Homeಕರ್ನಾಟಕಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು... ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ...

ಚುಚ್ಚಿದರೆ ತೀವ್ರ ನೋವು, ಬಡವರ ಪಾಲಿಗೆ ಹೂವು… ನೀರಿಲ್ಲದಿದ್ದರೂ ಜಾಲಿಯಾಗಿ ಬೆಳೆಯುವ ಜಾಲಿ…

- Advertisement -
- Advertisement -

| ಶಿವಾ |

ಕರ್ನಾಟಕ ಪ್ರಗತಿರಂಗದ ಸಭೆಗಳಲ್ಲಿ ಪಾಲ್ಗೊಳ್ಳಲು ಬಳ್ಳಾರಿ ಜಿಲ್ಲೆಯ ವಿವಿಧ ಪಟ್ಟಣ, ಹಳ್ಳಿಗಳನ್ನು ಸುತ್ತಿ ಬಂದಿದ್ದ ಪಿ. ಲಂಕೇಶರು, ‘ಮರೆಯುವ ಮುನ್ನ’ದಲ್ಲಿ ಬಳ್ಳಾರಿಯ ಜಾಲಿಮುಳ್ಳುಗಳ ಕುರಿತೇ ಒಂದು ಆಹ್ಲಾದಕರ ಟಿಪ್ಪಣಿ ಬರೆದಿದ್ದರು. ಈ ಮುಳ್ಳು ಜಾಲಿ ಗಿಡವೇ ಇಲ್ಲಿನ ಬಡವರಿಗೆ ಉರುವಲು, ದೇಹಭಾಧೆ ತೀರಿಸಿಕೊಳ್ಳಲು ಮರೆ… ಎಂಬರ್ಥದಲ್ಲಿ ಬರೆದು, ಜನರು ಸ್ಥಳೀಯ ವಾತಾವರಣದಲ್ಲಿ ಬದುಕು ಕಟ್ಟಿಗೊಳ್ಳುವ ಹಿಂದಿನ ವಾಸ್ತವವನ್ನು ತೆರದಿದಿಟ್ಟಿದ್ದರು. ಉತ್ತರ ಕರ್ನಾಟಕದ ತುಂಬ ಹರಡಿರುವ ಈ ಮುಳ್ಳು ಜಾಲಿಯ ‘ಜೀವಪರತೆ’ಯನ್ನು ಇಲ್ಲಿ ನೀಡಲಾಗಿದೆ…

ಇದು ಜಾಲಿ ! ಎಲ್ಲೆಂದರಲ್ಲಿ ಜಾಲಿಯಾಗಿ ಬೆಳೆಯುವ ಜಾತಿಯ ಮುಳ್ಳು ಪೊದೆಯಿದು.
ಉತ್ತರ ಕರ್ನಾಟಕ ಬಹುತೇಕ ಭಾಗಗಳಲ್ಲಿ ಇದು ಬೇರು ಬಿಟ್ಟು, ತನ್ನದೆಯಾದ ದಟ್ಟ ಪೊದೆಯಾಕಾರದ ಕಾಡನ್ನು ಬೆಳೆಯುವ ಛಾತಿಯನ್ನು ಹೊಂದಿದೆ. ಬಯಲು ಪ್ರದೇಶದಲ್ಲಿ ಹಾಗೂ ನದಿದಡ, ಹಳ್ಳಕೊಳ್ಳ, ಕೋಟೆ, ಕಂದಕ ಸೇರಿದಂತೆ ಖಾಲಿ ಪ್ರದೇಶದಲ್ಲಿ ನೀರಿಲ್ಲದೆ, ಸಂರಕ್ಷಣೆಯಿಲ್ಲದೆ ಬೆಳೆಯುವ ಜಾಲಿ, ಬಹುಪಯೋಗಿ ಮುಳ್ಳಿನ ಕಂಟಿಯಾಗಿದೆ.

