Homeಕರ್ನಾಟಕಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

ಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

- Advertisement -
- Advertisement -

ವಿಜಯನಗರ ಸಾಮ್ರಾಜ್ಯ ಎನ್ನುವುದು ಕನ್ನಡ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ ಭಾಷೆಗೆ ಸಂಬಂಧಿಸಿ ಮತ್ತೆ ಮತ್ತೆ ಪ್ರಸ್ತಾಪವಾಗುವ ಇತಿಹಾಸವುಳ್ಳ ನಾಡಾಗಿದೆ. ಈ ಮಧ್ಯಕರ್ನಾಟಕದ ತುದಿಯಲ್ಲಿರುವ ಈ ವಿಜಯನಗರಕ್ಕೊಂದು (ಹಂಪಿ) ರಂಗಾಯಣ ಅವಶ್ಯಕತೆಯಿದೆ.

“ಹಂಪಿಯ ಸುತ್ತಮುತ್ತಲಿನ ದೊಡ್ಡಾಟದಲ್ಲಿ ಹಾಡುತ್ತಿದ್ದ ಧಾಟಿಗಳು ಹಾಡಿನ‌ಮಟ್ಟುಗಳ ಪ್ರಭಾವ ಆರಂಭದ ತೆಲಗು ಸಿನಿಮಾಗಳ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಆಗಿತ್ತು..” ಎಂಬ ಮಾತನ್ನು ನನ್ನ ಗುರುಗಳಾದ ಬಸವರಾಜ ಮಲಶೆಟ್ಟರ್ ಸರ್ ಆಗಾಗ ಹೇಳುತ್ತಿದ್ದರು. ಅಲ್ಲದೆ ವಿಜಯನಗರದಲ್ಲಿಯೇ ಮೊಟ್ಟಮೊದಲು ಯಕ್ಕಲಗಾಣ ಪ್ರದರ್ಶನ ಆಗುತ್ತಿತ್ತು ಎಂಬ ಮಾತನ್ನು ನೆನಪಿಸುತ್ತಿದ್ದರು. ಮತ್ತೂ ಇಂದಿನ ಯಕ್ಷಗಾನ ಕಲಾಪ್ರಕಾರವನ್ನು ಇದೇ ಸಾಮ್ರಾಜ್ಯದ ಕೂಚಿಪುಡಿ ಗ್ರಾಮದ ಸಿದ್ಧೇಂದ್ರ ಯತಿಗಳು ಉಡುಪಿ ಸೀಮೆಗೆ ಕೊಂಡೊಯ್ದು ಯಕ್ಷಗಾನ ರೂಪಿಸಿದರೆಂಬ ಬಗ್ಗೆಯೂ ಇತಿಹಾಸ ಹೇಳುತ್ತದೆ.

ಮಹಾದೇವ ಹಡಪದ

ಈ ಸೀಮೆಯ ದರೋಜಿಯ ಬುರ್ರಕತೆ, ಗೊಂದಲಿಗರ ಹಾಡು, ಕೊಟ್ಟೂರಿನ ಗೊಂಬೇಯಾಟ, ಹಳ್ಳಿಹಳ್ಳಿಗಳಲ್ಲಿ ನಡೆಯುವ ಆಹೋರಾತ್ರಿಯ ಬಯಲಾಟಗಳು ಸಾಕಷ್ಟು ಪ್ರಮಾಣದಲ್ಲಿ ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿವೆ. ಗರುಡ ಸದಾಶಿವರಾಯರು, ಜೋಳದರಾಶಿ ದೊಡ್ಡನಗೌಡರು, ಹಣ್ಣಿ ವೀರಭದ್ರಪ್ಪ, ದುರ್ಗಾದಾಸರು ಬಳ್ಳಾರಿ ರಾಘವಾಚಾರರು ಹೀಗೆ ಸಾಲುಸಾಲು ವೃತ್ತಿರಂಗಭೂಮಿಯ ಮೇರುನಟರು ಇದೇ ಸೀಮೆಯವರು. ಇನ್ನು ನಾಟಕದ ನಟನಟಿಯರಿಗೇ ಹೆಸರಾದ ಊರುಗಳೂ ಈ ಸೀಮೆಯಲ್ಲಿವೆ.

