Homeಕರ್ನಾಟಕಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು... ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ...

ಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು… ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ…

- Advertisement -
- Advertisement -

| ಶಿವಾ |

ಕರ್ನಾಟಕ ಪ್ರಗತಿರಂಗದ ಸಭೆಗಳಲ್ಲಿ ಪಾಲ್ಗೊಳ್ಳಲು ಬಳ್ಳಾರಿ ಜಿಲ್ಲೆಯ ವಿವಿಧ ಪಟ್ಟಣ, ಹಳ್ಳಿಗಳನ್ನು ಸುತ್ತಿ ಬಂದಿದ್ದ ಪಿ. ಲಂಕೇಶರು, ‘ಮರೆಯುವ ಮುನ್ನ’ದಲ್ಲಿ ಬಳ್ಳಾರಿಯ ಜಾಲಿಮುಳ್ಳುಗಳ ಕುರಿತೇ ಒಂದು ಆಹ್ಲಾದಕರ ಟಿಪ್ಪಣಿ ಬರೆದಿದ್ದರು. ಈ ಮುಳ್ಳು ಜಾಲಿ ಗಿಡವೇ ಇಲ್ಲಿನ ಬಡವರಿಗೆ ಉರುವಲು, ದೇಹಭಾಧೆ ತೀರಿಸಿಕೊಳ್ಳಲು ಮರೆ… ಎಂಬರ್ಥದಲ್ಲಿ ಬರೆದು, ಜನರು ಸ್ಥಳೀಯ ವಾತಾವರಣದಲ್ಲಿ ಬದುಕು ಕಟ್ಟಿಗೊಳ್ಳುವ ಹಿಂದಿನ ವಾಸ್ತವವನ್ನು ತೆರದಿದಿಟ್ಟಿದ್ದರು. ಉತ್ತರ ಕರ್ನಾಟಕದ ತುಂಬ ಹರಡಿರುವ ಈ ಮುಳ್ಳು ಜಾಲಿಯ ‘ಜೀವಪರತೆ’ಯನ್ನು ಇಲ್ಲಿ ನೀಡಲಾಗಿದೆ…

ಇದು ಜಾಲಿ ! ಎಲ್ಲೆಂದರಲ್ಲಿ ಜಾಲಿಯಾಗಿ ಬೆಳೆಯುವ ಜಾತಿಯ ಮುಳ್ಳು ಪೊದೆಯಿದು.
ಉತ್ತರ ಕರ್ನಾಟಕ ಬಹುತೇಕ ಭಾಗಗಳಲ್ಲಿ ಇದು ಬೇರು ಬಿಟ್ಟು, ತನ್ನದೆಯಾದ ದಟ್ಟ ಪೊದೆಯಾಕಾರದ ಕಾಡನ್ನು ಬೆಳೆಯುವ ಛಾತಿಯನ್ನು ಹೊಂದಿದೆ. ಬಯಲು ಪ್ರದೇಶದಲ್ಲಿ ಹಾಗೂ ನದಿದಡ, ಹಳ್ಳಕೊಳ್ಳ, ಕೋಟೆ, ಕಂದಕ ಸೇರಿದಂತೆ ಖಾಲಿ ಪ್ರದೇಶದಲ್ಲಿ ನೀರಿಲ್ಲದೆ, ಸಂರಕ್ಷಣೆಯಿಲ್ಲದೆ ಬೆಳೆಯುವ ಜಾಲಿ, ಬಹುಪಯೋಗಿ ಮುಳ್ಳಿನ ಕಂಟಿಯಾಗಿದೆ.

ಜಾಲಿ ಜಾತಕ:
ಸ್ವತಂತ್ರ ಪೂರ್ವದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ಅಧಿಕಾರಿಗಳು ಭಾರತಕ್ಕೆ ಬರುವಾಗ ತಮ್ಮ ಹಡಗುಗಳಿಗೆ ಇಂಧನ ಪೂರೈಸಲು ಮತ್ತು ಅಗ್ಗಿಷ್ಟಿಕೆಯನ್ನು ಉರಿಸಿಕೊಳ್ಳಲು ಈ ಜಾಲಿಯ ಮರವನ್ನು ಆಶ್ರಯಿಸುತ್ತಿದ್ದರು. ಮೂಲತಃ ಇದು ದಕ್ಷಿಣ ಆಫ್ರಿಕಾದ ಅಮೇಜಾನ್ ಕಾಡುಗಳಲ್ಲಿ ಕಂಡು ಬರುವ, ಕ್ಯಾಕ್ಟಸ್ ಮುಳ್ಳು ಜಾತಿಯ ಸಸ್ಯ ಸಂಕುಲವಿದು.