ಜಾಲಿ ಜಾತಕ:
ಸ್ವತಂತ್ರ ಪೂರ್ವದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ಅಧಿಕಾರಿಗಳು ಭಾರತಕ್ಕೆ ಬರುವಾಗ ತಮ್ಮ ಹಡಗುಗಳಿಗೆ ಇಂಧನ ಪೂರೈಸಲು ಮತ್ತು ಅಗ್ಗಿಷ್ಟಿಕೆಯನ್ನು ಉರಿಸಿಕೊಳ್ಳಲು ಈ ಜಾಲಿಯ ಮರವನ್ನು ಆಶ್ರಯಿಸುತ್ತಿದ್ದರು. ಮೂಲತಃ ಇದು ದಕ್ಷಿಣ ಆಫ್ರಿಕಾದ ಅಮೇಜಾನ್ ಕಾಡುಗಳಲ್ಲಿ ಕಂಡು ಬರುವ, ಕ್ಯಾಕ್ಟಸ್ ಮುಳ್ಳು ಜಾತಿಯ ಸಸ್ಯ ಸಂಕುಲವಿದು.

ರಾಜ್ಯದ ಬಳ್ಳಾರಿ ಭಾಗದಲ್ಲಿ ಈ ಜಾಲಿ ಮರವು ಮೊದಲ ಬಾರಿಗೆ ಬೇರು ಬಿಟ್ಟ ಉದಾಹರಣೆಯಿದೆ. ಈಗಲೂ ಈ ಮುಳ್ಳು ಪೊದೆಯನ್ನು ಬಳ್ಳಾರಿ ಜಾಲಿಯಂದು ಉತ್ತರ ಕರ್ನಾಟಕದ ರೈತರು ಗುರುತಿಸುತ್ತಾರೆ. ಬಳ್ಳಾರಿ ಜಾಲಿ, ಇದು ಮೂಲತಃ ಹಂದಿ ಸಾಕಾಣಿಕೆಗೆ ಬಳಕೆಯಾಗುವ ಪೊದೆಯಾಗಿದೆ. ಜಾಲಿಗಿಡದ ಹೊಂಬಣ್ಣದ ಹಣ್ಣಾದ ಕಾಯಿಗಳು ಬೆಲ್ಲದ ರುಚಿಯನ್ನು ಹೊಂದಿರುತ್ತವೆ. ಅದರೊಳಗಿರುವ ಬೀಜಗಳು ವಿಷಕಾರಿಯಾಗಿರುತ್ತವೆ. ಇದರ ಕಾಯಿಗಳನ್ನು ಹಂದಿಗಳಿಗೆ ಆಹಾರವಾಗಿ ಬಳಸಲಾಗುತ್ತದೆ. ಇದರೊಂದಿಗೆ ಜಾಲಿಗಿಡ, ರೈತರ ಪಾಲಿಗೆ ಹೊಲದ ಬದುಗಳಲ್ಲಿ ಜೀವಂತ ಬೇಲಿಯಾಗಿದೆ. ಗ್ರಾಮೀಣ ಪ್ರದೇಶದ ಬಡವರು ಇದನ್ನು ಉರುವಲಾಗಿ ಬಳಸುತ್ತಾರೆ.

ಬಹುಪಯೋಗಿ ಜಾಲಿ ಜಾಲ:
ಜಾಲಿ ಅನೇಕ ಪ್ರಭೇದಗಳನ್ನು ಒಳಗೊಂಡಿದೆ. ದೊಡ್ಡ ಜಾಲಿ, ಸಣ್ಣ ಜಾಲಿ, ರಾಮಜಾಲಿ, ಕರಿಜಾಲಿ, ಹಿಕ್‍ಜಾಲಿ, ಜೀನಿಕಂಟಿ ಎಂದು ಕರೆಯಲ್ಪಡುತ್ತದೆ. ಬಿದರಿನಂತೆ ಇದು ಮೆದುವಾಗಿ ಬಾಗುವ ಗುಣವನ್ನು ಹೊಂದಿದೆ. ಹಸಿ ಕಟ್ಟಿಗೆಯನ್ನು ಬಿಲ್ಲಿನಂತೆ ಬಾಗಿಸಬಹುದು. ಬಲಿತ ಕಟ್ಟಿಗೆಯನ್ನು ಉರುವಲು ಇದ್ದಿಲನ್ನಾಗಿ ಪರಿವರ್ತಿಸುತ್ತಾರೆ.

