Homeಮುಖಪುಟಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ದುಷ್ಕರ್ಮಿ ‘ಬಜರಂಗ ಮುನಿ’ ಅರೆಸ್ಟ್‌‌

ಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ದುಷ್ಕರ್ಮಿ ‘ಬಜರಂಗ ಮುನಿ’ ಅರೆಸ್ಟ್‌‌

- Advertisement -
- Advertisement -

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಬೆದರಿಕೆ ಹಾಕಿದ್ದ, ಉತ್ತರ ಪ್ರದೇಶದ ಸೀತಾಪುರದ ಖೈರಾಬಾದ್‌ನಲ್ಲಿರುವ ಮಹರ್ಷಿ ಶ್ರೀ ಲಕ್ಷ್ಮಣ್ ದಾಸ್ ಉದಾಸಿನ್ ಆಶ್ರಮದ ಮುಖ್ಯಸ್ಥ ಭಜರಂಗ ಮುನಿ ದಾಸ್‌‌‌ನನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಯು ಧಾರ್ಮಿಕ ಮೆರವಣಿಗೆಯೊಂದರಲ್ಲಿ ಪೊಲೀಸರ ಸಮ್ಮುಖದಲ್ಲೆ ಆಘಾತಕಾರಿ ಬೆದರಿಕೆಗಳನ್ನು ಹಾಕಿದ್ದನು. ಬೆದರಿಕೆ ಹಾಕಿದ 11 ದಿನಗಳ ನಂತರ ಆತನ ಬಂಧನ ನಡೆದಿದೆ.

ಎಪ್ರಿಲ್ 2 ರಂದು ನಡೆದ ರ್‍ಯಾಲಿಯಲ್ಲಿ ದುಷ್ಕರ್ಮಿ ಬಜರಂಗ ಮುನಿ ದ್ವೇಷ ಭಾಷಣ ಮಾಡುವ ಎರಡು ನಿಮಿಷಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು ಮತ್ತು ಪ್ರತಿಭಟನೆಗಳೂ ದಾಖಲಾಗಿದ್ದವು. ಭಾಷಣದಲ್ಲಿ ಆತ ಅತ್ಯಾಚಾರ ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಕರೆ ನೀಡಿದ್ದನು. ಅವನ ಈ ಹೇಳಿಕೆಗೆ ಅಲ್ಲಿ ಸೇರಿದ್ದ ಜನರು ಜೈಶ್ರೀರಾಂ ಎಂಬ ಘೋಷಣೆ ಹಾಕಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊ ಕಳೆದ ಶುಕ್ರವಾರ ವೈರಲ್ ಆಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಕೂಡಾ ತೀಕ್ಷ್ಣ ಖಂಡನೆ ವ್ಯಕ್ತಪಡಿಸಿತ್ತು. ಇಂತಹ ಹೇಳಿಕೆಗಳನ್ನು ನೀಡುತ್ತಿರುವಾಗ ಪೊಲೀಸರು ಮೂಕಪ್ರೇಕ್ಷಕರಾಗಿ ಇರಬಾರದು ಎಂದು ಹೇಳಿದ್ದ ಆಯೋಗ ಅವನನ್ನು ಬಂಧಿಸುವಂತೆ ಕೋರಿತ್ತು.

ಇದನ್ನೂ ಓದಿ: ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಇದರ ನಂತರ ದುಷ್ಕರ್ಮಿ ಭಜರಂಗ ಮುನಿ ದಾಸ್‌ ವಿರುದ್ದ ಎಪ್‌ಐಆರ್‌ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ದ್ವೇಷ ಭಾಷಣ, ಅವಹೇಳನಕಾರಿ ಹೇಳಿಕೆಗಳು ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಾದ ಕೆಲವೇ ಗಂಟೆಗಳ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಬಜರಂಗ ಮುನಿ ಕ್ಷಮೆ ಯಾಚಿಸುತ್ತಿರುವ ವೀಡಿಯೋ ಕಾಣಿಸಿಕೊಂಡಿತ್ತು. “ನನ್ನ ಹೇಳಿಕೆಯನ್ನು ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ. ಅದಕ್ಕಾಗಿ ನಾನು ಬೇಷರತ್ ಕ್ಷಮೆಯಾಚಿಸುತ್ತೇನೆ” ಎಂದು ಅವನು ಹೇಳಿದ್ದನು.

ಕಳೆದ ತಿಂಗಳು ಹರಿದ್ವಾರ ಸೇರಿದಂತೆ ಅನೇಕ ಸ್ಥಳಗಳಲ್ಲಿ ದ್ವೇಷದ ಭಾಷಣಗಳ ಸರಣಿ ಕಾರ್ಯಕ್ರಮಗಳು ನಡೆದಿತ್ತು. ಅದರಲ್ಲಿ ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳನ್ನು ಕೈಗಿತ್ತಿಕೊಳ್ಳಲು ಮತ್ತು ನರಮೇಧ ಎಸಗಲು ಮುಕ್ತ ಕರೆಗಳನ್ನು ನೀಡಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಇದರ ವಿರುದ್ದ ಭಾರತೀಯ ಸೇನೆಯ ಐದು ಮಾಜಿ ಮುಖ್ಯಸ್ಥರು, ಅಧಿಕಾರಿಗಳು ಮತ್ತು ದೇಶದ ಗಣ್ಯರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಇದರ ನಂತರ ಕಾರ್ಯಕ್ರಮ ನಡೆಸಿದ್ದ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿತ್ತು.

ಪ್ರಕರಣದ ಪ್ರಮುಖ ಆರೋಪಿ ಯತಿ ನರಸಿಂಹಾನಂದ್‌‌ ದೆಹಲಿಯಲ್ಲಿ ಮತ್ತೊಂದು ದ್ವೇಷದ ಭಾಷಣವನ್ನು ಮಾಡಿ, ಅಲ್ಲಿ ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಕರೆ ನೀಡಿದ್ದನು. ಈತ ಒಂದು ತಿಂಗಳ ಹಿಂದೆಯಷ್ಟೆ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ಇಂದು ದ್ವೇಷ ಭಾಷಣ ಪ್ರಕರಣಗಳ ತನಿಖೆ ಮತ್ತು ಕ್ರಮ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಏಪ್ರಿಲ್ 22 ರೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಹರಿದ್ವಾರದಂತೆಯೇ ಹಿಮಾಚಲ ಪ್ರದೇಶದಲ್ಲಿ ಏಪ್ರಿಲ್ 17ರಂದು ಕಾರ್ಯಕ್ರಮ ನಡೆಯಲಿದೆ ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ:  ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...