ರಾಜ್ಯದ ಬಳ್ಳಾರಿ ಭಾಗದಲ್ಲಿ ಈ ಜಾಲಿ ಮರವು ಮೊದಲ ಬಾರಿಗೆ ಬೇರು ಬಿಟ್ಟ ಉದಾಹರಣೆಯಿದೆ. ಈಗಲೂ ಈ ಮುಳ್ಳು ಪೊದೆಯನ್ನು ಬಳ್ಳಾರಿ ಜಾಲಿಯಂದು ಉತ್ತರ ಕರ್ನಾಟಕದ ರೈತರು ಗುರುತಿಸುತ್ತಾರೆ. ಬಳ್ಳಾರಿ ಜಾಲಿ, ಇದು ಮೂಲತಃ ಹಂದಿ ಸಾಕಾಣಿಕೆಗೆ ಬಳಕೆಯಾಗುವ ಪೊದೆಯಾಗಿದೆ. ಜಾಲಿಗಿಡದ ಹೊಂಬಣ್ಣದ ಹಣ್ಣಾದ ಕಾಯಿಗಳು ಬೆಲ್ಲದ ರುಚಿಯನ್ನು ಹೊಂದಿರುತ್ತವೆ. ಅದರೊಳಗಿರುವ ಬೀಜಗಳು ವಿಷಕಾರಿಯಾಗಿರುತ್ತವೆ. ಇದರ ಕಾಯಿಗಳನ್ನು ಹಂದಿಗಳಿಗೆ ಆಹಾರವಾಗಿ ಬಳಸಲಾಗುತ್ತದೆ. ಇದರೊಂದಿಗೆ ಜಾಲಿಗಿಡ, ರೈತರ ಪಾಲಿಗೆ ಹೊಲದ ಬದುಗಳಲ್ಲಿ ಜೀವಂತ ಬೇಲಿಯಾಗಿದೆ. ಗ್ರಾಮೀಣ ಪ್ರದೇಶದ ಬಡವರು ಇದನ್ನು ಉರುವಲಾಗಿ ಬಳಸುತ್ತಾರೆ.

ಬಹುಪಯೋಗಿ ಜಾಲಿ ಜಾಲ:
ಜಾಲಿ ಅನೇಕ ಪ್ರಭೇದಗಳನ್ನು ಒಳಗೊಂಡಿದೆ. ದೊಡ್ಡ ಜಾಲಿ, ಸಣ್ಣ ಜಾಲಿ, ರಾಮಜಾಲಿ, ಕರಿಜಾಲಿ, ಹಿಕ್‍ಜಾಲಿ, ಜೀನಿಕಂಟಿ ಎಂದು ಕರೆಯಲ್ಪಡುತ್ತದೆ. ಬಿದರಿನಂತೆ ಇದು ಮೆದುವಾಗಿ ಬಾಗುವ ಗುಣವನ್ನು ಹೊಂದಿದೆ. ಹಸಿ ಕಟ್ಟಿಗೆಯನ್ನು ಬಿಲ್ಲಿನಂತೆ ಬಾಗಿಸಬಹುದು. ಬಲಿತ ಕಟ್ಟಿಗೆಯನ್ನು ಉರುವಲು ಇದ್ದಿಲನ್ನಾಗಿ ಪರಿವರ್ತಿಸುತ್ತಾರೆ.

ಉತ್ತರ ಕರ್ನಾಟಕ ಸೇರಿದಂತೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ, ತೆಲಗಿ, ಜಾಯವಾಡಗಿ ಹಾಗೂ ಇಂಡಿ ತಾಲೂಕಿನ ಭತಗುಣಕಿ, ನಂದ್ರಾಳ, ಹಲಸಂಗಿ, ಅಜನಾಳ, ಹೊರ್ತಿ, ಬುದಿಹಾಳ, ಬೇನೂರ ಆಸು ಪಾಸಿನ ಗ್ರಾಮಗಳಲ್ಲಿ ಜಾಲಿಕಟ್ಟಿಗೆಯಿಂದ ಇದ್ದಿಲು ತಯಾರಿಸಲಾಗುತ್ತದೆ.

