Homeಮುಖಪುಟಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮೇ 27 ರಂದು ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಹಿಂದುತ್ವ ನಾಯಕರಾದ ಯತಿ ನರಸಿಂಗಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ‘ಹೇಟ್‌ಮಾಂಗರ್ಸ್’ (ಒಂದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುವ ವ್ಯಕ್ತಿಗಳು) ಎಂದು ಕರೆದಿದ್ದಕ್ಕಾಗಿ ಜೂನ್ 1 ರಂದು ಉತ್ತರ ಪ್ರದೇಶ ಪೊಲೀಸರು ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಜುಬೈರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಜುಬೇರ್‌ ಬಂಧನಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ.ರಾಜು ಅವರು ಸರ್ಕಾರ ಪರವಾಗಿ ಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಜರಂಗ ಮುನಿಯು ಸೀತಾಪುರದಲ್ಲಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ‘ಗೌರವಾನ್ವಿತ’ ಧಾರ್ಮಿಕ ನಾಯಕ” ಎಂದು ಎಎಸ್‌ಜಿ ವಾದ ಮಾಡಿದ್ದಾರೆ.

“ನೀವು ಧಾರ್ಮಿಕ ಮುಖಂಡರನ್ನು ಹೇಟ್‌ಮಾಂಗರ್‌‌ ಎಂದು ಕರೆದರೆ, ಅದು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಎಎಸ್‌ಜಿ ರಾಜು ಅವರು ಯಾರನ್ನು ಗೌರವಾನ್ವಿತ ವ್ಯಕ್ತಿ ಎಂದು ಕರೆದಿದ್ದಾರೋ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ಸರಣಿ ದ್ವೇಷ ಭಾಷಣ ಮಾಡಿರುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಬಲಪಂಥೀಯ ಗುಂಪುಗಳು ನಂಬಿರುವ ಪಿತೂರಿ ಸಿದ್ಧಾಂತವಾದ ‘ಲವ್ ಜಿಹಾದ್’ಗೆ ಪ್ರತೀಕಾರವಾಗಿ ಮುಸ್ಲಿಂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಪದೇ ಪದೇ ಬೆದರಿಕೆ ಹಾಕಿದ ಕುಖ್ಯಾತಿಯನ್ನು ಭಜರಂಗ ಮುನಿ ಉದಾಸಿನ್ ಪಡೆದಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದಾಗಿ ಬಜರಂಗ ಮುನಿ ಬೆದರಿಕೆ ಹಾಕಿರುವ ವೈರಲ್ ವಿಡಿಯೋವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದೆಡೆ ಬೆಂಬಲಿಗರ ದೊಡ್ಡ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಬಜರಂಗಮುನಿ, ಮುಸ್ಲಿಂ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕುವುದು ವಿಡಿಯೊದಲ್ಲಿ ದಾಖಲಾಗಿದೆ. ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾ, “ನಾನು ಸತ್ತರೂ ಇಲ್ಲಿನ ಹಿಂದೂಗಳಿಗೆ ಸಾಕಷ್ಟು ತಾಪವನ್ನು ಬಿಟ್ಟು ಹೋಗುತ್ತೇನೆ. ಹಿಂದೂಗಳು ಖೈರಾಬಾದ್ ಅನ್ನು ಶ್ರೀರಾಮನಗರವನ್ನಾಗಿ ಮಾಡುತ್ತಾರೆ. ನಾನು ಇದನ್ನು ಬಹಿರಂಗವಾಗಿ ಹೇಳುತ್ತೇನೆ- ನೀವು ಒಬ್ಬ ಹಿಂದೂವನ್ನು ಕೊಂದರೆ, ನಾನು 10 ಮುಸ್ಲಿಮರನ್ನು ಕೊಲ್ಲುತ್ತೇನೆ” ಎನ್ನುತ್ತಾರೆ.

