Homeಮುಖಪುಟಬಾಳಾ ಠಾಕ್ರೆ, ವಾಜಪೇಯಿ ಫೋಟೋ ಟ್ವೀಟ್ ಮಾಡಿ, ಹಳೆಯ ಸಂಬಂಧ ನೆನಪಿಸಿದ ಬಿಜೆಪಿ ಸಚಿವ..!

ಬಾಳಾ ಠಾಕ್ರೆ, ವಾಜಪೇಯಿ ಫೋಟೋ ಟ್ವೀಟ್ ಮಾಡಿ, ಹಳೆಯ ಸಂಬಂಧ ನೆನಪಿಸಿದ ಬಿಜೆಪಿ ಸಚಿವ..!

- Advertisement -
- Advertisement -

ಬಿಜೆಪಿಯೊಂದಿಗಿನ ಮೂವತ್ತು ವರ್ಷಗಳ ಮೈತ್ರಿ ಸಂಬಂಧ ಮುರಿದುಕೊಂಡು ಹೊರ ಬಂದ ಶಿವಸೇನೆ, ಕಾಂಗ್ರೆಸ್‌ ಬೆಂಬಲದೊಂದಿಗೆ ಎನ್‌ಸಿಪಿ ಜತೆ ಸೇರಿಕೊಂಡು ಸರ್ಕಾರ ರಚಿಸುವುದಾಗಿ ಘೋಷಿಸಿತು. ಈ ಬಾರಿ ಶಿವಸೇನೆ ಪಕ್ಷಕ್ಕೆ ಸಿಎಂ ಹುದ್ದೆ ಸಿಗಬೇಕು ಎಂದು ಪಟ್ಟು ಹಿಡಿದಿದೆ. ಸಿಎಂ ಹುದ್ದೆ ಬಿಟ್ಟು ಕೊಡಲು ನಿರಾಕರಿಸಿದ ಬಿಜೆಪಿ, ಶಿವಸೇನೆ ಜತೆಗಿನ ಸಂಬಂಧ ಬೇಡವೇ ಬೇಡ ಎಂದಿತು. ಅದಾದ ಕೆಲ ಹೊತ್ತಿನಲ್ಲೇ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹಿರಿಯ ನಾಯಕ ಬಾಳಾ ಸಾಹೇಬ್ ಠಾಕ್ರೆ, ಎಲ್‌.ಕೆ.ಅಡ್ವಾಣಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

ಅತ್ಯಂತ ಹಳೆಯ ಫೋಟೋ ಟ್ವೀಟ್ ಮಾಡಿದ್ದು, ಶಿವಸೇನೆ ಮತ್ತು ಬಿಜೆಪಿ ಸಂಬಂಧ ಎಷ್ಟು ಹಳೆಯದ್ದು ಮತ್ತು ಗಟ್ಟಿಯಾಗಿತ್ತು ಎಂಬುದನ್ನು ತಿಳಿಸಿದ್ದಾರೆ. ಬಾಳಾ ಸಾಹೇಬ್ ಠಾಕ್ರೆ ಅವರು ಮಹಾರಾಷ್ಟ್ರದಲ್ಲಿ ಕ್ರಾಂತಿ ಉಂಟು ಮಾಡಿದವು. ಸಂಪ್ರದಾಯವಾದಿಗಳಿಗೆ ಹೊಸ ಭರವಸೆ ಮತ್ತು ಮನ್ನಣೆ ಸಿಗುವಂತೆ ಮಾಡಿದವರು. ಬಾಳಾ ಸಾಹೇಬ್ ಠಾಕ್ರೆ, ಎಲ್ಲರನ್ನೂ ಹೇಗೆ ಒಂದುಗೂಡಿಸಿದರು ಎಂಬುದಕ್ಕೆ ಇತಿಹಾಸವೇ ಸಾಕ್ಷಿ ಹೇಳುತ್ತದೆ.