ಕಾಶ್ಮೀರದಿಂದ ಕನ್ಯಾಕುಮಾರಿಗೆ:
ಬರದ ಭೂಮಿಯಲ್ಲಿ ಬರಬರನೇ ಮೇಲೆದ್ದು, ದಟ್ಟ ಪೊದೆಯಾಗಿ ಬೆಳೆಯುವ ಈ ಜಾಲಿ ಗಿಡಗಳು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ಹರಡಿಕೊಂಡಿವೆ. ನೀರು ಹಾಗೂ ಸಂರಕ್ಷಣೆಯ ಅವಶ್ಯಕತೆ ಇಲ್ಲದೆ, ಬಯಲು ಪ್ರದೇಶದ ಸಿಕ್ಕ ಸಿಕ್ಕಲ್ಲಿ ಬೆಳೆದು ನಿಲ್ಲುವ ಜಾಲಿಗಿಡ, ತನ್ನದೆ ಆದ ವಿಶೇಷತೆಯನ್ನು ಹೊಂದಿ, ಭಾರತೀಯರ ಮನೆ, ಮನದಲ್ಲಿ ಅಚ್ಚಾಗಿ ಉಳಿದುಕೊಂಡಿದೆ.

ವರ್ಷದ ಹನ್ನೆರಡು ತಿಂಗಳು ಬೆಳೆದು ನಿಲ್ಲುವ ಈ ಜಾಲಿ ಗಿಡ, ಜಮ್ಮು- ಕಾಶ್ಮೀರದ ಬಾರಾಮುಲ್ಲಾ, ಅನಂತನಾಗ, ನೇಪಾಳ ಗಡಿಭಾಗದ ಗೋರಕಪುರ, ಗೌರಿಪಾಂಟಾ ಹಾಗೂ ಪಾಕಿಸ್ತಾನ, ಬಾಂಗ್ಲಾ ದೇಶಗಳಲ್ಲೂ ಕಂಡು ಬರುತ್ತದೆ.
ಅಲ್ಲದೆ ಶ್ರೀಲಂಕಾ, ಮಾಲ್‍ಡ್ವೀಸ್ ದ್ವೀಪಗಳು ಸೇರಿದಂತೆ ದಕ್ಷಿಣ ಆಫ್ರಿಕಾದ ಅಮೇಜಾನ್ ತಪ್ಪಲು ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ.

ವಿಷಕಾರಿ ನಂಜು ಮುಳ್ಳು:
ಈ ಜಾಲಿಗಿಡ ತನ್ನ ಮೈತುಂಬಾ ಮುಳ್ಳುಗಳನ್ನು ತುಂಬಿಕೊಂಡರೂ ಎಲೆಗಳು ಮಾತ್ರ ಚಿಕ್ಕದಾಗಿರುತ್ತವೆ. ಕಾಯಿಗಳಂತೂ ಗೇಣುದ್ದ ಸಪೂರವಾಗಿ ಬೆಳೆದಿರುತ್ತವೆ. ಜಾಲಿ ಮುಳ್ಳು ಮನುಷ್ಯನ ಕೈ, ಕಾಲಿಗೆ ಚುಚ್ಚಿದರೆ, ನಂಜಾಗಿ ತೀವ್ರ ನೋವುಂಟು ಮಾಡುತ್ತದೆ.
ಈ ಸಸ್ಯ ಗಿಡವಾಗಿ, ಮರವಾಗಿ ಬೆಳೆದರೂ ಕೂಡ, ತಂಪಾದ ನೆರಳು ನೀಡುವುದಿಲ್ಲ. ಈ ಗಿಡಗಳ ಸುತ್ತಮುತ್ತ ವಾತಾವರಣ ಬಿಸಿಯಾಗಿರುವುದು ಸಾಮಾನ್ಯ. ಆದರೂ ಈ ಜಾಲಿಗಿಡ ದೇಶದ ತುಂಬಾ ಕಂಡು ಬರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...