ಮುಸ್ಲಿಂ ಮಹಿಳೆಯರನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಬಜರಂಗಮುನಿ, “ಒಬ್ಬ ಹಿಂದೂ ಹುಡುಗಿಯನ್ನು ಲವ್ ಜಿಹಾದ್‌ಗೆ ಸಿಲುಕಿಸಿ ದೌರ್ಜನ್ಯ ಎಸಗಿದರೆ, ನಾನು 10 ಮುಸ್ಲಿಂ ಹುಡುಗಿಯರನ್ನು ‘ಲವ್ ಸನಾತನ’ಕ್ಕೆ ಸಿಲುಕಿಸಿ ಕಿರುಕುಳ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಬಜರಂಗ ಮುನಿಯನ್ನು ಏಪ್ರಿಲ್ 13 ರಂದು ಬಂಧಿಸಿ, ಏಪ್ರಿಲ್ 24 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ ಬಜರಂಗಮುನಿ, “ನಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಧರ್ಮಕ್ಕಾಗಿ ನಾನು 1,000 ಬಾರಿ ಜೈಲಿಗೆ ಹೋಗುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಏನು ಬೇಕಾದರೂ ಮಾಡುತ್ತೇನೆ, ನನ್ನನ್ನೇ ತ್ಯಾಗ ಕೂಡ ಮಾಡುತ್ತೇನೆ” ಎನ್ನುತ್ತಾರೆ.

ಇದನ್ನೂ ಓದಿರಿ: ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆ ಸಮಯದಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ ಜುಬೈರ್ ಅವರನ್ನು “ಹಿಂದೂ ವಿರೋಧಿ” ಎಂದು ಆರೋಪಿಸುತ್ತಾರೆ. “ನೀವು ಅವರ ಪ್ರೊಫೈಲ್ ಅನ್ನು ಪರಿಶೀಲಿಸಿದರೆ, ಹಿಂದೂ ವಿರೋಧಿಯಲ್ಲದ ಒಂದೇ ಒಂದು ಪೋಸ್ಟ್ ಇಲ್ಲ. ಅವರು ಮಾನವತಾವಾದಿ ಅಥವಾ ಜಾತ್ಯತೀತ ವ್ಯಕ್ತಿಯಾಗಿದ್ದರೆ, ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದೌರ್ಜನ್ಯ ಅಥವಾ ಅವರ ದ್ವೇಷದ ಭಾಷಣಗಳ ಬಗ್ಗೆ ಪೋಸ್ಟ್ ಮಾಡುತ್ತಿದ್ದರು. ಆದರೆ ಅವರು ಹಿಂದೂಗಳನ್ನು ಆಕ್ರಮಣಕಾರಿ ಎಂದು ತೋರಿಸುವ ಟ್ವೀಟ್‌ಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ” ಎಂದು ದೂರುತ್ತಾರೆ.

ದ್ವೇಷ ಭಾಷಣ ಪ್ರಕರಣಗಳ ಹೊರತಾಗಿ ಭಜರಂಗ ಮುನಿ 2021ರಲ್ಲಿ ಮೂವರು ಮುಸ್ಲಿಂ ಸಹೋದರರಿಂದ ಹಿಂಸಾತ್ಮಕವಾಗಿ ಭೂಕಬಳಿಕೆ ಮಾಡಿದ ಆರೋಪ ಹೊಂದಿದ್ದಾರೆ. ಭಜರಂಗ ಮುನಿಯು ಮುಸ್ಲಿಂ ಸಹೋದರರ  ವಿರುದ್ಧ ಪ್ರತಿ ಪ್ರಕರಣವನ್ನು ದಾಖಲಿಸಿದ ನಂತರ ಮೂವರು ಸಹೋದರರು ಐದು ತಿಂಗಳು ಜೈಲಿನಲ್ಲಿ ಕಳೆಯುತ್ತಾರೆ. ಆದರೆ ಈ ಪ್ರಕರಣದಲ್ಲಿ ಮಹಂತ್ ಅವರನ್ನು ಇಂದಿಗೂ ಬಂಧಿಸಲಾಗಿಲ್ಲ.

ಮೂಲ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದ ಎಲ್ಲ ಪ್ರಜಾಪ್ರಭುತ್ವ, ಸಾಂವಿಧಾನಿಕ ದೇಶಗಳು ನಮ್ಮ ದೇಶಕ್ಕೆ ಛಿಮಾರಿ ಹಾಕಿದ್ರು ಇನ್ನು ಇವರ ಕೋಮು ಭಾವನೆ ಕುಗ್ಗಲೇ ಇಲ್ಲ ಇಲ್ಲಿ ಬೇಲಿ ಹೊಲ ಮೆಯುತ್ತಿಲ್ಲ ಇಡೀ ಹೊಲವನ್ನೇ ಅಕ್ರಮಿಸಿಕೊಂಡಿದೆ ಇದೆ ನಮ್ಮ ನಿಜವಾದ ಭಾರತೀಯರ ವಿಪರ್ಯಾಸ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...