Homeಮುಖಪುಟಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮೇ 27 ರಂದು ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಹಿಂದುತ್ವ ನಾಯಕರಾದ ಯತಿ ನರಸಿಂಗಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ‘ಹೇಟ್‌ಮಾಂಗರ್ಸ್’ (ಒಂದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುವ ವ್ಯಕ್ತಿಗಳು) ಎಂದು ಕರೆದಿದ್ದಕ್ಕಾಗಿ ಜೂನ್ 1 ರಂದು ಉತ್ತರ ಪ್ರದೇಶ ಪೊಲೀಸರು ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಜುಬೈರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಜುಬೇರ್‌ ಬಂಧನಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ.ರಾಜು ಅವರು ಸರ್ಕಾರ ಪರವಾಗಿ ಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಜರಂಗ ಮುನಿಯು ಸೀತಾಪುರದಲ್ಲಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ‘ಗೌರವಾನ್ವಿತ’ ಧಾರ್ಮಿಕ ನಾಯಕ” ಎಂದು ಎಎಸ್‌ಜಿ ವಾದ ಮಾಡಿದ್ದಾರೆ.

“ನೀವು ಧಾರ್ಮಿಕ ಮುಖಂಡರನ್ನು ಹೇಟ್‌ಮಾಂಗರ್‌‌ ಎಂದು ಕರೆದರೆ, ಅದು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಎಎಸ್‌ಜಿ ರಾಜು ಅವರು ಯಾರನ್ನು ಗೌರವಾನ್ವಿತ ವ್ಯಕ್ತಿ ಎಂದು ಕರೆದಿದ್ದಾರೋ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ಸರಣಿ ದ್ವೇಷ ಭಾಷಣ ಮಾಡಿರುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಬಲಪಂಥೀಯ ಗುಂಪುಗಳು ನಂಬಿರುವ ಪಿತೂರಿ ಸಿದ್ಧಾಂತವಾದ ‘ಲವ್ ಜಿಹಾದ್’ಗೆ ಪ್ರತೀಕಾರವಾಗಿ ಮುಸ್ಲಿಂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಪದೇ ಪದೇ ಬೆದರಿಕೆ ಹಾಕಿದ ಕುಖ್ಯಾತಿಯನ್ನು ಭಜರಂಗ ಮುನಿ ಉದಾಸಿನ್ ಪಡೆದಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದಾಗಿ ಬಜರಂಗ ಮುನಿ ಬೆದರಿಕೆ ಹಾಕಿರುವ ವೈರಲ್ ವಿಡಿಯೋವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದೆಡೆ ಬೆಂಬಲಿಗರ ದೊಡ್ಡ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಬಜರಂಗಮುನಿ, ಮುಸ್ಲಿಂ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕುವುದು ವಿಡಿಯೊದಲ್ಲಿ ದಾಖಲಾಗಿದೆ. ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾ, “ನಾನು ಸತ್ತರೂ ಇಲ್ಲಿನ ಹಿಂದೂಗಳಿಗೆ ಸಾಕಷ್ಟು ತಾಪವನ್ನು ಬಿಟ್ಟು ಹೋಗುತ್ತೇನೆ. ಹಿಂದೂಗಳು ಖೈರಾಬಾದ್ ಅನ್ನು ಶ್ರೀರಾಮನಗರವನ್ನಾಗಿ ಮಾಡುತ್ತಾರೆ. ನಾನು ಇದನ್ನು ಬಹಿರಂಗವಾಗಿ ಹೇಳುತ್ತೇನೆ- ನೀವು ಒಬ್ಬ ಹಿಂದೂವನ್ನು ಕೊಂದರೆ, ನಾನು 10 ಮುಸ್ಲಿಮರನ್ನು ಕೊಲ್ಲುತ್ತೇನೆ” ಎನ್ನುತ್ತಾರೆ.

