Homeಮುಖಪುಟಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮೇ 27 ರಂದು ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಹಿಂದುತ್ವ ನಾಯಕರಾದ ಯತಿ ನರಸಿಂಗಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ‘ಹೇಟ್‌ಮಾಂಗರ್ಸ್’ (ಒಂದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುವ ವ್ಯಕ್ತಿಗಳು) ಎಂದು ಕರೆದಿದ್ದಕ್ಕಾಗಿ ಜೂನ್ 1 ರಂದು ಉತ್ತರ ಪ್ರದೇಶ ಪೊಲೀಸರು ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಜುಬೈರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಜುಬೇರ್‌ ಬಂಧನಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ.ರಾಜು ಅವರು ಸರ್ಕಾರ ಪರವಾಗಿ ಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಜರಂಗ ಮುನಿಯು ಸೀತಾಪುರದಲ್ಲಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ‘ಗೌರವಾನ್ವಿತ’ ಧಾರ್ಮಿಕ ನಾಯಕ” ಎಂದು ಎಎಸ್‌ಜಿ ವಾದ ಮಾಡಿದ್ದಾರೆ.

“ನೀವು ಧಾರ್ಮಿಕ ಮುಖಂಡರನ್ನು ಹೇಟ್‌ಮಾಂಗರ್‌‌ ಎಂದು ಕರೆದರೆ, ಅದು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಎಎಸ್‌ಜಿ ರಾಜು ಅವರು ಯಾರನ್ನು ಗೌರವಾನ್ವಿತ ವ್ಯಕ್ತಿ ಎಂದು ಕರೆದಿದ್ದಾರೋ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ಸರಣಿ ದ್ವೇಷ ಭಾಷಣ ಮಾಡಿರುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಬಲಪಂಥೀಯ ಗುಂಪುಗಳು ನಂಬಿರುವ ಪಿತೂರಿ ಸಿದ್ಧಾಂತವಾದ ‘ಲವ್ ಜಿಹಾದ್’ಗೆ ಪ್ರತೀಕಾರವಾಗಿ ಮುಸ್ಲಿಂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಪದೇ ಪದೇ ಬೆದರಿಕೆ ಹಾಕಿದ ಕುಖ್ಯಾತಿಯನ್ನು ಭಜರಂಗ ಮುನಿ ಉದಾಸಿನ್ ಪಡೆದಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದಾಗಿ ಬಜರಂಗ ಮುನಿ ಬೆದರಿಕೆ ಹಾಕಿರುವ ವೈರಲ್ ವಿಡಿಯೋವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದೆಡೆ ಬೆಂಬಲಿಗರ ದೊಡ್ಡ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಬಜರಂಗಮುನಿ, ಮುಸ್ಲಿಂ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕುವುದು ವಿಡಿಯೊದಲ್ಲಿ ದಾಖಲಾಗಿದೆ. ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾ, “ನಾನು ಸತ್ತರೂ ಇಲ್ಲಿನ ಹಿಂದೂಗಳಿಗೆ ಸಾಕಷ್ಟು ತಾಪವನ್ನು ಬಿಟ್ಟು ಹೋಗುತ್ತೇನೆ. ಹಿಂದೂಗಳು ಖೈರಾಬಾದ್ ಅನ್ನು ಶ್ರೀರಾಮನಗರವನ್ನಾಗಿ ಮಾಡುತ್ತಾರೆ. ನಾನು ಇದನ್ನು ಬಹಿರಂಗವಾಗಿ ಹೇಳುತ್ತೇನೆ- ನೀವು ಒಬ್ಬ ಹಿಂದೂವನ್ನು ಕೊಂದರೆ, ನಾನು 10 ಮುಸ್ಲಿಮರನ್ನು ಕೊಲ್ಲುತ್ತೇನೆ” ಎನ್ನುತ್ತಾರೆ.

