Homeಮುಖಪುಟಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮೇ 27 ರಂದು ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಹಿಂದುತ್ವ ನಾಯಕರಾದ ಯತಿ ನರಸಿಂಗಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ‘ಹೇಟ್‌ಮಾಂಗರ್ಸ್’ (ಒಂದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುವ ವ್ಯಕ್ತಿಗಳು) ಎಂದು ಕರೆದಿದ್ದಕ್ಕಾಗಿ ಜೂನ್ 1 ರಂದು ಉತ್ತರ ಪ್ರದೇಶ ಪೊಲೀಸರು ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಜುಬೈರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಜುಬೇರ್‌ ಬಂಧನಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ.ರಾಜು ಅವರು ಸರ್ಕಾರ ಪರವಾಗಿ ಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಜರಂಗ ಮುನಿಯು ಸೀತಾಪುರದಲ್ಲಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ‘ಗೌರವಾನ್ವಿತ’ ಧಾರ್ಮಿಕ ನಾಯಕ” ಎಂದು ಎಎಸ್‌ಜಿ ವಾದ ಮಾಡಿದ್ದಾರೆ.

“ನೀವು ಧಾರ್ಮಿಕ ಮುಖಂಡರನ್ನು ಹೇಟ್‌ಮಾಂಗರ್‌‌ ಎಂದು ಕರೆದರೆ, ಅದು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಎಎಸ್‌ಜಿ ರಾಜು ಅವರು ಯಾರನ್ನು ಗೌರವಾನ್ವಿತ ವ್ಯಕ್ತಿ ಎಂದು ಕರೆದಿದ್ದಾರೋ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ಸರಣಿ ದ್ವೇಷ ಭಾಷಣ ಮಾಡಿರುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಬಲಪಂಥೀಯ ಗುಂಪುಗಳು ನಂಬಿರುವ ಪಿತೂರಿ ಸಿದ್ಧಾಂತವಾದ ‘ಲವ್ ಜಿಹಾದ್’ಗೆ ಪ್ರತೀಕಾರವಾಗಿ ಮುಸ್ಲಿಂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಪದೇ ಪದೇ ಬೆದರಿಕೆ ಹಾಕಿದ ಕುಖ್ಯಾತಿಯನ್ನು ಭಜರಂಗ ಮುನಿ ಉದಾಸಿನ್ ಪಡೆದಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದಾಗಿ ಬಜರಂಗ ಮುನಿ ಬೆದರಿಕೆ ಹಾಕಿರುವ ವೈರಲ್ ವಿಡಿಯೋವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದೆಡೆ ಬೆಂಬಲಿಗರ ದೊಡ್ಡ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಬಜರಂಗಮುನಿ, ಮುಸ್ಲಿಂ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕುವುದು ವಿಡಿಯೊದಲ್ಲಿ ದಾಖಲಾಗಿದೆ. ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾ, “ನಾನು ಸತ್ತರೂ ಇಲ್ಲಿನ ಹಿಂದೂಗಳಿಗೆ ಸಾಕಷ್ಟು ತಾಪವನ್ನು ಬಿಟ್ಟು ಹೋಗುತ್ತೇನೆ. ಹಿಂದೂಗಳು ಖೈರಾಬಾದ್ ಅನ್ನು ಶ್ರೀರಾಮನಗರವನ್ನಾಗಿ ಮಾಡುತ್ತಾರೆ. ನಾನು ಇದನ್ನು ಬಹಿರಂಗವಾಗಿ ಹೇಳುತ್ತೇನೆ- ನೀವು ಒಬ್ಬ ಹಿಂದೂವನ್ನು ಕೊಂದರೆ, ನಾನು 10 ಮುಸ್ಲಿಮರನ್ನು ಕೊಲ್ಲುತ್ತೇನೆ” ಎನ್ನುತ್ತಾರೆ.

