಾಬಾದ್ ನಗರ ಪೊಲೀಸರು ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಓಧವ್ ಪೊಲೀಸ್ ಇನ್ಸ್‌ಪೆಕ್ಟರ್ ಪ್ರತೀಕ್ ಜಿಂಜುವಾಡಿಯಾ ಮಾತನಾಡಿ, “ಈಸ್ಟರ್ ಹಬ್ಬದ ಸಂದರ್ಭದಲ್ಲಿ ಓಧವ್‌ನ ವಿಮಲ್‌ಪಾರ್ಕ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಪ್ರಾರ್ಥನಾ ಸಭೆಗೆ ನುಗ್ಗಿದ ವಿಎಚ್‌ಪಿ ಕಾರ್ಯಕರ್ತರು ಗದ್ದಲ ಸೃಷ್ಟಿಸಿದ್ದಾರೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ ಮತ್ತು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ತಿಳಿಸಿದ್ದಾರೆ.

ವಿಎಚ್‌ಪಿ ಕಾರ್ಯಕರ್ತರು ಪ್ರಾರ್ಥನಾ ಸಭೆಗೆ ನುಗ್ಗಿರುವ ಬಗ್ಗೆ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ತಕ್ಷಣ ಓಧವ್ ಪೊಲೀಸರ ತಂಡವು ಅಲ್ಲಿಗೆ ತಲುಪಿ ಪರಿಸ್ಥಿತಿಯನ್ನು ನಿಯಂತ್ರಿಸಿದೆ. ಘಟನೆ ಸಂಬಂಧ ಇನ್ನೂ ಎಫ್‌ಐಆರ್ ದಾಖಲಿಸಲಾಗಿಲ್ಲ ಎಂದು ಜಿಂಜುವಾಡಿಯಾ ಹೇಳಿದ್ದಾರೆ.

“ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದ ಕಾರಣ “ವಿಎಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು ಓಧವ್ ಮತ್ತು ನಿಕೋಲ್‌ನಲ್ಲಿರುವ ಕ್ರಿಶ್ಚಿಯನ್ನರ ಪೂಜಾ ಸ್ಥಳಗಳಿಗೆ ನುಗ್ಗಿದ್ದರು” ಎಂದು ಬಜರಂಗದಳದ ಉತ್ತರ ಗುಜರಾತ್ ಸಂಚಾಲಕ ಜ್ವಾಲಿತ್ ಮೆಹ್ತಾ ಒಪ್ಪಿಕೊಂಡಿದ್ದಾರೆ.

ಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...