Homeಮುಖಪುಟಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ದುಷ್ಕರ್ಮಿ ‘ಬಜರಂಗ ಮುನಿ’ ಅರೆಸ್ಟ್‌‌

ಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ದುಷ್ಕರ್ಮಿ ‘ಬಜರಂಗ ಮುನಿ’ ಅರೆಸ್ಟ್‌‌

- Advertisement -
- Advertisement -

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಬೆದರಿಕೆ ಹಾಕಿದ್ದ, ಉತ್ತರ ಪ್ರದೇಶದ ಸೀತಾಪುರದ ಖೈರಾಬಾದ್‌ನಲ್ಲಿರುವ ಮಹರ್ಷಿ ಶ್ರೀ ಲಕ್ಷ್ಮಣ್ ದಾಸ್ ಉದಾಸಿನ್ ಆಶ್ರಮದ ಮುಖ್ಯಸ್ಥ ಭಜರಂಗ ಮುನಿ ದಾಸ್‌‌‌ನನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಯು ಧಾರ್ಮಿಕ ಮೆರವಣಿಗೆಯೊಂದರಲ್ಲಿ ಪೊಲೀಸರ ಸಮ್ಮುಖದಲ್ಲೆ ಆಘಾತಕಾರಿ ಬೆದರಿಕೆಗಳನ್ನು ಹಾಕಿದ್ದನು. ಬೆದರಿಕೆ ಹಾಕಿದ 11 ದಿನಗಳ ನಂತರ ಆತನ ಬಂಧನ ನಡೆದಿದೆ.

ಎಪ್ರಿಲ್ 2 ರಂದು ನಡೆದ ರ್‍ಯಾಲಿಯಲ್ಲಿ ದುಷ್ಕರ್ಮಿ ಬಜರಂಗ ಮುನಿ ದ್ವೇಷ ಭಾಷಣ ಮಾಡುವ ಎರಡು ನಿಮಿಷಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು ಮತ್ತು ಪ್ರತಿಭಟನೆಗಳೂ ದಾಖಲಾಗಿದ್ದವು. ಭಾಷಣದಲ್ಲಿ ಆತ ಅತ್ಯಾಚಾರ ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಕರೆ ನೀಡಿದ್ದನು. ಅವನ ಈ ಹೇಳಿಕೆಗೆ ಅಲ್ಲಿ ಸೇರಿದ್ದ ಜನರು ಜೈಶ್ರೀರಾಂ ಎಂಬ ಘೋಷಣೆ ಹಾಕಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊ ಕಳೆದ ಶುಕ್ರವಾರ ವೈರಲ್ ಆಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಕೂಡಾ ತೀಕ್ಷ್ಣ ಖಂಡನೆ ವ್ಯಕ್ತಪಡಿಸಿತ್ತು. ಇಂತಹ ಹೇಳಿಕೆಗಳನ್ನು ನೀಡುತ್ತಿರುವಾಗ ಪೊಲೀಸರು ಮೂಕಪ್ರೇಕ್ಷಕರಾಗಿ ಇರಬಾರದು ಎಂದು ಹೇಳಿದ್ದ ಆಯೋಗ ಅವನನ್ನು ಬಂಧಿಸುವಂತೆ ಕೋರಿತ್ತು.

ಇದನ್ನೂ ಓದಿ: ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಇದರ ನಂತರ ದುಷ್ಕರ್ಮಿ ಭಜರಂಗ ಮುನಿ ದಾಸ್‌ ವಿರುದ್ದ ಎಪ್‌ಐಆರ್‌ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ದ್ವೇಷ ಭಾಷಣ, ಅವಹೇಳನಕಾರಿ ಹೇಳಿಕೆಗಳು ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಾದ ಕೆಲವೇ ಗಂಟೆಗಳ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಬಜರಂಗ ಮುನಿ ಕ್ಷಮೆ ಯಾಚಿಸುತ್ತಿರುವ ವೀಡಿಯೋ ಕಾಣಿಸಿಕೊಂಡಿತ್ತು. “ನನ್ನ ಹೇಳಿಕೆಯನ್ನು ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ. ಅದಕ್ಕಾಗಿ ನಾನು ಬೇಷರತ್ ಕ್ಷಮೆಯಾಚಿಸುತ್ತೇನೆ” ಎಂದು ಅವನು ಹೇಳಿದ್ದನು.

ಕಳೆದ ತಿಂಗಳು ಹರಿದ್ವಾರ ಸೇರಿದಂತೆ ಅನೇಕ ಸ್ಥಳಗಳಲ್ಲಿ ದ್ವೇಷದ ಭಾಷಣಗಳ ಸರಣಿ ಕಾರ್ಯಕ್ರಮಗಳು ನಡೆದಿತ್ತು. ಅದರಲ್ಲಿ ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳನ್ನು ಕೈಗಿತ್ತಿಕೊಳ್ಳಲು ಮತ್ತು ನರಮೇಧ ಎಸಗಲು ಮುಕ್ತ ಕರೆಗಳನ್ನು ನೀಡಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಇದರ ವಿರುದ್ದ ಭಾರತೀಯ ಸೇನೆಯ ಐದು ಮಾಜಿ ಮುಖ್ಯಸ್ಥರು, ಅಧಿಕಾರಿಗಳು ಮತ್ತು ದೇಶದ ಗಣ್ಯರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಇದರ ನಂತರ ಕಾರ್ಯಕ್ರಮ ನಡೆಸಿದ್ದ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿತ್ತು.

ಪ್ರಕರಣದ ಪ್ರಮುಖ ಆರೋಪಿ ಯತಿ ನರಸಿಂಹಾನಂದ್‌‌ ದೆಹಲಿಯಲ್ಲಿ ಮತ್ತೊಂದು ದ್ವೇಷದ ಭಾಷಣವನ್ನು ಮಾಡಿ, ಅಲ್ಲಿ ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಕರೆ ನೀಡಿದ್ದನು. ಈತ ಒಂದು ತಿಂಗಳ ಹಿಂದೆಯಷ್ಟೆ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ಇಂದು ದ್ವೇಷ ಭಾಷಣ ಪ್ರಕರಣಗಳ ತನಿಖೆ ಮತ್ತು ಕ್ರಮ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಏಪ್ರಿಲ್ 22 ರೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಹರಿದ್ವಾರದಂತೆಯೇ ಹಿಮಾಚಲ ಪ್ರದೇಶದಲ್ಲಿ ಏಪ್ರಿಲ್ 17ರಂದು ಕಾರ್ಯಕ್ರಮ ನಡೆಯಲಿದೆ ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ:  ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....