ಮುಸ್ಲಿಂ ಮಹಿಳೆಯರನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಬಜರಂಗಮುನಿ, “ಒಬ್ಬ ಹಿಂದೂ ಹುಡುಗಿಯನ್ನು ಲವ್ ಜಿಹಾದ್‌ಗೆ ಸಿಲುಕಿಸಿ ದೌರ್ಜನ್ಯ ಎಸಗಿದರೆ, ನಾನು 10 ಮುಸ್ಲಿಂ ಹುಡುಗಿಯರನ್ನು ‘ಲವ್ ಸನಾತನ’ಕ್ಕೆ ಸಿಲುಕಿಸಿ ಕಿರುಕುಳ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಬಜರಂಗ ಮುನಿಯನ್ನು ಏಪ್ರಿಲ್ 13 ರಂದು ಬಂಧಿಸಿ, ಏಪ್ರಿಲ್ 24 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ ಬಜರಂಗಮುನಿ, “ನಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಧರ್ಮಕ್ಕಾಗಿ ನಾನು 1,000 ಬಾರಿ ಜೈಲಿಗೆ ಹೋಗುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಏನು ಬೇಕಾದರೂ ಮಾಡುತ್ತೇನೆ, ನನ್ನನ್ನೇ ತ್ಯಾಗ ಕೂಡ ಮಾಡುತ್ತೇನೆ” ಎನ್ನುತ್ತಾರೆ.

ಇದನ್ನೂ ಓದಿರಿ: ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆ ಸಮಯದಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ ಜುಬೈರ್ ಅವರನ್ನು “ಹಿಂದೂ ವಿರೋಧಿ” ಎಂದು ಆರೋಪಿಸುತ್ತಾರೆ. “ನೀವು ಅವರ ಪ್ರೊಫೈಲ್ ಅನ್ನು ಪರಿಶೀಲಿಸಿದರೆ, ಹಿಂದೂ ವಿರೋಧಿಯಲ್ಲದ ಒಂದೇ ಒಂದು ಪೋಸ್ಟ್ ಇಲ್ಲ. ಅವರು ಮಾನವತಾವಾದಿ ಅಥವಾ ಜಾತ್ಯತೀತ ವ್ಯಕ್ತಿಯಾಗಿದ್ದರೆ, ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದೌರ್ಜನ್ಯ ಅಥವಾ ಅವರ ದ್ವೇಷದ ಭಾಷಣಗಳ ಬಗ್ಗೆ ಪೋಸ್ಟ್ ಮಾಡುತ್ತಿದ್ದರು. ಆದರೆ ಅವರು ಹಿಂದೂಗಳನ್ನು ಆಕ್ರಮಣಕಾರಿ ಎಂದು ತೋರಿಸುವ ಟ್ವೀಟ್‌ಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ” ಎಂದು ದೂರುತ್ತಾರೆ.

ದ್ವೇಷ ಭಾಷಣ ಪ್ರಕರಣಗಳ ಹೊರತಾಗಿ ಭಜರಂಗ ಮುನಿ 2021ರಲ್ಲಿ ಮೂವರು ಮುಸ್ಲಿಂ ಸಹೋದರರಿಂದ ಹಿಂಸಾತ್ಮಕವಾಗಿ ಭೂಕಬಳಿಕೆ ಮಾಡಿದ ಆರೋಪ ಹೊಂದಿದ್ದಾರೆ. ಭಜರಂಗ ಮುನಿಯು ಮುಸ್ಲಿಂ ಸಹೋದರರ  ವಿರುದ್ಧ ಪ್ರತಿ ಪ್ರಕರಣವನ್ನು ದಾಖಲಿಸಿದ ನಂತರ ಮೂವರು ಸಹೋದರರು ಐದು ತಿಂಗಳು ಜೈಲಿನಲ್ಲಿ ಕಳೆಯುತ್ತಾರೆ. ಆದರೆ ಈ ಪ್ರಕರಣದಲ್ಲಿ ಮಹಂತ್ ಅವರನ್ನು ಇಂದಿಗೂ ಬಂಧಿಸಲಾಗಿಲ್ಲ.

ಮೂಲ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದ ಎಲ್ಲ ಪ್ರಜಾಪ್ರಭುತ್ವ, ಸಾಂವಿಧಾನಿಕ ದೇಶಗಳು ನಮ್ಮ ದೇಶಕ್ಕೆ ಛಿಮಾರಿ ಹಾಕಿದ್ರು ಇನ್ನು ಇವರ ಕೋಮು ಭಾವನೆ ಕುಗ್ಗಲೇ ಇಲ್ಲ ಇಲ್ಲಿ ಬೇಲಿ ಹೊಲ ಮೆಯುತ್ತಿಲ್ಲ ಇಡೀ ಹೊಲವನ್ನೇ ಅಕ್ರಮಿಸಿಕೊಂಡಿದೆ ಇದೆ ನಮ್ಮ ನಿಜವಾದ ಭಾರತೀಯರ ವಿಪರ್ಯಾಸ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...