Homeಕರ್ನಾಟಕಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು... ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ...

ಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು… ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ…

- Advertisement -
- Advertisement -

| ಶಿವಾ |

ಕರ್ನಾಟಕ ಪ್ರಗತಿರಂಗದ ಸಭೆಗಳಲ್ಲಿ ಪಾಲ್ಗೊಳ್ಳಲು ಬಳ್ಳಾರಿ ಜಿಲ್ಲೆಯ ವಿವಿಧ ಪಟ್ಟಣ, ಹಳ್ಳಿಗಳನ್ನು ಸುತ್ತಿ ಬಂದಿದ್ದ ಪಿ. ಲಂಕೇಶರು, ‘ಮರೆಯುವ ಮುನ್ನ’ದಲ್ಲಿ ಬಳ್ಳಾರಿಯ ಜಾಲಿಮುಳ್ಳುಗಳ ಕುರಿತೇ ಒಂದು ಆಹ್ಲಾದಕರ ಟಿಪ್ಪಣಿ ಬರೆದಿದ್ದರು. ಈ ಮುಳ್ಳು ಜಾಲಿ ಗಿಡವೇ ಇಲ್ಲಿನ ಬಡವರಿಗೆ ಉರುವಲು, ದೇಹಭಾಧೆ ತೀರಿಸಿಕೊಳ್ಳಲು ಮರೆ… ಎಂಬರ್ಥದಲ್ಲಿ ಬರೆದು, ಜನರು ಸ್ಥಳೀಯ ವಾತಾವರಣದಲ್ಲಿ ಬದುಕು ಕಟ್ಟಿಗೊಳ್ಳುವ ಹಿಂದಿನ ವಾಸ್ತವವನ್ನು ತೆರದಿದಿಟ್ಟಿದ್ದರು. ಉತ್ತರ ಕರ್ನಾಟಕದ ತುಂಬ ಹರಡಿರುವ ಈ ಮುಳ್ಳು ಜಾಲಿಯ ‘ಜೀವಪರತೆ’ಯನ್ನು ಇಲ್ಲಿ ನೀಡಲಾಗಿದೆ…

ಇದು ಜಾಲಿ ! ಎಲ್ಲೆಂದರಲ್ಲಿ ಜಾಲಿಯಾಗಿ ಬೆಳೆಯುವ ಜಾತಿಯ ಮುಳ್ಳು ಪೊದೆಯಿದು.
ಉತ್ತರ ಕರ್ನಾಟಕ ಬಹುತೇಕ ಭಾಗಗಳಲ್ಲಿ ಇದು ಬೇರು ಬಿಟ್ಟು, ತನ್ನದೆಯಾದ ದಟ್ಟ ಪೊದೆಯಾಕಾರದ ಕಾಡನ್ನು ಬೆಳೆಯುವ ಛಾತಿಯನ್ನು ಹೊಂದಿದೆ. ಬಯಲು ಪ್ರದೇಶದಲ್ಲಿ ಹಾಗೂ ನದಿದಡ, ಹಳ್ಳಕೊಳ್ಳ, ಕೋಟೆ, ಕಂದಕ ಸೇರಿದಂತೆ ಖಾಲಿ ಪ್ರದೇಶದಲ್ಲಿ ನೀರಿಲ್ಲದೆ, ಸಂರಕ್ಷಣೆಯಿಲ್ಲದೆ ಬೆಳೆಯುವ ಜಾಲಿ, ಬಹುಪಯೋಗಿ ಮುಳ್ಳಿನ ಕಂಟಿಯಾಗಿದೆ.

ಜಾಲಿ ಜಾತಕ:
ಸ್ವತಂತ್ರ ಪೂರ್ವದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ಅಧಿಕಾರಿಗಳು ಭಾರತಕ್ಕೆ ಬರುವಾಗ ತಮ್ಮ ಹಡಗುಗಳಿಗೆ ಇಂಧನ ಪೂರೈಸಲು ಮತ್ತು ಅಗ್ಗಿಷ್ಟಿಕೆಯನ್ನು ಉರಿಸಿಕೊಳ್ಳಲು ಈ ಜಾಲಿಯ ಮರವನ್ನು ಆಶ್ರಯಿಸುತ್ತಿದ್ದರು. ಮೂಲತಃ ಇದು ದಕ್ಷಿಣ ಆಫ್ರಿಕಾದ ಅಮೇಜಾನ್ ಕಾಡುಗಳಲ್ಲಿ ಕಂಡು ಬರುವ, ಕ್ಯಾಕ್ಟಸ್ ಮುಳ್ಳು ಜಾತಿಯ ಸಸ್ಯ ಸಂಕುಲವಿದು.