ಮರಿಯಮ್ಮನಹಳ್ಳಿ, ಹೂವಿನಹಡಗಲಿ, ಬಳ್ಳಾರಿಗಳಲ್ಲಿ ಅಸಂಖ್ಯಾತ ಕಲಾವಿದರಿದ್ದಾರೆ. ರಾಜಕಾರಣದಲ್ಲಿದ್ದೂ ನಾಟಕರಂಗದೊಂದಿಗೆ ನಂಟನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ ಈ ನಾಡಿನ ಗೃಹಮಂತ್ರಿಗಳೂ ಆಗಿದ್ದ ದಿ. ಎಂ.ಪಿ. ಪ್ರಕಾಶ ಅವರು ಇದೇ ನಾಡಿನ ಸಾಂಸ್ಕೃತಿಕ ಲೋಕದಲ್ಲಿ ಹಂಪಿ ಉತ್ಸವ ಆರಂಭಿಸುವ ಮೂಲಕ ಉತ್ಸವಗಳದ್ದೊಂದು ಪರಂಪರೆಯನ್ನೇ ಆರಂಭಿಸಿದ್ದರು. ಅದಕ್ಕೂ ಮಿಗಿಲಾಗಿ ಕನ್ನಡ ಭಾಷೆಗೆ ಸೀಮಿತವಾದ ವಿಶ್ವವಿದ್ಯಾಲಯವೂ ಹಂಪಿಯಲ್ಲಿಯೇ ಇದೆ.

ಇಷ್ಟೆಲ್ಲ ಕನ್ನಡ ನಾಡಿಗೆ ಕೊಡುಗೆ ಕೊಟ್ಟಿರುವ ಈ ಸೀಮೆಯಲ್ಲೊಂದು ಸಾಂಸ್ಕೃತಿಕ ಕೇಂದ್ರದ ಅಗತ್ಯವಿದೆ.
ಈ ಭಾಗಕ್ಕೆ ಸಂಬಂಧಿಸಿದ ರಂಗಾಯಣವು ದೂರದ ಕಲಬುರ್ಗಿಯಲ್ಲಿದ್ದು ಅದು ಯಾವ ರೀತಿಯಲ್ಲೂ ಬಳ್ಳಾರಿ-ಕೊಪ್ಪಳ ರಾಯಚೂರು ಜಿಲ್ಲೆಗಳನ್ನು ಪರಿಗಣಿಸಿ ಸ್ವತಂತ್ರವಾದ ಕಾರ್ಯಕ್ರಮ ರೂಪಿಸಿದ್ದ ದಾಖಲೆ ಇಲ್ಲ. ಅಲ್ಲದೆ ಇತ್ತ ಧಾರವಾಡ ರಂಗಾಯಣವೂ, ಶಿವಮೊಗ್ಗ ರಂಗಾಯಣಗಳೂ ಸಮಾನ ದೂರದಲ್ಲಿವೆ.

ಕರ್ನಾಟಕದ ಮೇರು ವೃತ್ತಿಕಲಾವಿದರು, ದೊಡ್ಡಾಟ ಕಲಾವಿದರು, ಹೆಸರಾಂತ ಸಾಹಿತಿಗಳಿರುವ, ಸಾಕಷ್ಟು ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿರುವ ಮತ್ತು ವಂಶಪಾರಂಪರ್ಯವಾಗಿ ಕೆಲವು ಕುಟುಂಬಗಳು ಈಗಲೂ ಕಲಾಪ್ರಕಾರಗಳನ್ನು ಈ ಭಾಗದಲ್ಲಿ ಪೋಷಿಸಿಕೊಂಡು ಬಂದಿವೆ. ಈ ಎಲ್ಲ ಹಿನ್ನೆಲೆ ಈ ಸೀಮೆಗಿದ್ದರೂ ಸಾಂಸ್ಕೃತಿಕವಾದ ಅಧ್ಯಯನಕ್ಕೊಂದು ರಂಗಾಯಣ ಇಲ್ಲದಿರುವುದು ಬೇಸರದ ಸಂಗತಿ. ಇಂಥ ನಾಡನ್ನು ಕಡೆಗಣಿಸಿ ದೂರದೂರದಲ್ಲಿ ರಂಗಾಯಣ ಸ್ಥಾಪಿಸಿದ್ದು ಸ್ಥಳಿಯವಾಗಿ ಸಾಂಸ್ಕೃತಿಕ ಲೋಕಕ್ಕೆ ಅಡಚಣೆಯಾಗಿದೆ.

ದಯಮಾಡಿ ಸರಕಾರವು ಈ ಭಾಗದ ರಂಗಭೂಮಿಗೆ ಜೀವ ಕೊಡಲು ಹಂಪಿಯನ್ನು ಕೇಂದ್ರವಾಗಿಸಿಕೊಂಡು ಒಂದು ರಂಗಾಯಣವನ್ನು ಸ್ಥಾಪಿಸಿದರೆ ಈ ಗಡಿನಾಡ ಭಾಗದಲ್ಲಿ ರಂಗಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕವಾದ ವಾತಾವರಣ ಕಟ್ಟಲು ಹೆಚ್ಚು ಉಪಯೋಗವಾಗುತ್ತದೆ.

ಮಹಾದೇವ ಹಡಪದ, ರಂಗ ನಿರ್ದೇಶಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...