Homeಕರ್ನಾಟಕಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು... ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ...

ಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು… ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ…

- Advertisement -
- Advertisement -

| ಶಿವಾ |

ಕರ್ನಾಟಕ ಪ್ರಗತಿರಂಗದ ಸಭೆಗಳಲ್ಲಿ ಪಾಲ್ಗೊಳ್ಳಲು ಬಳ್ಳಾರಿ ಜಿಲ್ಲೆಯ ವಿವಿಧ ಪಟ್ಟಣ, ಹಳ್ಳಿಗಳನ್ನು ಸುತ್ತಿ ಬಂದಿದ್ದ ಪಿ. ಲಂಕೇಶರು, ‘ಮರೆಯುವ ಮುನ್ನ’ದಲ್ಲಿ ಬಳ್ಳಾರಿಯ ಜಾಲಿಮುಳ್ಳುಗಳ ಕುರಿತೇ ಒಂದು ಆಹ್ಲಾದಕರ ಟಿಪ್ಪಣಿ ಬರೆದಿದ್ದರು. ಈ ಮುಳ್ಳು ಜಾಲಿ ಗಿಡವೇ ಇಲ್ಲಿನ ಬಡವರಿಗೆ ಉರುವಲು, ದೇಹಭಾಧೆ ತೀರಿಸಿಕೊಳ್ಳಲು ಮರೆ… ಎಂಬರ್ಥದಲ್ಲಿ ಬರೆದು, ಜನರು ಸ್ಥಳೀಯ ವಾತಾವರಣದಲ್ಲಿ ಬದುಕು ಕಟ್ಟಿಗೊಳ್ಳುವ ಹಿಂದಿನ ವಾಸ್ತವವನ್ನು ತೆರದಿದಿಟ್ಟಿದ್ದರು. ಉತ್ತರ ಕರ್ನಾಟಕದ ತುಂಬ ಹರಡಿರುವ ಈ ಮುಳ್ಳು ಜಾಲಿಯ ‘ಜೀವಪರತೆ’ಯನ್ನು ಇಲ್ಲಿ ನೀಡಲಾಗಿದೆ…

ಇದು ಜಾಲಿ ! ಎಲ್ಲೆಂದರಲ್ಲಿ ಜಾಲಿಯಾಗಿ ಬೆಳೆಯುವ ಜಾತಿಯ ಮುಳ್ಳು ಪೊದೆಯಿದು.
ಉತ್ತರ ಕರ್ನಾಟಕ ಬಹುತೇಕ ಭಾಗಗಳಲ್ಲಿ ಇದು ಬೇರು ಬಿಟ್ಟು, ತನ್ನದೆಯಾದ ದಟ್ಟ ಪೊದೆಯಾಕಾರದ ಕಾಡನ್ನು ಬೆಳೆಯುವ ಛಾತಿಯನ್ನು ಹೊಂದಿದೆ. ಬಯಲು ಪ್ರದೇಶದಲ್ಲಿ ಹಾಗೂ ನದಿದಡ, ಹಳ್ಳಕೊಳ್ಳ, ಕೋಟೆ, ಕಂದಕ ಸೇರಿದಂತೆ ಖಾಲಿ ಪ್ರದೇಶದಲ್ಲಿ ನೀರಿಲ್ಲದೆ, ಸಂರಕ್ಷಣೆಯಿಲ್ಲದೆ ಬೆಳೆಯುವ ಜಾಲಿ, ಬಹುಪಯೋಗಿ ಮುಳ್ಳಿನ ಕಂಟಿಯಾಗಿದೆ.

ಜಾಲಿ ಜಾತಕ:
ಸ್ವತಂತ್ರ ಪೂರ್ವದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ಅಧಿಕಾರಿಗಳು ಭಾರತಕ್ಕೆ ಬರುವಾಗ ತಮ್ಮ ಹಡಗುಗಳಿಗೆ ಇಂಧನ ಪೂರೈಸಲು ಮತ್ತು ಅಗ್ಗಿಷ್ಟಿಕೆಯನ್ನು ಉರಿಸಿಕೊಳ್ಳಲು ಈ ಜಾಲಿಯ ಮರವನ್ನು ಆಶ್ರಯಿಸುತ್ತಿದ್ದರು. ಮೂಲತಃ ಇದು ದಕ್ಷಿಣ ಆಫ್ರಿಕಾದ ಅಮೇಜಾನ್ ಕಾಡುಗಳಲ್ಲಿ ಕಂಡು ಬರುವ, ಕ್ಯಾಕ್ಟಸ್ ಮುಳ್ಳು ಜಾತಿಯ ಸಸ್ಯ ಸಂಕುಲವಿದು.