ಹಿಂದುತ್ವಕ್ಕಾಗಿ ಹೋರಾಡಿದ ಅವರ ಪಕ್ಷ ಹಿಂದುತ್ವ ವಿರೋಧಿಗಳೊಂದಿಗೆ ಹೊರಟಿದೆ. ಇದನ್ನು ಕಂಡಿದ್ದರೆ ಅವರಿಗೆಷ್ಟು ನೋವಾಗುತ್ತಿತ್ತು. ಈಗ ಶಿವಸೇನೆ, ಬಿಜೆಪಿಯನ್ನು ತೊರೆದಿದೆ. ಎರಡೂ ಪಕ್ಷಗಳು ೩೫ ವರ್ಷಗಳಲ್ಲಿ ಎರಡನೇ ಬಾರಿಗೆ ವಿಭಜನೆಯಾಗುತ್ತಿವೆ. ಆದರೆ ವೈರಿ ಪಕ್ಷ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವುದು ಇದೇ ಮೊದಲು.

ಇದನ್ನೂ ಓದಿ: ಮುಂದುವರೆದ ಮಹಾರಾಷ್ಟ್ರ ಸರ್ಕಾರ ರಚನೆ ಹಗ್ಗ-ಜಗ್ಗಾಟ: ಯಾವ ಪಕ್ಷ ಅಧಿಕಾರಕ್ಕೆ..!?

ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರು ಬಿಜೆಪಿ ಮತ್ತು ಶಿವಸೇನೆ ಒಗ್ಗೂಡಬೇಕು. ಸಿದ್ಧಾಂತದಲ್ಲಿನ ಸಾಮ್ಯತೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಏಕರೂಪದ ನಾಗರಿಕ ಸಂಹಿತೆ, ಮತ್ತು ಸಂವಿಧಾನದ 370 ನೇ ವಿಧಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಉಭಯ ಪಕ್ಷಗಳು ಒಂದೇ ರೀತಿಯ ಅಭಿಪ್ರಾಯ ಹಂಚಿಕೊಂಡಿವೆ ಎಂದು ಹೇಳಿದ್ದರು.

ಆದರೆ ಇಂದು ಎರಡೂ ಪಕ್ಷಗಳು ಅಧಿಕಾರಕ್ಕಾಗಿ ಸ್ಪರ್ಧೆ ನಡೆಸಿವೆ. ಎರಡೂ ಹಾವು-ಮುಂಗುಸಿಯಂತೆ ಕಚ್ಚಾಟಕ್ಕಿಳಿದಿವೆ. ಚುನಾವಣಾ ಪೂರ್ವ ಮೈತ್ರಿ ವೇಳೆ ಮಾಡಿಕೊಂಡ ೫೦: ೫೦ ಸೂತ್ರದಂತೆ ಬಿಜೆಪಿ ನಡೆಯಲಿಲ್ಲ. ಎರಡೂವರೆ ವರ್ಷ ಶಿವಸೇನೆಯಿಂದ ಸಿಎಂ ಆಗಬೇಕು ಎಂಬ ಬೇಡಿಕೆಗೂ ಬಿಜೆಪಿ ಸೊಪ್ಪು ಹಾಕಲಿಲ್ಲ. ಇದರಿಂದ ಮುನಿದ ಉದ್ಧವ್‌ ಠಾಕ್ರೆ, ಬದ್ಧ ವೈರಿ ಕಾಂಗ್ರೆಸ್ ಹಾಗೂ ಎನ್‌ಸಿಪಿ ಜತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿತು.

ಎನ್‌ಸಿಪಿ ಕೂಡ ಶಿವಸೇನೆಯ ಮನವಿಯನ್ನು ಒಪ್ಪಿಕೊಂಡಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನೂ ತನ್ನ ನಿಲುವು ತಿಳಿಸಿಲ್ಲ. ಶಿವಸೇನೆ ವಕ್ತಾರ ಸಂಜಯ್ ರಾವತ್ ಮತ್ತು ಉದ್ಧವ್ ಠಾಕ್ರೆ, ಸೋನಿಯಾ ಗಾಂಧಿ ಅವರಿಗೆ ಕರೆ ಮಾಡಿ ಬೆಂಬಲ ಸೂಚಿಸುವಂತೆ ಮನವಿ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಪಕ್ಷದ ಕೆಲವರು ಶಿವಸೇನೆಗೆ ಬೆಂಬಲ ಸೂಚಿಸುವಂತೆ ಸಲಹೆ ನೀಡಿದರೆ, ಇನ್ನು ಕೆಲವರು ಅವರ ಸಹವಾಸವೇ ಬೇಡ. ಶಿವಸೇನೆ ಮತ್ತು ಬಿಜೆಪಿ ನಾಟಕ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...