ಮುಸ್ಲಿಂ ಮಹಿಳೆಯರನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಬಜರಂಗಮುನಿ, “ಒಬ್ಬ ಹಿಂದೂ ಹುಡುಗಿಯನ್ನು ಲವ್ ಜಿಹಾದ್‌ಗೆ ಸಿಲುಕಿಸಿ ದೌರ್ಜನ್ಯ ಎಸಗಿದರೆ, ನಾನು 10 ಮುಸ್ಲಿಂ ಹುಡುಗಿಯರನ್ನು ‘ಲವ್ ಸನಾತನ’ಕ್ಕೆ ಸಿಲುಕಿಸಿ ಕಿರುಕುಳ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಬಜರಂಗ ಮುನಿಯನ್ನು ಏಪ್ರಿಲ್ 13 ರಂದು ಬಂಧಿಸಿ, ಏಪ್ರಿಲ್ 24 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ ಬಜರಂಗಮುನಿ, “ನಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಧರ್ಮಕ್ಕಾಗಿ ನಾನು 1,000 ಬಾರಿ ಜೈಲಿಗೆ ಹೋಗುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಏನು ಬೇಕಾದರೂ ಮಾಡುತ್ತೇನೆ, ನನ್ನನ್ನೇ ತ್ಯಾಗ ಕೂಡ ಮಾಡುತ್ತೇನೆ” ಎನ್ನುತ್ತಾರೆ.

ಇದನ್ನೂ ಓದಿರಿ: ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆ ಸಮಯದಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ ಜುಬೈರ್ ಅವರನ್ನು “ಹಿಂದೂ ವಿರೋಧಿ” ಎಂದು ಆರೋಪಿಸುತ್ತಾರೆ. “ನೀವು ಅವರ ಪ್ರೊಫೈಲ್ ಅನ್ನು ಪರಿಶೀಲಿಸಿದರೆ, ಹಿಂದೂ ವಿರೋಧಿಯಲ್ಲದ ಒಂದೇ ಒಂದು ಪೋಸ್ಟ್ ಇಲ್ಲ. ಅವರು ಮಾನವತಾವಾದಿ ಅಥವಾ ಜಾತ್ಯತೀತ ವ್ಯಕ್ತಿಯಾಗಿದ್ದರೆ, ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದೌರ್ಜನ್ಯ ಅಥವಾ ಅವರ ದ್ವೇಷದ ಭಾಷಣಗಳ ಬಗ್ಗೆ ಪೋಸ್ಟ್ ಮಾಡುತ್ತಿದ್ದರು. ಆದರೆ ಅವರು ಹಿಂದೂಗಳನ್ನು ಆಕ್ರಮಣಕಾರಿ ಎಂದು ತೋರಿಸುವ ಟ್ವೀಟ್‌ಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ” ಎಂದು ದೂರುತ್ತಾರೆ.

ದ್ವೇಷ ಭಾಷಣ ಪ್ರಕರಣಗಳ ಹೊರತಾಗಿ ಭಜರಂಗ ಮುನಿ 2021ರಲ್ಲಿ ಮೂವರು ಮುಸ್ಲಿಂ ಸಹೋದರರಿಂದ ಹಿಂಸಾತ್ಮಕವಾಗಿ ಭೂಕಬಳಿಕೆ ಮಾಡಿದ ಆರೋಪ ಹೊಂದಿದ್ದಾರೆ. ಭಜರಂಗ ಮುನಿಯು ಮುಸ್ಲಿಂ ಸಹೋದರರ  ವಿರುದ್ಧ ಪ್ರತಿ ಪ್ರಕರಣವನ್ನು ದಾಖಲಿಸಿದ ನಂತರ ಮೂವರು ಸಹೋದರರು ಐದು ತಿಂಗಳು ಜೈಲಿನಲ್ಲಿ ಕಳೆಯುತ್ತಾರೆ. ಆದರೆ ಈ ಪ್ರಕರಣದಲ್ಲಿ ಮಹಂತ್ ಅವರನ್ನು ಇಂದಿಗೂ ಬಂಧಿಸಲಾಗಿಲ್ಲ.

ಮೂಲ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದ ಎಲ್ಲ ಪ್ರಜಾಪ್ರಭುತ್ವ, ಸಾಂವಿಧಾನಿಕ ದೇಶಗಳು ನಮ್ಮ ದೇಶಕ್ಕೆ ಛಿಮಾರಿ ಹಾಕಿದ್ರು ಇನ್ನು ಇವರ ಕೋಮು ಭಾವನೆ ಕುಗ್ಗಲೇ ಇಲ್ಲ ಇಲ್ಲಿ ಬೇಲಿ ಹೊಲ ಮೆಯುತ್ತಿಲ್ಲ ಇಡೀ ಹೊಲವನ್ನೇ ಅಕ್ರಮಿಸಿಕೊಂಡಿದೆ ಇದೆ ನಮ್ಮ ನಿಜವಾದ ಭಾರತೀಯರ ವಿಪರ್ಯಾಸ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...