Homeಮುಖಪುಟಬಾಳಾ ಠಾಕ್ರೆ, ವಾಜಪೇಯಿ ಫೋಟೋ ಟ್ವೀಟ್ ಮಾಡಿ, ಹಳೆಯ ಸಂಬಂಧ ನೆನಪಿಸಿದ ಬಿಜೆಪಿ ಸಚಿವ..!

ಬಾಳಾ ಠಾಕ್ರೆ, ವಾಜಪೇಯಿ ಫೋಟೋ ಟ್ವೀಟ್ ಮಾಡಿ, ಹಳೆಯ ಸಂಬಂಧ ನೆನಪಿಸಿದ ಬಿಜೆಪಿ ಸಚಿವ..!

- Advertisement -
- Advertisement -

ಬಿಜೆಪಿಯೊಂದಿಗಿನ ಮೂವತ್ತು ವರ್ಷಗಳ ಮೈತ್ರಿ ಸಂಬಂಧ ಮುರಿದುಕೊಂಡು ಹೊರ ಬಂದ ಶಿವಸೇನೆ, ಕಾಂಗ್ರೆಸ್‌ ಬೆಂಬಲದೊಂದಿಗೆ ಎನ್‌ಸಿಪಿ ಜತೆ ಸೇರಿಕೊಂಡು ಸರ್ಕಾರ ರಚಿಸುವುದಾಗಿ ಘೋಷಿಸಿತು. ಈ ಬಾರಿ ಶಿವಸೇನೆ ಪಕ್ಷಕ್ಕೆ ಸಿಎಂ ಹುದ್ದೆ ಸಿಗಬೇಕು ಎಂದು ಪಟ್ಟು ಹಿಡಿದಿದೆ. ಸಿಎಂ ಹುದ್ದೆ ಬಿಟ್ಟು ಕೊಡಲು ನಿರಾಕರಿಸಿದ ಬಿಜೆಪಿ, ಶಿವಸೇನೆ ಜತೆಗಿನ ಸಂಬಂಧ ಬೇಡವೇ ಬೇಡ ಎಂದಿತು. ಅದಾದ ಕೆಲ ಹೊತ್ತಿನಲ್ಲೇ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹಿರಿಯ ನಾಯಕ ಬಾಳಾ ಸಾಹೇಬ್ ಠಾಕ್ರೆ, ಎಲ್‌.ಕೆ.ಅಡ್ವಾಣಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

ಅತ್ಯಂತ ಹಳೆಯ ಫೋಟೋ ಟ್ವೀಟ್ ಮಾಡಿದ್ದು, ಶಿವಸೇನೆ ಮತ್ತು ಬಿಜೆಪಿ ಸಂಬಂಧ ಎಷ್ಟು ಹಳೆಯದ್ದು ಮತ್ತು ಗಟ್ಟಿಯಾಗಿತ್ತು ಎಂಬುದನ್ನು ತಿಳಿಸಿದ್ದಾರೆ. ಬಾಳಾ ಸಾಹೇಬ್ ಠಾಕ್ರೆ ಅವರು ಮಹಾರಾಷ್ಟ್ರದಲ್ಲಿ ಕ್ರಾಂತಿ ಉಂಟು ಮಾಡಿದವು. ಸಂಪ್ರದಾಯವಾದಿಗಳಿಗೆ ಹೊಸ ಭರವಸೆ ಮತ್ತು ಮನ್ನಣೆ ಸಿಗುವಂತೆ ಮಾಡಿದವರು. ಬಾಳಾ ಸಾಹೇಬ್ ಠಾಕ್ರೆ, ಎಲ್ಲರನ್ನೂ ಹೇಗೆ ಒಂದುಗೂಡಿಸಿದರು ಎಂಬುದಕ್ಕೆ ಇತಿಹಾಸವೇ ಸಾಕ್ಷಿ ಹೇಳುತ್ತದೆ.