ರಾಜ್ಯದ ಬಳ್ಳಾರಿ ಭಾಗದಲ್ಲಿ ಈ ಜಾಲಿ ಮರವು ಮೊದಲ ಬಾರಿಗೆ ಬೇರು ಬಿಟ್ಟ ಉದಾಹರಣೆಯಿದೆ. ಈಗಲೂ ಈ ಮುಳ್ಳು ಪೊದೆಯನ್ನು ಬಳ್ಳಾರಿ ಜಾಲಿಯಂದು ಉತ್ತರ ಕರ್ನಾಟಕದ ರೈತರು ಗುರುತಿಸುತ್ತಾರೆ. ಬಳ್ಳಾರಿ ಜಾಲಿ, ಇದು ಮೂಲತಃ ಹಂದಿ ಸಾಕಾಣಿಕೆಗೆ ಬಳಕೆಯಾಗುವ ಪೊದೆಯಾಗಿದೆ. ಜಾಲಿಗಿಡದ ಹೊಂಬಣ್ಣದ ಹಣ್ಣಾದ ಕಾಯಿಗಳು ಬೆಲ್ಲದ ರುಚಿಯನ್ನು ಹೊಂದಿರುತ್ತವೆ. ಅದರೊಳಗಿರುವ ಬೀಜಗಳು ವಿಷಕಾರಿಯಾಗಿರುತ್ತವೆ. ಇದರ ಕಾಯಿಗಳನ್ನು ಹಂದಿಗಳಿಗೆ ಆಹಾರವಾಗಿ ಬಳಸಲಾಗುತ್ತದೆ. ಇದರೊಂದಿಗೆ ಜಾಲಿಗಿಡ, ರೈತರ ಪಾಲಿಗೆ ಹೊಲದ ಬದುಗಳಲ್ಲಿ ಜೀವಂತ ಬೇಲಿಯಾಗಿದೆ. ಗ್ರಾಮೀಣ ಪ್ರದೇಶದ ಬಡವರು ಇದನ್ನು ಉರುವಲಾಗಿ ಬಳಸುತ್ತಾರೆ.

ಬಹುಪಯೋಗಿ ಜಾಲಿ ಜಾಲ:
ಜಾಲಿ ಅನೇಕ ಪ್ರಭೇದಗಳನ್ನು ಒಳಗೊಂಡಿದೆ. ದೊಡ್ಡ ಜಾಲಿ, ಸಣ್ಣ ಜಾಲಿ, ರಾಮಜಾಲಿ, ಕರಿಜಾಲಿ, ಹಿಕ್‍ಜಾಲಿ, ಜೀನಿಕಂಟಿ ಎಂದು ಕರೆಯಲ್ಪಡುತ್ತದೆ. ಬಿದರಿನಂತೆ ಇದು ಮೆದುವಾಗಿ ಬಾಗುವ ಗುಣವನ್ನು ಹೊಂದಿದೆ. ಹಸಿ ಕಟ್ಟಿಗೆಯನ್ನು ಬಿಲ್ಲಿನಂತೆ ಬಾಗಿಸಬಹುದು. ಬಲಿತ ಕಟ್ಟಿಗೆಯನ್ನು ಉರುವಲು ಇದ್ದಿಲನ್ನಾಗಿ ಪರಿವರ್ತಿಸುತ್ತಾರೆ.

ಉತ್ತರ ಕರ್ನಾಟಕ ಸೇರಿದಂತೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ, ತೆಲಗಿ, ಜಾಯವಾಡಗಿ ಹಾಗೂ ಇಂಡಿ ತಾಲೂಕಿನ ಭತಗುಣಕಿ, ನಂದ್ರಾಳ, ಹಲಸಂಗಿ, ಅಜನಾಳ, ಹೊರ್ತಿ, ಬುದಿಹಾಳ, ಬೇನೂರ ಆಸು ಪಾಸಿನ ಗ್ರಾಮಗಳಲ್ಲಿ ಜಾಲಿಕಟ್ಟಿಗೆಯಿಂದ ಇದ್ದಿಲು ತಯಾರಿಸಲಾಗುತ್ತದೆ.