ರಾಜ್ಯದ ಬಳ್ಳಾರಿ ಭಾಗದಲ್ಲಿ ಈ ಜಾಲಿ ಮರವು ಮೊದಲ ಬಾರಿಗೆ ಬೇರು ಬಿಟ್ಟ ಉದಾಹರಣೆಯಿದೆ. ಈಗಲೂ ಈ ಮುಳ್ಳು ಪೊದೆಯನ್ನು ಬಳ್ಳಾರಿ ಜಾಲಿಯಂದು ಉತ್ತರ ಕರ್ನಾಟಕದ ರೈತರು ಗುರುತಿಸುತ್ತಾರೆ. ಬಳ್ಳಾರಿ ಜಾಲಿ, ಇದು ಮೂಲತಃ ಹಂದಿ ಸಾಕಾಣಿಕೆಗೆ ಬಳಕೆಯಾಗುವ ಪೊದೆಯಾಗಿದೆ. ಜಾಲಿಗಿಡದ ಹೊಂಬಣ್ಣದ ಹಣ್ಣಾದ ಕಾಯಿಗಳು ಬೆಲ್ಲದ ರುಚಿಯನ್ನು ಹೊಂದಿರುತ್ತವೆ. ಅದರೊಳಗಿರುವ ಬೀಜಗಳು ವಿಷಕಾರಿಯಾಗಿರುತ್ತವೆ. ಇದರ ಕಾಯಿಗಳನ್ನು ಹಂದಿಗಳಿಗೆ ಆಹಾರವಾಗಿ ಬಳಸಲಾಗುತ್ತದೆ. ಇದರೊಂದಿಗೆ ಜಾಲಿಗಿಡ, ರೈತರ ಪಾಲಿಗೆ ಹೊಲದ ಬದುಗಳಲ್ಲಿ ಜೀವಂತ ಬೇಲಿಯಾಗಿದೆ. ಗ್ರಾಮೀಣ ಪ್ರದೇಶದ ಬಡವರು ಇದನ್ನು ಉರುವಲಾಗಿ ಬಳಸುತ್ತಾರೆ.

ಬಹುಪಯೋಗಿ ಜಾಲಿ ಜಾಲ:
ಜಾಲಿ ಅನೇಕ ಪ್ರಭೇದಗಳನ್ನು ಒಳಗೊಂಡಿದೆ. ದೊಡ್ಡ ಜಾಲಿ, ಸಣ್ಣ ಜಾಲಿ, ರಾಮಜಾಲಿ, ಕರಿಜಾಲಿ, ಹಿಕ್‍ಜಾಲಿ, ಜೀನಿಕಂಟಿ ಎಂದು ಕರೆಯಲ್ಪಡುತ್ತದೆ. ಬಿದರಿನಂತೆ ಇದು ಮೆದುವಾಗಿ ಬಾಗುವ ಗುಣವನ್ನು ಹೊಂದಿದೆ. ಹಸಿ ಕಟ್ಟಿಗೆಯನ್ನು ಬಿಲ್ಲಿನಂತೆ ಬಾಗಿಸಬಹುದು. ಬಲಿತ ಕಟ್ಟಿಗೆಯನ್ನು ಉರುವಲು ಇದ್ದಿಲನ್ನಾಗಿ ಪರಿವರ್ತಿಸುತ್ತಾರೆ.

ಉತ್ತರ ಕರ್ನಾಟಕ ಸೇರಿದಂತೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ, ತೆಲಗಿ, ಜಾಯವಾಡಗಿ ಹಾಗೂ ಇಂಡಿ ತಾಲೂಕಿನ ಭತಗುಣಕಿ, ನಂದ್ರಾಳ, ಹಲಸಂಗಿ, ಅಜನಾಳ, ಹೊರ್ತಿ, ಬುದಿಹಾಳ, ಬೇನೂರ ಆಸು ಪಾಸಿನ ಗ್ರಾಮಗಳಲ್ಲಿ ಜಾಲಿಕಟ್ಟಿಗೆಯಿಂದ ಇದ್ದಿಲು ತಯಾರಿಸಲಾಗುತ್ತದೆ.

