Homeಮುಖಪುಟಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮೇ 27 ರಂದು ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಹಿಂದುತ್ವ ನಾಯಕರಾದ ಯತಿ ನರಸಿಂಗಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ‘ಹೇಟ್‌ಮಾಂಗರ್ಸ್’ (ಒಂದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುವ ವ್ಯಕ್ತಿಗಳು) ಎಂದು ಕರೆದಿದ್ದಕ್ಕಾಗಿ ಜೂನ್ 1 ರಂದು ಉತ್ತರ ಪ್ರದೇಶ ಪೊಲೀಸರು ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಜುಬೈರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಜುಬೇರ್‌ ಬಂಧನಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ.ರಾಜು ಅವರು ಸರ್ಕಾರ ಪರವಾಗಿ ಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಜರಂಗ ಮುನಿಯು ಸೀತಾಪುರದಲ್ಲಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ‘ಗೌರವಾನ್ವಿತ’ ಧಾರ್ಮಿಕ ನಾಯಕ” ಎಂದು ಎಎಸ್‌ಜಿ ವಾದ ಮಾಡಿದ್ದಾರೆ.

“ನೀವು ಧಾರ್ಮಿಕ ಮುಖಂಡರನ್ನು ಹೇಟ್‌ಮಾಂಗರ್‌‌ ಎಂದು ಕರೆದರೆ, ಅದು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಎಎಸ್‌ಜಿ ರಾಜು ಅವರು ಯಾರನ್ನು ಗೌರವಾನ್ವಿತ ವ್ಯಕ್ತಿ ಎಂದು ಕರೆದಿದ್ದಾರೋ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ಸರಣಿ ದ್ವೇಷ ಭಾಷಣ ಮಾಡಿರುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಬಲಪಂಥೀಯ ಗುಂಪುಗಳು ನಂಬಿರುವ ಪಿತೂರಿ ಸಿದ್ಧಾಂತವಾದ ‘ಲವ್ ಜಿಹಾದ್’ಗೆ ಪ್ರತೀಕಾರವಾಗಿ ಮುಸ್ಲಿಂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಪದೇ ಪದೇ ಬೆದರಿಕೆ ಹಾಕಿದ ಕುಖ್ಯಾತಿಯನ್ನು ಭಜರಂಗ ಮುನಿ ಉದಾಸಿನ್ ಪಡೆದಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದಾಗಿ ಬಜರಂಗ ಮುನಿ ಬೆದರಿಕೆ ಹಾಕಿರುವ ವೈರಲ್ ವಿಡಿಯೋವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದೆಡೆ ಬೆಂಬಲಿಗರ ದೊಡ್ಡ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಬಜರಂಗಮುನಿ, ಮುಸ್ಲಿಂ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕುವುದು ವಿಡಿಯೊದಲ್ಲಿ ದಾಖಲಾಗಿದೆ. ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾ, “ನಾನು ಸತ್ತರೂ ಇಲ್ಲಿನ ಹಿಂದೂಗಳಿಗೆ ಸಾಕಷ್ಟು ತಾಪವನ್ನು ಬಿಟ್ಟು ಹೋಗುತ್ತೇನೆ. ಹಿಂದೂಗಳು ಖೈರಾಬಾದ್ ಅನ್ನು ಶ್ರೀರಾಮನಗರವನ್ನಾಗಿ ಮಾಡುತ್ತಾರೆ. ನಾನು ಇದನ್ನು ಬಹಿರಂಗವಾಗಿ ಹೇಳುತ್ತೇನೆ- ನೀವು ಒಬ್ಬ ಹಿಂದೂವನ್ನು ಕೊಂದರೆ, ನಾನು 10 ಮುಸ್ಲಿಮರನ್ನು ಕೊಲ್ಲುತ್ತೇನೆ” ಎನ್ನುತ್ತಾರೆ.

