Homeಕರ್ನಾಟಕಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

ಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

- Advertisement -
- Advertisement -

ವಿಜಯನಗರ ಸಾಮ್ರಾಜ್ಯ ಎನ್ನುವುದು ಕನ್ನಡ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ ಭಾಷೆಗೆ ಸಂಬಂಧಿಸಿ ಮತ್ತೆ ಮತ್ತೆ ಪ್ರಸ್ತಾಪವಾಗುವ ಇತಿಹಾಸವುಳ್ಳ ನಾಡಾಗಿದೆ. ಈ ಮಧ್ಯಕರ್ನಾಟಕದ ತುದಿಯಲ್ಲಿರುವ ಈ ವಿಜಯನಗರಕ್ಕೊಂದು (ಹಂಪಿ) ರಂಗಾಯಣ ಅವಶ್ಯಕತೆಯಿದೆ.

“ಹಂಪಿಯ ಸುತ್ತಮುತ್ತಲಿನ ದೊಡ್ಡಾಟದಲ್ಲಿ ಹಾಡುತ್ತಿದ್ದ ಧಾಟಿಗಳು ಹಾಡಿನ‌ಮಟ್ಟುಗಳ ಪ್ರಭಾವ ಆರಂಭದ ತೆಲಗು ಸಿನಿಮಾಗಳ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಆಗಿತ್ತು..” ಎಂಬ ಮಾತನ್ನು ನನ್ನ ಗುರುಗಳಾದ ಬಸವರಾಜ ಮಲಶೆಟ್ಟರ್ ಸರ್ ಆಗಾಗ ಹೇಳುತ್ತಿದ್ದರು. ಅಲ್ಲದೆ ವಿಜಯನಗರದಲ್ಲಿಯೇ ಮೊಟ್ಟಮೊದಲು ಯಕ್ಕಲಗಾಣ ಪ್ರದರ್ಶನ ಆಗುತ್ತಿತ್ತು ಎಂಬ ಮಾತನ್ನು ನೆನಪಿಸುತ್ತಿದ್ದರು. ಮತ್ತೂ ಇಂದಿನ ಯಕ್ಷಗಾನ ಕಲಾಪ್ರಕಾರವನ್ನು ಇದೇ ಸಾಮ್ರಾಜ್ಯದ ಕೂಚಿಪುಡಿ ಗ್ರಾಮದ ಸಿದ್ಧೇಂದ್ರ ಯತಿಗಳು ಉಡುಪಿ ಸೀಮೆಗೆ ಕೊಂಡೊಯ್ದು ಯಕ್ಷಗಾನ ರೂಪಿಸಿದರೆಂಬ ಬಗ್ಗೆಯೂ ಇತಿಹಾಸ ಹೇಳುತ್ತದೆ.

ಮಹಾದೇವ ಹಡಪದ

ಈ ಸೀಮೆಯ ದರೋಜಿಯ ಬುರ್ರಕತೆ, ಗೊಂದಲಿಗರ ಹಾಡು, ಕೊಟ್ಟೂರಿನ ಗೊಂಬೇಯಾಟ, ಹಳ್ಳಿಹಳ್ಳಿಗಳಲ್ಲಿ ನಡೆಯುವ ಆಹೋರಾತ್ರಿಯ ಬಯಲಾಟಗಳು ಸಾಕಷ್ಟು ಪ್ರಮಾಣದಲ್ಲಿ ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿವೆ. ಗರುಡ ಸದಾಶಿವರಾಯರು, ಜೋಳದರಾಶಿ ದೊಡ್ಡನಗೌಡರು, ಹಣ್ಣಿ ವೀರಭದ್ರಪ್ಪ, ದುರ್ಗಾದಾಸರು ಬಳ್ಳಾರಿ ರಾಘವಾಚಾರರು ಹೀಗೆ ಸಾಲುಸಾಲು ವೃತ್ತಿರಂಗಭೂಮಿಯ ಮೇರುನಟರು ಇದೇ ಸೀಮೆಯವರು. ಇನ್ನು ನಾಟಕದ ನಟನಟಿಯರಿಗೇ ಹೆಸರಾದ ಊರುಗಳೂ ಈ ಸೀಮೆಯಲ್ಲಿವೆ.