ಕಾಶ್ಮೀರದಿಂದ ಕನ್ಯಾಕುಮಾರಿಗೆ:
ಬರದ ಭೂಮಿಯಲ್ಲಿ ಬರಬರನೇ ಮೇಲೆದ್ದು, ದಟ್ಟ ಪೊದೆಯಾಗಿ ಬೆಳೆಯುವ ಈ ಜಾಲಿ ಗಿಡಗಳು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ಹರಡಿಕೊಂಡಿವೆ. ನೀರು ಹಾಗೂ ಸಂರಕ್ಷಣೆಯ ಅವಶ್ಯಕತೆ ಇಲ್ಲದೆ, ಬಯಲು ಪ್ರದೇಶದ ಸಿಕ್ಕ ಸಿಕ್ಕಲ್ಲಿ ಬೆಳೆದು ನಿಲ್ಲುವ ಜಾಲಿಗಿಡ, ತನ್ನದೆ ಆದ ವಿಶೇಷತೆಯನ್ನು ಹೊಂದಿ, ಭಾರತೀಯರ ಮನೆ, ಮನದಲ್ಲಿ ಅಚ್ಚಾಗಿ ಉಳಿದುಕೊಂಡಿದೆ.

ವರ್ಷದ ಹನ್ನೆರಡು ತಿಂಗಳು ಬೆಳೆದು ನಿಲ್ಲುವ ಈ ಜಾಲಿ ಗಿಡ, ಜಮ್ಮು- ಕಾಶ್ಮೀರದ ಬಾರಾಮುಲ್ಲಾ, ಅನಂತನಾಗ, ನೇಪಾಳ ಗಡಿಭಾಗದ ಗೋರಕಪುರ, ಗೌರಿಪಾಂಟಾ ಹಾಗೂ ಪಾಕಿಸ್ತಾನ, ಬಾಂಗ್ಲಾ ದೇಶಗಳಲ್ಲೂ ಕಂಡು ಬರುತ್ತದೆ.
ಅಲ್ಲದೆ ಶ್ರೀಲಂಕಾ, ಮಾಲ್‍ಡ್ವೀಸ್ ದ್ವೀಪಗಳು ಸೇರಿದಂತೆ ದಕ್ಷಿಣ ಆಫ್ರಿಕಾದ ಅಮೇಜಾನ್ ತಪ್ಪಲು ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ.

ವಿಷಕಾರಿ ನಂಜು ಮುಳ್ಳು:
ಈ ಜಾಲಿಗಿಡ ತನ್ನ ಮೈತುಂಬಾ ಮುಳ್ಳುಗಳನ್ನು ತುಂಬಿಕೊಂಡರೂ ಎಲೆಗಳು ಮಾತ್ರ ಚಿಕ್ಕದಾಗಿರುತ್ತವೆ. ಕಾಯಿಗಳಂತೂ ಗೇಣುದ್ದ ಸಪೂರವಾಗಿ ಬೆಳೆದಿರುತ್ತವೆ. ಜಾಲಿ ಮುಳ್ಳು ಮನುಷ್ಯನ ಕೈ, ಕಾಲಿಗೆ ಚುಚ್ಚಿದರೆ, ನಂಜಾಗಿ ತೀವ್ರ ನೋವುಂಟು ಮಾಡುತ್ತದೆ.
ಈ ಸಸ್ಯ ಗಿಡವಾಗಿ, ಮರವಾಗಿ ಬೆಳೆದರೂ ಕೂಡ, ತಂಪಾದ ನೆರಳು ನೀಡುವುದಿಲ್ಲ. ಈ ಗಿಡಗಳ ಸುತ್ತಮುತ್ತ ವಾತಾವರಣ ಬಿಸಿಯಾಗಿರುವುದು ಸಾಮಾನ್ಯ. ಆದರೂ ಈ ಜಾಲಿಗಿಡ ದೇಶದ ತುಂಬಾ ಕಂಡು ಬರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...