ಕಾಶ್ಮೀರದಿಂದ ಕನ್ಯಾಕುಮಾರಿಗೆ:
ಬರದ ಭೂಮಿಯಲ್ಲಿ ಬರಬರನೇ ಮೇಲೆದ್ದು, ದಟ್ಟ ಪೊದೆಯಾಗಿ ಬೆಳೆಯುವ ಈ ಜಾಲಿ ಗಿಡಗಳು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ಹರಡಿಕೊಂಡಿವೆ. ನೀರು ಹಾಗೂ ಸಂರಕ್ಷಣೆಯ ಅವಶ್ಯಕತೆ ಇಲ್ಲದೆ, ಬಯಲು ಪ್ರದೇಶದ ಸಿಕ್ಕ ಸಿಕ್ಕಲ್ಲಿ ಬೆಳೆದು ನಿಲ್ಲುವ ಜಾಲಿಗಿಡ, ತನ್ನದೆ ಆದ ವಿಶೇಷತೆಯನ್ನು ಹೊಂದಿ, ಭಾರತೀಯರ ಮನೆ, ಮನದಲ್ಲಿ ಅಚ್ಚಾಗಿ ಉಳಿದುಕೊಂಡಿದೆ.

ವರ್ಷದ ಹನ್ನೆರಡು ತಿಂಗಳು ಬೆಳೆದು ನಿಲ್ಲುವ ಈ ಜಾಲಿ ಗಿಡ, ಜಮ್ಮು- ಕಾಶ್ಮೀರದ ಬಾರಾಮುಲ್ಲಾ, ಅನಂತನಾಗ, ನೇಪಾಳ ಗಡಿಭಾಗದ ಗೋರಕಪುರ, ಗೌರಿಪಾಂಟಾ ಹಾಗೂ ಪಾಕಿಸ್ತಾನ, ಬಾಂಗ್ಲಾ ದೇಶಗಳಲ್ಲೂ ಕಂಡು ಬರುತ್ತದೆ.
ಅಲ್ಲದೆ ಶ್ರೀಲಂಕಾ, ಮಾಲ್‍ಡ್ವೀಸ್ ದ್ವೀಪಗಳು ಸೇರಿದಂತೆ ದಕ್ಷಿಣ ಆಫ್ರಿಕಾದ ಅಮೇಜಾನ್ ತಪ್ಪಲು ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ.

ವಿಷಕಾರಿ ನಂಜು ಮುಳ್ಳು:
ಈ ಜಾಲಿಗಿಡ ತನ್ನ ಮೈತುಂಬಾ ಮುಳ್ಳುಗಳನ್ನು ತುಂಬಿಕೊಂಡರೂ ಎಲೆಗಳು ಮಾತ್ರ ಚಿಕ್ಕದಾಗಿರುತ್ತವೆ. ಕಾಯಿಗಳಂತೂ ಗೇಣುದ್ದ ಸಪೂರವಾಗಿ ಬೆಳೆದಿರುತ್ತವೆ. ಜಾಲಿ ಮುಳ್ಳು ಮನುಷ್ಯನ ಕೈ, ಕಾಲಿಗೆ ಚುಚ್ಚಿದರೆ, ನಂಜಾಗಿ ತೀವ್ರ ನೋವುಂಟು ಮಾಡುತ್ತದೆ.
ಈ ಸಸ್ಯ ಗಿಡವಾಗಿ, ಮರವಾಗಿ ಬೆಳೆದರೂ ಕೂಡ, ತಂಪಾದ ನೆರಳು ನೀಡುವುದಿಲ್ಲ. ಈ ಗಿಡಗಳ ಸುತ್ತಮುತ್ತ ವಾತಾವರಣ ಬಿಸಿಯಾಗಿರುವುದು ಸಾಮಾನ್ಯ. ಆದರೂ ಈ ಜಾಲಿಗಿಡ ದೇಶದ ತುಂಬಾ ಕಂಡು ಬರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....