ಮುಸ್ಲಿಂ ಮಹಿಳೆಯರನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಬಜರಂಗಮುನಿ, “ಒಬ್ಬ ಹಿಂದೂ ಹುಡುಗಿಯನ್ನು ಲವ್ ಜಿಹಾದ್‌ಗೆ ಸಿಲುಕಿಸಿ ದೌರ್ಜನ್ಯ ಎಸಗಿದರೆ, ನಾನು 10 ಮುಸ್ಲಿಂ ಹುಡುಗಿಯರನ್ನು ‘ಲವ್ ಸನಾತನ’ಕ್ಕೆ ಸಿಲುಕಿಸಿ ಕಿರುಕುಳ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಬಜರಂಗ ಮುನಿಯನ್ನು ಏಪ್ರಿಲ್ 13 ರಂದು ಬಂಧಿಸಿ, ಏಪ್ರಿಲ್ 24 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ ಬಜರಂಗಮುನಿ, “ನಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಧರ್ಮಕ್ಕಾಗಿ ನಾನು 1,000 ಬಾರಿ ಜೈಲಿಗೆ ಹೋಗುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಏನು ಬೇಕಾದರೂ ಮಾಡುತ್ತೇನೆ, ನನ್ನನ್ನೇ ತ್ಯಾಗ ಕೂಡ ಮಾಡುತ್ತೇನೆ” ಎನ್ನುತ್ತಾರೆ.

ಇದನ್ನೂ ಓದಿರಿ: ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆ ಸಮಯದಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ ಜುಬೈರ್ ಅವರನ್ನು “ಹಿಂದೂ ವಿರೋಧಿ” ಎಂದು ಆರೋಪಿಸುತ್ತಾರೆ. “ನೀವು ಅವರ ಪ್ರೊಫೈಲ್ ಅನ್ನು ಪರಿಶೀಲಿಸಿದರೆ, ಹಿಂದೂ ವಿರೋಧಿಯಲ್ಲದ ಒಂದೇ ಒಂದು ಪೋಸ್ಟ್ ಇಲ್ಲ. ಅವರು ಮಾನವತಾವಾದಿ ಅಥವಾ ಜಾತ್ಯತೀತ ವ್ಯಕ್ತಿಯಾಗಿದ್ದರೆ, ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದೌರ್ಜನ್ಯ ಅಥವಾ ಅವರ ದ್ವೇಷದ ಭಾಷಣಗಳ ಬಗ್ಗೆ ಪೋಸ್ಟ್ ಮಾಡುತ್ತಿದ್ದರು. ಆದರೆ ಅವರು ಹಿಂದೂಗಳನ್ನು ಆಕ್ರಮಣಕಾರಿ ಎಂದು ತೋರಿಸುವ ಟ್ವೀಟ್‌ಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ” ಎಂದು ದೂರುತ್ತಾರೆ.

ದ್ವೇಷ ಭಾಷಣ ಪ್ರಕರಣಗಳ ಹೊರತಾಗಿ ಭಜರಂಗ ಮುನಿ 2021ರಲ್ಲಿ ಮೂವರು ಮುಸ್ಲಿಂ ಸಹೋದರರಿಂದ ಹಿಂಸಾತ್ಮಕವಾಗಿ ಭೂಕಬಳಿಕೆ ಮಾಡಿದ ಆರೋಪ ಹೊಂದಿದ್ದಾರೆ. ಭಜರಂಗ ಮುನಿಯು ಮುಸ್ಲಿಂ ಸಹೋದರರ  ವಿರುದ್ಧ ಪ್ರತಿ ಪ್ರಕರಣವನ್ನು ದಾಖಲಿಸಿದ ನಂತರ ಮೂವರು ಸಹೋದರರು ಐದು ತಿಂಗಳು ಜೈಲಿನಲ್ಲಿ ಕಳೆಯುತ್ತಾರೆ. ಆದರೆ ಈ ಪ್ರಕರಣದಲ್ಲಿ ಮಹಂತ್ ಅವರನ್ನು ಇಂದಿಗೂ ಬಂಧಿಸಲಾಗಿಲ್ಲ.

ಮೂಲ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದ ಎಲ್ಲ ಪ್ರಜಾಪ್ರಭುತ್ವ, ಸಾಂವಿಧಾನಿಕ ದೇಶಗಳು ನಮ್ಮ ದೇಶಕ್ಕೆ ಛಿಮಾರಿ ಹಾಕಿದ್ರು ಇನ್ನು ಇವರ ಕೋಮು ಭಾವನೆ ಕುಗ್ಗಲೇ ಇಲ್ಲ ಇಲ್ಲಿ ಬೇಲಿ ಹೊಲ ಮೆಯುತ್ತಿಲ್ಲ ಇಡೀ ಹೊಲವನ್ನೇ ಅಕ್ರಮಿಸಿಕೊಂಡಿದೆ ಇದೆ ನಮ್ಮ ನಿಜವಾದ ಭಾರತೀಯರ ವಿಪರ್ಯಾಸ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...