Homeಕರ್ನಾಟಕಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು... ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ...

ಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು… ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ…

- Advertisement -
- Advertisement -

| ಶಿವಾ |

ಕರ್ನಾಟಕ ಪ್ರಗತಿರಂಗದ ಸಭೆಗಳಲ್ಲಿ ಪಾಲ್ಗೊಳ್ಳಲು ಬಳ್ಳಾರಿ ಜಿಲ್ಲೆಯ ವಿವಿಧ ಪಟ್ಟಣ, ಹಳ್ಳಿಗಳನ್ನು ಸುತ್ತಿ ಬಂದಿದ್ದ ಪಿ. ಲಂಕೇಶರು, ‘ಮರೆಯುವ ಮುನ್ನ’ದಲ್ಲಿ ಬಳ್ಳಾರಿಯ ಜಾಲಿಮುಳ್ಳುಗಳ ಕುರಿತೇ ಒಂದು ಆಹ್ಲಾದಕರ ಟಿಪ್ಪಣಿ ಬರೆದಿದ್ದರು. ಈ ಮುಳ್ಳು ಜಾಲಿ ಗಿಡವೇ ಇಲ್ಲಿನ ಬಡವರಿಗೆ ಉರುವಲು, ದೇಹಭಾಧೆ ತೀರಿಸಿಕೊಳ್ಳಲು ಮರೆ… ಎಂಬರ್ಥದಲ್ಲಿ ಬರೆದು, ಜನರು ಸ್ಥಳೀಯ ವಾತಾವರಣದಲ್ಲಿ ಬದುಕು ಕಟ್ಟಿಗೊಳ್ಳುವ ಹಿಂದಿನ ವಾಸ್ತವವನ್ನು ತೆರದಿದಿಟ್ಟಿದ್ದರು. ಉತ್ತರ ಕರ್ನಾಟಕದ ತುಂಬ ಹರಡಿರುವ ಈ ಮುಳ್ಳು ಜಾಲಿಯ ‘ಜೀವಪರತೆ’ಯನ್ನು ಇಲ್ಲಿ ನೀಡಲಾಗಿದೆ…

ಇದು ಜಾಲಿ ! ಎಲ್ಲೆಂದರಲ್ಲಿ ಜಾಲಿಯಾಗಿ ಬೆಳೆಯುವ ಜಾತಿಯ ಮುಳ್ಳು ಪೊದೆಯಿದು.
ಉತ್ತರ ಕರ್ನಾಟಕ ಬಹುತೇಕ ಭಾಗಗಳಲ್ಲಿ ಇದು ಬೇರು ಬಿಟ್ಟು, ತನ್ನದೆಯಾದ ದಟ್ಟ ಪೊದೆಯಾಕಾರದ ಕಾಡನ್ನು ಬೆಳೆಯುವ ಛಾತಿಯನ್ನು ಹೊಂದಿದೆ. ಬಯಲು ಪ್ರದೇಶದಲ್ಲಿ ಹಾಗೂ ನದಿದಡ, ಹಳ್ಳಕೊಳ್ಳ, ಕೋಟೆ, ಕಂದಕ ಸೇರಿದಂತೆ ಖಾಲಿ ಪ್ರದೇಶದಲ್ಲಿ ನೀರಿಲ್ಲದೆ, ಸಂರಕ್ಷಣೆಯಿಲ್ಲದೆ ಬೆಳೆಯುವ ಜಾಲಿ, ಬಹುಪಯೋಗಿ ಮುಳ್ಳಿನ ಕಂಟಿಯಾಗಿದೆ.

ಜಾಲಿ ಜಾತಕ:
ಸ್ವತಂತ್ರ ಪೂರ್ವದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ಅಧಿಕಾರಿಗಳು ಭಾರತಕ್ಕೆ ಬರುವಾಗ ತಮ್ಮ ಹಡಗುಗಳಿಗೆ ಇಂಧನ ಪೂರೈಸಲು ಮತ್ತು ಅಗ್ಗಿಷ್ಟಿಕೆಯನ್ನು ಉರಿಸಿಕೊಳ್ಳಲು ಈ ಜಾಲಿಯ ಮರವನ್ನು ಆಶ್ರಯಿಸುತ್ತಿದ್ದರು. ಮೂಲತಃ ಇದು ದಕ್ಷಿಣ ಆಫ್ರಿಕಾದ ಅಮೇಜಾನ್ ಕಾಡುಗಳಲ್ಲಿ ಕಂಡು ಬರುವ, ಕ್ಯಾಕ್ಟಸ್ ಮುಳ್ಳು ಜಾತಿಯ ಸಸ್ಯ ಸಂಕುಲವಿದು.