ಮುಸ್ಲಿಂ ಮಹಿಳೆಯರನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಬಜರಂಗಮುನಿ, “ಒಬ್ಬ ಹಿಂದೂ ಹುಡುಗಿಯನ್ನು ಲವ್ ಜಿಹಾದ್‌ಗೆ ಸಿಲುಕಿಸಿ ದೌರ್ಜನ್ಯ ಎಸಗಿದರೆ, ನಾನು 10 ಮುಸ್ಲಿಂ ಹುಡುಗಿಯರನ್ನು ‘ಲವ್ ಸನಾತನ’ಕ್ಕೆ ಸಿಲುಕಿಸಿ ಕಿರುಕುಳ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಬಜರಂಗ ಮುನಿಯನ್ನು ಏಪ್ರಿಲ್ 13 ರಂದು ಬಂಧಿಸಿ, ಏಪ್ರಿಲ್ 24 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ ಬಜರಂಗಮುನಿ, “ನಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಧರ್ಮಕ್ಕಾಗಿ ನಾನು 1,000 ಬಾರಿ ಜೈಲಿಗೆ ಹೋಗುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಏನು ಬೇಕಾದರೂ ಮಾಡುತ್ತೇನೆ, ನನ್ನನ್ನೇ ತ್ಯಾಗ ಕೂಡ ಮಾಡುತ್ತೇನೆ” ಎನ್ನುತ್ತಾರೆ.

ಇದನ್ನೂ ಓದಿರಿ: ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆ ಸಮಯದಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ ಜುಬೈರ್ ಅವರನ್ನು “ಹಿಂದೂ ವಿರೋಧಿ” ಎಂದು ಆರೋಪಿಸುತ್ತಾರೆ. “ನೀವು ಅವರ ಪ್ರೊಫೈಲ್ ಅನ್ನು ಪರಿಶೀಲಿಸಿದರೆ, ಹಿಂದೂ ವಿರೋಧಿಯಲ್ಲದ ಒಂದೇ ಒಂದು ಪೋಸ್ಟ್ ಇಲ್ಲ. ಅವರು ಮಾನವತಾವಾದಿ ಅಥವಾ ಜಾತ್ಯತೀತ ವ್ಯಕ್ತಿಯಾಗಿದ್ದರೆ, ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದೌರ್ಜನ್ಯ ಅಥವಾ ಅವರ ದ್ವೇಷದ ಭಾಷಣಗಳ ಬಗ್ಗೆ ಪೋಸ್ಟ್ ಮಾಡುತ್ತಿದ್ದರು. ಆದರೆ ಅವರು ಹಿಂದೂಗಳನ್ನು ಆಕ್ರಮಣಕಾರಿ ಎಂದು ತೋರಿಸುವ ಟ್ವೀಟ್‌ಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ” ಎಂದು ದೂರುತ್ತಾರೆ.

ದ್ವೇಷ ಭಾಷಣ ಪ್ರಕರಣಗಳ ಹೊರತಾಗಿ ಭಜರಂಗ ಮುನಿ 2021ರಲ್ಲಿ ಮೂವರು ಮುಸ್ಲಿಂ ಸಹೋದರರಿಂದ ಹಿಂಸಾತ್ಮಕವಾಗಿ ಭೂಕಬಳಿಕೆ ಮಾಡಿದ ಆರೋಪ ಹೊಂದಿದ್ದಾರೆ. ಭಜರಂಗ ಮುನಿಯು ಮುಸ್ಲಿಂ ಸಹೋದರರ  ವಿರುದ್ಧ ಪ್ರತಿ ಪ್ರಕರಣವನ್ನು ದಾಖಲಿಸಿದ ನಂತರ ಮೂವರು ಸಹೋದರರು ಐದು ತಿಂಗಳು ಜೈಲಿನಲ್ಲಿ ಕಳೆಯುತ್ತಾರೆ. ಆದರೆ ಈ ಪ್ರಕರಣದಲ್ಲಿ ಮಹಂತ್ ಅವರನ್ನು ಇಂದಿಗೂ ಬಂಧಿಸಲಾಗಿಲ್ಲ.

ಮೂಲ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದ ಎಲ್ಲ ಪ್ರಜಾಪ್ರಭುತ್ವ, ಸಾಂವಿಧಾನಿಕ ದೇಶಗಳು ನಮ್ಮ ದೇಶಕ್ಕೆ ಛಿಮಾರಿ ಹಾಕಿದ್ರು ಇನ್ನು ಇವರ ಕೋಮು ಭಾವನೆ ಕುಗ್ಗಲೇ ಇಲ್ಲ ಇಲ್ಲಿ ಬೇಲಿ ಹೊಲ ಮೆಯುತ್ತಿಲ್ಲ ಇಡೀ ಹೊಲವನ್ನೇ ಅಕ್ರಮಿಸಿಕೊಂಡಿದೆ ಇದೆ ನಮ್ಮ ನಿಜವಾದ ಭಾರತೀಯರ ವಿಪರ್ಯಾಸ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...