ಉತ್ತರ ಕರ್ನಾಟಕ ಸೇರಿದಂತೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ, ತೆಲಗಿ, ಜಾಯವಾಡಗಿ ಹಾಗೂ ಇಂಡಿ ತಾಲೂಕಿನ ಭತಗುಣಕಿ, ನಂದ್ರಾಳ, ಹಲಸಂಗಿ, ಅಜನಾಳ, ಹೊರ್ತಿ, ಬುದಿಹಾಳ, ಬೇನೂರ ಆಸು ಪಾಸಿನ ಗ್ರಾಮಗಳಲ್ಲಿ ಜಾಲಿಕಟ್ಟಿಗೆಯಿಂದ ಇದ್ದಿಲು ತಯಾರಿಸಲಾಗುತ್ತದೆ.

ಕಾಶ್ಮೀರದಿಂದ ಕನ್ಯಾಕುಮಾರಿಗೆ:
ಬರದ ಭೂಮಿಯಲ್ಲಿ ಬರಬರನೇ ಮೇಲೆದ್ದು, ದಟ್ಟ ಪೊದೆಯಾಗಿ ಬೆಳೆಯುವ ಈ ಜಾಲಿ ಗಿಡಗಳು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ಹರಡಿಕೊಂಡಿವೆ. ನೀರು ಹಾಗೂ ಸಂರಕ್ಷಣೆಯ ಅವಶ್ಯಕತೆ ಇಲ್ಲದೆ, ಬಯಲು ಪ್ರದೇಶದ ಸಿಕ್ಕ ಸಿಕ್ಕಲ್ಲಿ ಬೆಳೆದು ನಿಲ್ಲುವ ಜಾಲಿಗಿಡ, ತನ್ನದೆ ಆದ ವಿಶೇಷತೆಯನ್ನು ಹೊಂದಿ, ಭಾರತೀಯರ ಮನೆ, ಮನದಲ್ಲಿ ಅಚ್ಚಾಗಿ ಉಳಿದುಕೊಂಡಿದೆ.

ವರ್ಷದ ಹನ್ನೆರಡು ತಿಂಗಳು ಬೆಳೆದು ನಿಲ್ಲುವ ಈ ಜಾಲಿ ಗಿಡ, ಜಮ್ಮು- ಕಾಶ್ಮೀರದ ಬಾರಾಮುಲ್ಲಾ, ಅನಂತನಾಗ, ನೇಪಾಳ ಗಡಿಭಾಗದ ಗೋರಕಪುರ, ಗೌರಿಪಾಂಟಾ ಹಾಗೂ ಪಾಕಿಸ್ತಾನ, ಬಾಂಗ್ಲಾ ದೇಶಗಳಲ್ಲೂ ಕಂಡು ಬರುತ್ತದೆ.
ಅಲ್ಲದೆ ಶ್ರೀಲಂಕಾ, ಮಾಲ್‍ಡ್ವೀಸ್ ದ್ವೀಪಗಳು ಸೇರಿದಂತೆ ದಕ್ಷಿಣ ಆಫ್ರಿಕಾದ ಅಮೇಜಾನ್ ತಪ್ಪಲು ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ.

ವಿಷಕಾರಿ ನಂಜು ಮುಳ್ಳು:
ಈ ಜಾಲಿಗಿಡ ತನ್ನ ಮೈತುಂಬಾ ಮುಳ್ಳುಗಳನ್ನು ತುಂಬಿಕೊಂಡರೂ ಎಲೆಗಳು ಮಾತ್ರ ಚಿಕ್ಕದಾಗಿರುತ್ತವೆ. ಕಾಯಿಗಳಂತೂ ಗೇಣುದ್ದ ಸಪೂರವಾಗಿ ಬೆಳೆದಿರುತ್ತವೆ. ಜಾಲಿ ಮುಳ್ಳು ಮನುಷ್ಯನ ಕೈ, ಕಾಲಿಗೆ ಚುಚ್ಚಿದರೆ, ನಂಜಾಗಿ ತೀವ್ರ ನೋವುಂಟು ಮಾಡುತ್ತದೆ.
ಈ ಸಸ್ಯ ಗಿಡವಾಗಿ, ಮರವಾಗಿ ಬೆಳೆದರೂ ಕೂಡ, ತಂಪಾದ ನೆರಳು ನೀಡುವುದಿಲ್ಲ. ಈ ಗಿಡಗಳ ಸುತ್ತಮುತ್ತ ವಾತಾವರಣ ಬಿಸಿಯಾಗಿರುವುದು ಸಾಮಾನ್ಯ. ಆದರೂ ಈ ಜಾಲಿಗಿಡ ದೇಶದ ತುಂಬಾ ಕಂಡು ಬರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...