ರಾಜ್ಯದ ಬಳ್ಳಾರಿ ಭಾಗದಲ್ಲಿ ಈ ಜಾಲಿ ಮರವು ಮೊದಲ ಬಾರಿಗೆ ಬೇರು ಬಿಟ್ಟ ಉದಾಹರಣೆಯಿದೆ. ಈಗಲೂ ಈ ಮುಳ್ಳು ಪೊದೆಯನ್ನು ಬಳ್ಳಾರಿ ಜಾಲಿಯಂದು ಉತ್ತರ ಕರ್ನಾಟಕದ ರೈತರು ಗುರುತಿಸುತ್ತಾರೆ. ಬಳ್ಳಾರಿ ಜಾಲಿ, ಇದು ಮೂಲತಃ ಹಂದಿ ಸಾಕಾಣಿಕೆಗೆ ಬಳಕೆಯಾಗುವ ಪೊದೆಯಾಗಿದೆ. ಜಾಲಿಗಿಡದ ಹೊಂಬಣ್ಣದ ಹಣ್ಣಾದ ಕಾಯಿಗಳು ಬೆಲ್ಲದ ರುಚಿಯನ್ನು ಹೊಂದಿರುತ್ತವೆ. ಅದರೊಳಗಿರುವ ಬೀಜಗಳು ವಿಷಕಾರಿಯಾಗಿರುತ್ತವೆ. ಇದರ ಕಾಯಿಗಳನ್ನು ಹಂದಿಗಳಿಗೆ ಆಹಾರವಾಗಿ ಬಳಸಲಾಗುತ್ತದೆ. ಇದರೊಂದಿಗೆ ಜಾಲಿಗಿಡ, ರೈತರ ಪಾಲಿಗೆ ಹೊಲದ ಬದುಗಳಲ್ಲಿ ಜೀವಂತ ಬೇಲಿಯಾಗಿದೆ. ಗ್ರಾಮೀಣ ಪ್ರದೇಶದ ಬಡವರು ಇದನ್ನು ಉರುವಲಾಗಿ ಬಳಸುತ್ತಾರೆ.

ಬಹುಪಯೋಗಿ ಜಾಲಿ ಜಾಲ:
ಜಾಲಿ ಅನೇಕ ಪ್ರಭೇದಗಳನ್ನು ಒಳಗೊಂಡಿದೆ. ದೊಡ್ಡ ಜಾಲಿ, ಸಣ್ಣ ಜಾಲಿ, ರಾಮಜಾಲಿ, ಕರಿಜಾಲಿ, ಹಿಕ್‍ಜಾಲಿ, ಜೀನಿಕಂಟಿ ಎಂದು ಕರೆಯಲ್ಪಡುತ್ತದೆ. ಬಿದರಿನಂತೆ ಇದು ಮೆದುವಾಗಿ ಬಾಗುವ ಗುಣವನ್ನು ಹೊಂದಿದೆ. ಹಸಿ ಕಟ್ಟಿಗೆಯನ್ನು ಬಿಲ್ಲಿನಂತೆ ಬಾಗಿಸಬಹುದು. ಬಲಿತ ಕಟ್ಟಿಗೆಯನ್ನು ಉರುವಲು ಇದ್ದಿಲನ್ನಾಗಿ ಪರಿವರ್ತಿಸುತ್ತಾರೆ.

ಉತ್ತರ ಕರ್ನಾಟಕ ಸೇರಿದಂತೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ, ತೆಲಗಿ, ಜಾಯವಾಡಗಿ ಹಾಗೂ ಇಂಡಿ ತಾಲೂಕಿನ ಭತಗುಣಕಿ, ನಂದ್ರಾಳ, ಹಲಸಂಗಿ, ಅಜನಾಳ, ಹೊರ್ತಿ, ಬುದಿಹಾಳ, ಬೇನೂರ ಆಸು ಪಾಸಿನ ಗ್ರಾಮಗಳಲ್ಲಿ ಜಾಲಿಕಟ್ಟಿಗೆಯಿಂದ ಇದ್ದಿಲು ತಯಾರಿಸಲಾಗುತ್ತದೆ.