ಮರಿಯಮ್ಮನಹಳ್ಳಿ, ಹೂವಿನಹಡಗಲಿ, ಬಳ್ಳಾರಿಗಳಲ್ಲಿ ಅಸಂಖ್ಯಾತ ಕಲಾವಿದರಿದ್ದಾರೆ. ರಾಜಕಾರಣದಲ್ಲಿದ್ದೂ ನಾಟಕರಂಗದೊಂದಿಗೆ ನಂಟನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ ಈ ನಾಡಿನ ಗೃಹಮಂತ್ರಿಗಳೂ ಆಗಿದ್ದ ದಿ. ಎಂ.ಪಿ. ಪ್ರಕಾಶ ಅವರು ಇದೇ ನಾಡಿನ ಸಾಂಸ್ಕೃತಿಕ ಲೋಕದಲ್ಲಿ ಹಂಪಿ ಉತ್ಸವ ಆರಂಭಿಸುವ ಮೂಲಕ ಉತ್ಸವಗಳದ್ದೊಂದು ಪರಂಪರೆಯನ್ನೇ ಆರಂಭಿಸಿದ್ದರು. ಅದಕ್ಕೂ ಮಿಗಿಲಾಗಿ ಕನ್ನಡ ಭಾಷೆಗೆ ಸೀಮಿತವಾದ ವಿಶ್ವವಿದ್ಯಾಲಯವೂ ಹಂಪಿಯಲ್ಲಿಯೇ ಇದೆ.

ಇಷ್ಟೆಲ್ಲ ಕನ್ನಡ ನಾಡಿಗೆ ಕೊಡುಗೆ ಕೊಟ್ಟಿರುವ ಈ ಸೀಮೆಯಲ್ಲೊಂದು ಸಾಂಸ್ಕೃತಿಕ ಕೇಂದ್ರದ ಅಗತ್ಯವಿದೆ.
ಈ ಭಾಗಕ್ಕೆ ಸಂಬಂಧಿಸಿದ ರಂಗಾಯಣವು ದೂರದ ಕಲಬುರ್ಗಿಯಲ್ಲಿದ್ದು ಅದು ಯಾವ ರೀತಿಯಲ್ಲೂ ಬಳ್ಳಾರಿ-ಕೊಪ್ಪಳ ರಾಯಚೂರು ಜಿಲ್ಲೆಗಳನ್ನು ಪರಿಗಣಿಸಿ ಸ್ವತಂತ್ರವಾದ ಕಾರ್ಯಕ್ರಮ ರೂಪಿಸಿದ್ದ ದಾಖಲೆ ಇಲ್ಲ. ಅಲ್ಲದೆ ಇತ್ತ ಧಾರವಾಡ ರಂಗಾಯಣವೂ, ಶಿವಮೊಗ್ಗ ರಂಗಾಯಣಗಳೂ ಸಮಾನ ದೂರದಲ್ಲಿವೆ.

ಕರ್ನಾಟಕದ ಮೇರು ವೃತ್ತಿಕಲಾವಿದರು, ದೊಡ್ಡಾಟ ಕಲಾವಿದರು, ಹೆಸರಾಂತ ಸಾಹಿತಿಗಳಿರುವ, ಸಾಕಷ್ಟು ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿರುವ ಮತ್ತು ವಂಶಪಾರಂಪರ್ಯವಾಗಿ ಕೆಲವು ಕುಟುಂಬಗಳು ಈಗಲೂ ಕಲಾಪ್ರಕಾರಗಳನ್ನು ಈ ಭಾಗದಲ್ಲಿ ಪೋಷಿಸಿಕೊಂಡು ಬಂದಿವೆ. ಈ ಎಲ್ಲ ಹಿನ್ನೆಲೆ ಈ ಸೀಮೆಗಿದ್ದರೂ ಸಾಂಸ್ಕೃತಿಕವಾದ ಅಧ್ಯಯನಕ್ಕೊಂದು ರಂಗಾಯಣ ಇಲ್ಲದಿರುವುದು ಬೇಸರದ ಸಂಗತಿ. ಇಂಥ ನಾಡನ್ನು ಕಡೆಗಣಿಸಿ ದೂರದೂರದಲ್ಲಿ ರಂಗಾಯಣ ಸ್ಥಾಪಿಸಿದ್ದು ಸ್ಥಳಿಯವಾಗಿ ಸಾಂಸ್ಕೃತಿಕ ಲೋಕಕ್ಕೆ ಅಡಚಣೆಯಾಗಿದೆ.

ದಯಮಾಡಿ ಸರಕಾರವು ಈ ಭಾಗದ ರಂಗಭೂಮಿಗೆ ಜೀವ ಕೊಡಲು ಹಂಪಿಯನ್ನು ಕೇಂದ್ರವಾಗಿಸಿಕೊಂಡು ಒಂದು ರಂಗಾಯಣವನ್ನು ಸ್ಥಾಪಿಸಿದರೆ ಈ ಗಡಿನಾಡ ಭಾಗದಲ್ಲಿ ರಂಗಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕವಾದ ವಾತಾವರಣ ಕಟ್ಟಲು ಹೆಚ್ಚು ಉಪಯೋಗವಾಗುತ್ತದೆ.

ಮಹಾದೇವ ಹಡಪದ, ರಂಗ ನಿರ್ದೇಶಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...