ಹಿಂದುತ್ವಕ್ಕಾಗಿ ಹೋರಾಡಿದ ಅವರ ಪಕ್ಷ ಹಿಂದುತ್ವ ವಿರೋಧಿಗಳೊಂದಿಗೆ ಹೊರಟಿದೆ. ಇದನ್ನು ಕಂಡಿದ್ದರೆ ಅವರಿಗೆಷ್ಟು ನೋವಾಗುತ್ತಿತ್ತು. ಈಗ ಶಿವಸೇನೆ, ಬಿಜೆಪಿಯನ್ನು ತೊರೆದಿದೆ. ಎರಡೂ ಪಕ್ಷಗಳು ೩೫ ವರ್ಷಗಳಲ್ಲಿ ಎರಡನೇ ಬಾರಿಗೆ ವಿಭಜನೆಯಾಗುತ್ತಿವೆ. ಆದರೆ ವೈರಿ ಪಕ್ಷ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವುದು ಇದೇ ಮೊದಲು.

ಇದನ್ನೂ ಓದಿ: ಮುಂದುವರೆದ ಮಹಾರಾಷ್ಟ್ರ ಸರ್ಕಾರ ರಚನೆ ಹಗ್ಗ-ಜಗ್ಗಾಟ: ಯಾವ ಪಕ್ಷ ಅಧಿಕಾರಕ್ಕೆ..!?

ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರು ಬಿಜೆಪಿ ಮತ್ತು ಶಿವಸೇನೆ ಒಗ್ಗೂಡಬೇಕು. ಸಿದ್ಧಾಂತದಲ್ಲಿನ ಸಾಮ್ಯತೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಏಕರೂಪದ ನಾಗರಿಕ ಸಂಹಿತೆ, ಮತ್ತು ಸಂವಿಧಾನದ 370 ನೇ ವಿಧಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಉಭಯ ಪಕ್ಷಗಳು ಒಂದೇ ರೀತಿಯ ಅಭಿಪ್ರಾಯ ಹಂಚಿಕೊಂಡಿವೆ ಎಂದು ಹೇಳಿದ್ದರು.

ಆದರೆ ಇಂದು ಎರಡೂ ಪಕ್ಷಗಳು ಅಧಿಕಾರಕ್ಕಾಗಿ ಸ್ಪರ್ಧೆ ನಡೆಸಿವೆ. ಎರಡೂ ಹಾವು-ಮುಂಗುಸಿಯಂತೆ ಕಚ್ಚಾಟಕ್ಕಿಳಿದಿವೆ. ಚುನಾವಣಾ ಪೂರ್ವ ಮೈತ್ರಿ ವೇಳೆ ಮಾಡಿಕೊಂಡ ೫೦: ೫೦ ಸೂತ್ರದಂತೆ ಬಿಜೆಪಿ ನಡೆಯಲಿಲ್ಲ. ಎರಡೂವರೆ ವರ್ಷ ಶಿವಸೇನೆಯಿಂದ ಸಿಎಂ ಆಗಬೇಕು ಎಂಬ ಬೇಡಿಕೆಗೂ ಬಿಜೆಪಿ ಸೊಪ್ಪು ಹಾಕಲಿಲ್ಲ. ಇದರಿಂದ ಮುನಿದ ಉದ್ಧವ್‌ ಠಾಕ್ರೆ, ಬದ್ಧ ವೈರಿ ಕಾಂಗ್ರೆಸ್ ಹಾಗೂ ಎನ್‌ಸಿಪಿ ಜತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿತು.

ಎನ್‌ಸಿಪಿ ಕೂಡ ಶಿವಸೇನೆಯ ಮನವಿಯನ್ನು ಒಪ್ಪಿಕೊಂಡಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನೂ ತನ್ನ ನಿಲುವು ತಿಳಿಸಿಲ್ಲ. ಶಿವಸೇನೆ ವಕ್ತಾರ ಸಂಜಯ್ ರಾವತ್ ಮತ್ತು ಉದ್ಧವ್ ಠಾಕ್ರೆ, ಸೋನಿಯಾ ಗಾಂಧಿ ಅವರಿಗೆ ಕರೆ ಮಾಡಿ ಬೆಂಬಲ ಸೂಚಿಸುವಂತೆ ಮನವಿ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಪಕ್ಷದ ಕೆಲವರು ಶಿವಸೇನೆಗೆ ಬೆಂಬಲ ಸೂಚಿಸುವಂತೆ ಸಲಹೆ ನೀಡಿದರೆ, ಇನ್ನು ಕೆಲವರು ಅವರ ಸಹವಾಸವೇ ಬೇಡ. ಶಿವಸೇನೆ ಮತ್ತು ಬಿಜೆಪಿ ನಾಟಕ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...