ಕಾಶ್ಮೀರದಿಂದ ಕನ್ಯಾಕುಮಾರಿಗೆ:
ಬರದ ಭೂಮಿಯಲ್ಲಿ ಬರಬರನೇ ಮೇಲೆದ್ದು, ದಟ್ಟ ಪೊದೆಯಾಗಿ ಬೆಳೆಯುವ ಈ ಜಾಲಿ ಗಿಡಗಳು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ಹರಡಿಕೊಂಡಿವೆ. ನೀರು ಹಾಗೂ ಸಂರಕ್ಷಣೆಯ ಅವಶ್ಯಕತೆ ಇಲ್ಲದೆ, ಬಯಲು ಪ್ರದೇಶದ ಸಿಕ್ಕ ಸಿಕ್ಕಲ್ಲಿ ಬೆಳೆದು ನಿಲ್ಲುವ ಜಾಲಿಗಿಡ, ತನ್ನದೆ ಆದ ವಿಶೇಷತೆಯನ್ನು ಹೊಂದಿ, ಭಾರತೀಯರ ಮನೆ, ಮನದಲ್ಲಿ ಅಚ್ಚಾಗಿ ಉಳಿದುಕೊಂಡಿದೆ.

ವರ್ಷದ ಹನ್ನೆರಡು ತಿಂಗಳು ಬೆಳೆದು ನಿಲ್ಲುವ ಈ ಜಾಲಿ ಗಿಡ, ಜಮ್ಮು- ಕಾಶ್ಮೀರದ ಬಾರಾಮುಲ್ಲಾ, ಅನಂತನಾಗ, ನೇಪಾಳ ಗಡಿಭಾಗದ ಗೋರಕಪುರ, ಗೌರಿಪಾಂಟಾ ಹಾಗೂ ಪಾಕಿಸ್ತಾನ, ಬಾಂಗ್ಲಾ ದೇಶಗಳಲ್ಲೂ ಕಂಡು ಬರುತ್ತದೆ.
ಅಲ್ಲದೆ ಶ್ರೀಲಂಕಾ, ಮಾಲ್‍ಡ್ವೀಸ್ ದ್ವೀಪಗಳು ಸೇರಿದಂತೆ ದಕ್ಷಿಣ ಆಫ್ರಿಕಾದ ಅಮೇಜಾನ್ ತಪ್ಪಲು ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ.

ವಿಷಕಾರಿ ನಂಜು ಮುಳ್ಳು:
ಈ ಜಾಲಿಗಿಡ ತನ್ನ ಮೈತುಂಬಾ ಮುಳ್ಳುಗಳನ್ನು ತುಂಬಿಕೊಂಡರೂ ಎಲೆಗಳು ಮಾತ್ರ ಚಿಕ್ಕದಾಗಿರುತ್ತವೆ. ಕಾಯಿಗಳಂತೂ ಗೇಣುದ್ದ ಸಪೂರವಾಗಿ ಬೆಳೆದಿರುತ್ತವೆ. ಜಾಲಿ ಮುಳ್ಳು ಮನುಷ್ಯನ ಕೈ, ಕಾಲಿಗೆ ಚುಚ್ಚಿದರೆ, ನಂಜಾಗಿ ತೀವ್ರ ನೋವುಂಟು ಮಾಡುತ್ತದೆ.
ಈ ಸಸ್ಯ ಗಿಡವಾಗಿ, ಮರವಾಗಿ ಬೆಳೆದರೂ ಕೂಡ, ತಂಪಾದ ನೆರಳು ನೀಡುವುದಿಲ್ಲ. ಈ ಗಿಡಗಳ ಸುತ್ತಮುತ್ತ ವಾತಾವರಣ ಬಿಸಿಯಾಗಿರುವುದು ಸಾಮಾನ್ಯ. ಆದರೂ ಈ ಜಾಲಿಗಿಡ ದೇಶದ ತುಂಬಾ ಕಂಡು ಬರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...